Monday, October 20, 2025
  • Login
  • Register
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
Home Lifestyle Culture

ಗುರುವಂದನೆ: ಶಿಕ್ಷಕರು ಸಮಾಜದ ಸಾಂಸ್ಕೃತಿಕ ರಾಯಭಾರಿಗಳು – ಕೆ.ವಿ.ಪ್ರಭಾಕರ್

SP by SP
6 months ago
Reading Time: 1 min read
A A
18
SHARES
50
VIEWS

ಶಿಕ್ಷಕರು ಮಕ್ಕಳಲ್ಲಿ ಮತ್ತು ಮಕ್ಕಳ ಮೂಲಕ ಸಮಾಜದಲ್ಲಿ ಸಹೃದಯತೆ, ಸಮನ್ವಯತೆ, ಸಹಿಷ್ಣುತೆ, ಸದಾಚಾರ, ಸದ್ವಿಚಾರ, ಸಹಬಾಳ್ವೆ ಮತ್ತು ಸದಭಿರುಚಿಯನ್ನು ರೂಪಿಸುವ ಸಾಮಾಜಿಕ ರಾಯಭಾರಿಗಳು. ಇಂತಹ ಶಿಕ್ಷಕರನ್ನು ವಂದಿಸುವುದು ಉತ್ತಮ ಸಂಸ್ಕಾರವೆಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಹೇಳಿದರು.

ಮೀಡಿಯಾ ಕನೆಕ್ಟ್ ಮತ್ತು ಪುಣ್ಯ ಫೌಂಡೇಷನ್ ಸಹಯೋಗದಲ್ಲಿ ವಿಧ್ಯಾಭವನದಲ್ಲಿ ಆಯೋಜಿಸಲಾದ ಗುರುವಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ತುಮಕೂರಿನ ಇಡಗೂರು ಸರ್ಕಾರಿ ಶಾಲೆಯ ಶಿಕ್ಷಕರು ಸಮಾಜಮುಖೀ ಪ್ರಜೆಗಳನ್ನು ರೂಪಿಸಿ ಸಮಾಜಕ್ಕೆ ಒಪ್ಪಿಸಿದ್ದಾರೆ ಎಂದರು. “25 ವರ್ಷಗಳ ಹಿಂದೆ ಶಿಕ್ಷಕರಿಂದ ಶಿಕ್ಷಣ ಪಡೆದ ವಿದ್ಯಾರ್ಥಿಗಳು ಇಂದು ತಮ್ಮ ಗುರುಗಳನ್ನು ವಂದಿಸುವ ಮೂಲಕ ತಮ್ಮ ಸಂಸ್ಕಾರವನ್ನು ಪ್ರದರ್ಶಿಸುತ್ತಿದ್ದಾರೆ,” ಎಂದು ಅವರು ತಿಳಿಸಿದರು.

“ರೈತರು, ಶಿಕ್ಷಕರು ಮತ್ತು ಸೈನಿಕರು ಆರೋಗ್ಯಕರ ಹಾಗೂ ನೆಮ್ಮದಿಯ ಸಮಾಜದ ಸೇನಾನಿಗಳು ಎಂದು ಮುಖ್ಯಮಂತ್ರಿಗಳು ಯಾವಾಗಲೂ ಹೇಳುತ್ತಾರೆ. ಇದಕ್ಕೆ ಐತಿಹಾಸಿಕ ಉದಾಹರಣೆಯೊಂದನ್ನು ನೆನಪಿಸುತ್ತೇನೆ,” ಎಂದ ಅವರು, ಸರ್ವಾಧಿಕಾರಿ ಹಿಟ್ಲರ್‌ನ ಪ್ರಸಂಗವನ್ನು ಉಲ್ಲೇಖಿಸಿದರು. “ಯುದ್ಧದಾಹಿಯಾಗಿದ್ದ ಹಿಟ್ಲರ್ ಯಾವುದೇ ದೇಶವನ್ನು ವಶಪಡಿಸಿಕೊಂಡಾಗ ಮೊದಲಿಗೆ ಶಿಕ್ಷಕರನ್ನು ಬಂಧಿಸುತ್ತಿದ್ದ. ಏಕೆಂದರೆ, ಶಿಕ್ಷಕರು ಮಕ್ಕಳನ್ನು ಮತ್ತು ಸಮಾಜವನ್ನು ಪ್ರಭಾವಿಸಿ, ಹೋರಾಟಗಳನ್ನು ರೂಪಿಸುವ ಸಾಮರ್ಥ್ಯ ಹೊಂದಿದ್ದಾರೆ ಎಂಬ ತಿಳಿವಳಿಕೆ ಮತ್ತು ಭಯ ಎರಡೂ ಹಿಟ್ಲರ್‌ಗೆ ಇತ್ತು,” ಎಂದರು.

ಭಾರತದ ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಮಹಾತ್ಮ ಗಾಂಧಿಯವರ ಚಿಂತನೆಗಳಿಗೆ ಮೊದಲು ಸ್ಪಂದಿಸಿದವರು ಶಾಲಾ ಶಿಕ್ಷಕರೇ ಎಂದ ಅವರು, ಸಮಾಜವಾದಿ ಹೋರಾಟಗಾರ ಶಾಂತವೇರಿ ಗೋಪಾಲಗೌಡರ ಉದಾಹರಣೆಯನ್ನು ನೀಡಿದರು. “ಗೋಪಾಲಗೌಡರು ತಮ್ಮ ಚಿಂತನೆಗಳನ್ನು ಜನರಿಗೆ ತಲುಪಿಸುವ ಮೊದಲು ಶಾಲೆಗಳಿಗೆ ತೆರಳಿ ಶಿಕ್ಷಕರು ಮತ್ತು ಮಕ್ಕಳಿಗೆ ವಿವರಿಸುತ್ತಿದ್ದರು. ಶಿಕ್ಷಕರು ಮತ್ತು ಮಕ್ಕಳ ಮೂಲಕ ಪೋಷಕರಿಗೆ ಸಂದೇಶ ತಲುಪುತ್ತಿತ್ತು,” ಎಂದು ವಿವರಿಸಿದರು.

ತಂತ್ರಜ್ಞಾನ ಮತ್ತು ಶಿಕ್ಷಣದ ಸವಾಲುಗಳು
ತಂತ್ರಜ್ಞಾನದ ಬೆಳವಣಿಗೆಯಿಂದ ಸಮಾಜ ವೇಗವಾಗಿ ಬದಲಾಗುತ್ತಿದ್ದು, ಶಿಕ್ಷಣದ ಅಗತ್ಯ ಮತ್ತು ಮಹತ್ವವೂ ರೂಪಾಂತರಗೊಳ್ಳುತ್ತಿದೆ ಎಂದ ಅವರು, “ಕಾರ್ಪೋರೇಟ್ ಜಗತ್ತಿನ ಮಾರುಕಟ್ಟೆಗೆ ಬೇಕಾದ ‘ಮಾಲು’ಗಳನ್ನು ಸೃಷ್ಟಿಸುವ ಒತ್ತಡವನ್ನು ಶಿಕ್ಷಕರ ಮೇಲೆ ಹೇರಲಾಗುತ್ತಿದೆ. ಈ ಸವಾಲನ್ನು ಸಮನ್ವಯದಿಂದ ಎದುರಿಸಬೇಕು. ರಾಜಕೀಯ ಮತ್ತು ಕಾರ್ಪೋರೇಟ್ ಒತ್ತಡಗಳಿಗೆ ಶಿಕ್ಷಕರು ಮಣಿಯಬಾರದು,” ಎಂದು ಕರೆ ನೀಡಿದರು.

ಸರ್ಕಾರಿ ಶಾಲೆಗಳ ಶಿಕ್ಷಕರ ಗುಣಮಟ್ಟ
ಸರ್ಕಾರಿ ಶಾಲೆಗಳ ಕುರಿತು ಮಾತನಾಡಿದ ಅವರು, “ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ಖಾಸಗಿ ಶಾಲೆಗಳಿಗೆ ಹೋಲಿಸಿದರೆ ಸರ್ಕಾರಿ ಶಾಲೆಗಳಲ್ಲಿ ಅತ್ಯಂತ ಕಡಿಮೆ. ಸರ್ಕಾರಿ ಶಾಲೆಗಳ ಶಿಕ್ಷಕರು ಲಿಂಗ ಸೂಕ್ಷ್ಮತೆ, ಸಹಬಾಳ್ವೆ ಮತ್ತು ಸಹಿಷ್ಣುತೆಯನ್ನು ಬೆಳೆಸುವಲ್ಲಿ ಮುಂಚೂಣಿಯಲ್ಲಿದ್ದಾರೆ. ಖಾಸಗಿ ಶಾಲೆಗಳ ಕಟ್ಟಡದ ಗುಣಮಟ್ಟ ಉತ್ತಮವಾದರೂ, ಸರ್ಕಾರಿ ಶಾಲೆಗಳ ಶಿಕ್ಷಕರ ಗುಣಮಟ್ಟ ಅತ್ಯುನ್ನತವಾಗಿದೆ,” ಎಂದು ಶ್ಲಾಘಿಸಿದರು.

‘ನನ್ನ ಶಾಲೆ ನನ್ನ ಜವಾಬ್ದಾರಿ’ ಕಾರ್ಯಕ್ರಮ
ಸರ್ಕಾರದ ‘ನನ್ನ ಶಾಲೆ ನನ್ನ ಜವಾಬ್ದಾರಿ’ ಕಾರ್ಯಕ್ರಮವನ್ನು ಉಲ್ಲೇಖಿಸಿದ ಅವರು, “ಸರ್ಕಾರಿ ಶಾಲೆಗಳಲ್ಲಿ ಓದಿದ ಲಕ್ಷಾಂತರ ಮಂದಿ ತಾವು ಓದಿದ ಶಾಲೆಗಳಿಗೆ ನೆರವು ನೀಡುತ್ತಿದ್ದಾರೆ. ಕೆಲವರು ಶಾಲೆಗಳನ್ನು ದತ್ತು ಪಡೆದಿದ್ದಾರೆ, ಕೊಠಡಿಗಳನ್ನು ಕಟ್ಟಿಸಿದ್ದಾರೆ. ಇಂತಹ ಕಾಳಜಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಂದಲೇ ಹೆಚ್ಚಾಗಿ ವ್ಯಕ್ತವಾಗುತ್ತದೆ,” ಎಂದರು. ತಾವು ಕೋಲಾರದ ಸರ್ಕಾರಿ ಶಾಲೆಯಲ್ಲಿ ಓದಿದ್ದು, ಆ ಶಾಲೆಗೆ ಅಪಾರ ನೆರವು ನೀಡಿರುವುದಾಗಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ತಮ್ಮ ಶಾಲೆಗೆ ಸಹಾಯ ಮಾಡಿರುವುದನ್ನು ಸ್ಮರಿಸಿದರು.

ಧನ್ಯವಾದ ಸಲ್ಲಿಕೆ
ಕಾರ್ಯಕ್ರಮಕ್ಕೆ ಆಹ್ವಾನಿಸಿ ತಮ್ಮ ಶಾಲೆ ಮತ್ತು ಶಿಕ್ಷಕರನ್ನು ಸ್ಮರಿಸಲು ಅವಕಾಶ ಮಾಡಿಕೊಟ್ಟ ಮೀಡಿಯಾ ಕನೆಕ್ಟ್‌ನ ದಿವ್ಯಾ ರಂಗೇನಹಳ್ಳಿ ಮತ್ತು ಪುಣ್ಯ ಫೌಂಡೇಷನ್‌ಗೆ ಕೆ.ವಿ.ಪ್ರಭಾಕರ್ ಧನ್ಯವಾದ ಅರ್ಪಿಸಿದರು.

ಆದಿಚುಂಚನಗಿರಿ ಮಹಾಸಂಸ್ಥಾನದ ಜಗದ್ಗುರು ಶ್ರೀ ನಿರ್ಮಲಾನಂದ ಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಸತಿ ಸಚಿವರ ಮಾಧ್ಯಮ ಸಂಯೋಜಕ ಲಕ್ಷ್ಮೀನಾರಾಯಣ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Tags: Bureau Newsnewnewsಅವಕಾಶಆರೋಗ್ಯಕಾರ್ಯಕ್ರಮಕ್ರಮಡಿತಂತ್ರಜ್ಞಾನತುಮಕೂರಿನದಾರಿದೇಶನೆಮ್ಮದಿಪ್ರಕರಣಗಳುಬೆಂಗಳೂರುಬೆಳವಣಿಗೆಬೆಳೆಭಾರತಮಕ್ಕಳಮತ್ತುಮಹಾಮಾರುಕಟ್ಟೆಮೇಲಿನಯುದ್ಧಯೋಗರಾಜಕೀಯರೈತರೋಗಲಿಂಗವಿದ್ಯಾರ್ಥಿಶಾಲೆಗಳಶಿಕ್ಷಕರಶಿಕ್ಷಣಸಚಿವಸರ್ಕಾರಿಸಹಾಯಸಾಂಸ್ಕೃತಿಕಸಿದ್ದರಾಮಯ್ಯಸ್ವಾತಂತ್ರ್ಯಹೃದಯಹೋರಾಟ

Subscribe Now and Never Miss an Update!

Unsubscribe
  • Trending
  • Comments
  • Latest

ಮಳೆ ವೇಳೆ ರಸ್ತೆಗೆ ಡಾಂಬರು ಹಾಕಲು ವೆಟ್ ಮಿಕ್ಸಿಂಗ್ ವಿಧಾನ ಬಳಕೆ: ಡಿಸಿಎಂ ಡಿ.ಕೆ.ಶಿವಕುಮಾರ್

4

ಬುಲ್ಸ್‌ಗೆ ಸವಾಲಾಗದ ಬೆಂಗಾಲ್‌ಅಲಿರೇಜಾ ಮತ್ತೊಮ್ಮೆ ಮಿಂಚು; ವಾರಿಯರ್ಸ್‌ ವಿರುದ್ಧ 43-32 ಅಂತರದ ಭರ್ಜರಿ ಗೆಲುವು

4

Invest Karnataka 2025 Kicks Off with a Grand Opening, Showcasing Innovation, Investments, and Global Collaborations

3

ಭಾರತ vs ಇಂಗ್ಲೆಂಡ್ 3ನೇ ಏಕದಿನ: 142 ರನ್ ಭರ್ಜರಿ ಜಯ, 3-0 ಸರಣಿ ಕ್ಲೀನ್ ಸ್ವೀಪ್!

2

ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥಸಂಚಲನಕ್ಕೆ ಅನುಮತಿ ನಿರಾಕರಣೆ: ಛಲವಾದಿ ನಾರಾಯಣಸ್ವಾಮಿ ಆಕ್ಷೇಪ

October 19, 2025

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ₹56,000 ಕೋಟಿ ಖರ್ಚು, ಮೂಲಸೌಕರ್ಯಕ್ಕೆ ₹5,229 ಕೋಟಿ ಕಡಿತ: CAG ವರದಿ

October 19, 2025

ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಅನುಮತಿ, ಕಾಂಗ್ರೆಸ್‌ಗೆ ಹೈಕೋರ್ಟ್‌ನಿಂದ ತೀವ್ರ ಮುಖಭಂಗ: ಬಿ.ವೈ ವಿಜಯೇಂದ್ರ

October 19, 2025

ಗುತ್ತಿಗೆದಾರರ ಬಾಕಿ ಬಿಲ್ ಕೇಳಿದರೆ ಧಮ್ಕಿಯೇ?: ಡಿಕೆ ಶಿವಕುಮಾರ್‌ಗೆ ಆರ್. ಅಶೋಕ್ ಪ್ರಶ್ನೆ

October 19, 2025

Recent News

ರಾಷ್ಟ್ರೀಯ ಸುರಕ್ಷಾ ರಕ್ಷಣಾ ಸೇನೆಯ ೪೧ನೇ ಸ್ಥಾಪನಾ ದಿನಾಚರಣೆ:

October 14, 2025

ಐಐಟಿ ಧಾರವಾಡದಲ್ಲಿ ಧರ್ತಿ ಬಯೋನೆಸ್ಟ್ ಇಂಕ್ಯೂಬೇಶನ್ ಕೇಂದ್ರ ಉದ್ಘಾಟನೆ:

October 14, 2025

ಬುಲ್ಸ್‌ಗೆ ಸವಾಲಾಗದ ಬೆಂಗಾಲ್‌ಅಲಿರೇಜಾ ಮತ್ತೊಮ್ಮೆ ಮಿಂಚು; ವಾರಿಯರ್ಸ್‌ ವಿರುದ್ಧ 43-32 ಅಂತರದ ಭರ್ಜರಿ ಗೆಲುವು

October 13, 2025

ತಿಪಟೂರಿನಲ್ಲಿ ಪ್ರಧಾನಮಂತ್ರಿ ಧನ ಧಾನ್ಯ ಕೃಷಿ ಯೋಜನೆ ಹಾಗೂ ದ್ವಿದಳ ರಾಷ್ಟ್ರೀಯ ಯೋಜನೆಗೆ ಕೇಂದ್ರ ಸಚಿವ ವಿ. ಸೋಮಣ್ಣ ಚಾಲನೆ

October 11, 2025
  • Home
  • Privacy Policy
  • About Us
  • Advertise with us
  • Contact Us
Whatesapp +8050611655

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.

Welcome Back!

Login to your account below

Forgotten Password? Sign Up

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In
error:
  • Login
  • Sign Up
No Result
View All Result
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
News Post

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.