ಕಲಬುರಗಿ, ಮೇ 13: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ನಗರದ ವರ್ತುಲ ರಸ್ತೆಯಲ್ಲಿರುವ ಜಫ್ರಾಬಾದ್ ಗ್ರಾಮದ ಬಳಿ ನಿರ್ಮಾಣವಾಗುತ್ತಿರುವ ಹೈ-ಟೆಕ್ ರೇಷ್ಮೆ ಗೂಡು ಮಾರುಕಟ್ಟೆ (ರೇಷ್ಮೆ ಭವನ) ಕಟ್ಟಡವನ್ನು ಮಂಗಳವಾರ ಪರಿಶೀಲಿಸಿದರು.
ಪರಿಶೀಲನೆಯ ಸಂದರ್ಭದಲ್ಲಿ ಸಚಿವ ಖರ್ಗೆ ಅವರು ಅಧಿಕಾರಿಗಳಿಂದ ಕಟ್ಟಡ ನಿರ್ಮಾಣದ ಪ್ರಗತಿಯ ಬಗ್ಗೆ ಮಾಹಿತಿ ಕಲೆಹಾಕಿದರು. ಈ ಆಧುನಿಕ ಕಟ್ಟಡವು ರೇಷ್ಮೆ ಗೂಡುಗಳ ವ್ಯಾಪಾರಕ್ಕೆ ಸುಸಜ್ಜಿತ ಮಾರುಕಟ್ಟೆಯನ್ನು ಒದಗಿಸುವ ಉದ್ದೇಶದಿಂದ ನಿರ್ಮಾಣಗೊಳ್ಳುತ್ತಿದೆ.
ಈ ಸಂದರ್ಭದಲ್ಲಿ ಸಚಿವ ಡಾ. ಶರಣಪ್ರಕಾಶ್ ಪಾಟೀಲ್, ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್, ಪೊಲೀಸ್ ಕಮೀಷನರ್ ಡಾ. ಶರಣಪ್ಪ, ಎಸ್ಪಿ ಅಡ್ಡೂರು ಶ್ರೀನಿವಾಸನ್ ಹಾಗೂ ರೇಷ್ಮೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
Discover more from amiroNEWS
Subscribe to get the latest posts sent to your email.