ಬೆಂಗಳೂರು:ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ) ಪ್ರಕಟಿಸಿದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಯಲ್ಲಿನ ಪತ್ರಾಂಕಿತ ವ್ಯವಸ್ಥಾಪಕರು / ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಹುದ್ದೆಗಳಿಗೆ ಸಂಬಂಧಿಸಿದ ಪತ್ರಿಕೆ-2 ನಿರ್ದಿಷ್ಟ ಪತ್ರಿಕೆಯ ಸ್ಪರ್ಧಾತ್ಮಕ ಪರೀಕ್ಷೆ ಮಾರ್ಚ್ 2ರಂದು ನಡೆಯಲಿದೆ.
ಇದೇ ವೇಳೆ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಯಲ್ಲಿನ ಸಹಾಯಕ ಇಂಜಿನಿಯರ್ (ಸಿವಿಲ್) (ವಿಭಾಗ-1) ಹುದ್ದೆಗಳಿಗಾಗಿ ಪತ್ರಿಕೆ-2 ನಿರ್ದಿಷ್ಟ ಪತ್ರಿಕೆಯ ಸ್ಪರ್ಧಾತ್ಮಕ ಪರೀಕ್ಷೆ ಮಾರ್ಚ್ 4ರಂದು ನಡೆಸಲು ಆಯೋಗದಿಂದ ವೇಳಾಪಟ್ಟಿ ಪ್ರಕಟಿಸಲಾಗಿದೆ.
ಈ ಪರೀಕ್ಷೆಗಳಿಗೆ ಸಂಬಂಧಿಸಿದ ಪ್ರವೇಶ ಪತ್ರಗಳು ಫೆಬ್ರವರಿ 21ರಿಂದ ಕೆಪಿಎಸ್ಸಿ ವೆಬ್ಸೈಟ್ http://kpsc.kar.nic.in ನಲ್ಲಿ ಲಭ್ಯವಿದ್ದು, ಅರ್ಹ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿಕೊಂಡು ಪರೀಕ್ಷೆಗೆ ಹಾಜರಾಗಬಹುದು ಎಂದು ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.