ಬೆಂಗಳೂರು:ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ) ಪ್ರಕಟಿಸಿದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಯಲ್ಲಿನ ಪತ್ರಾಂಕಿತ ವ್ಯವಸ್ಥಾಪಕರು / ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಹುದ್ದೆಗಳಿಗೆ ಸಂಬಂಧಿಸಿದ ಪತ್ರಿಕೆ-2 ನಿರ್ದಿಷ್ಟ ಪತ್ರಿಕೆಯ ಸ್ಪರ್ಧಾತ್ಮಕ ಪರೀಕ್ಷೆ ಮಾರ್ಚ್ 2ರಂದು ನಡೆಯಲಿದೆ.
ಇದೇ ವೇಳೆ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಯಲ್ಲಿನ ಸಹಾಯಕ ಇಂಜಿನಿಯರ್ (ಸಿವಿಲ್) (ವಿಭಾಗ-1) ಹುದ್ದೆಗಳಿಗಾಗಿ ಪತ್ರಿಕೆ-2 ನಿರ್ದಿಷ್ಟ ಪತ್ರಿಕೆಯ ಸ್ಪರ್ಧಾತ್ಮಕ ಪರೀಕ್ಷೆ ಮಾರ್ಚ್ 4ರಂದು ನಡೆಸಲು ಆಯೋಗದಿಂದ ವೇಳಾಪಟ್ಟಿ ಪ್ರಕಟಿಸಲಾಗಿದೆ.
ಈ ಪರೀಕ್ಷೆಗಳಿಗೆ ಸಂಬಂಧಿಸಿದ ಪ್ರವೇಶ ಪತ್ರಗಳು ಫೆಬ್ರವರಿ 21ರಿಂದ ಕೆಪಿಎಸ್ಸಿ ವೆಬ್ಸೈಟ್ http://kpsc.kar.nic.in ನಲ್ಲಿ ಲಭ್ಯವಿದ್ದು, ಅರ್ಹ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿಕೊಂಡು ಪರೀಕ್ಷೆಗೆ ಹಾಜರಾಗಬಹುದು ಎಂದು ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Discover more from amiroNEWS
Subscribe to get the latest posts sent to your email.