Tuesday, October 21, 2025
  • Login
  • Register
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
Home State Karnataka News

ಜಿಎಸ್‌ಟಿಯಿಂದ ಸಣ್ಣ ವ್ಯಾಪಾರಿಗಳಿಗೆ ತೊಂದರೆ: ಡಿಸಿಎಂ ಡಿ.ಕೆ. ಶಿವಕುಮಾರ್‌ರಿಂದ ಕೇಂದ್ರ ಬಿಜೆಪಿ ಸರಕಾರದ ವಿರುದ್ಧ ವಾಗ್ದಾಳಿ

PREM SHEKHAR PV by PREM SHEKHAR PV
3 months ago
Reading Time: 1 min read
A A
18
SHARES
50
VIEWS

ಹೊಸಕೋಟೆ: ಕೇಂದ್ರ ಬಿಜೆಪಿ ಸರಕಾರದ ಜಿಎಸ್‌ಟಿ ನೀತಿಯಿಂದ ಸಣ್ಣ ಮತ್ತು ಬೀದಿಬದಿ ವ್ಯಾಪಾರಿಗಳಿಗೆ ಹಾಗೂ ಬಡವರಿಗೆ ತೊಂದರೆಯಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಆರೋಪಿಸಿದ್ದಾರೆ. ಭಾನುವಾರ ಹೊಸಕೋಟೆಯಲ್ಲಿ ನಡೆದ ಇ-ಸ್ವತ್ತು ಹಂಚಿಕೆ ಮತ್ತು ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸೌಲಭ್ಯ ವಿತರಣೆ ಕಾರ್ಯಕ್ರಮದ ಉದ್ಘಾಟನೆಯಲ್ಲಿ ಮಾತನಾಡಿದ ಅವರು, ಕೇಂದ್ರ ಸರಕಾರದ ನೀತಿಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

“40 ಲಕ್ಷ ರೂ.ಗಿಂತ ಹೆಚ್ಚಿನ ವಹಿವಾಟು ನಡೆಸಿದವರಿಗೆ, ತರಕಾರಿ, ಎಳನೀರು ವ್ಯಾಪಾರಿಗಳಿಗೆ ಜಿಎಸ್‌ಟಿ ನೋಟಿಸ್‌ ನೀಡಲಾಗಿದೆ. ಕಾಂಗ್ರೆಸ್‌ ಆಡಳಿತದಲ್ಲಿ 450 ರೂ. ಆಗಿದ್ದ ಅಡುಗೆ ಸಿಲಿಂಡರ್‌ ಬೆಲೆ ಈಗ 1,000 ರೂ. ತಲುಪಿದೆ. ಇದೇ ಕೇಂದ್ರ ಬಿಜೆಪಿ ಸರಕಾರದ ಸಾಧನೆ,” ಎಂದು ಶಿವಕುಮಾರ್‌ ವ್ಯಂಗ್ಯವಾಡಿದರು.

ಕರ್ನಾಟಕಕ್ಕೆ ಕೇಂದ್ರದಿಂದ ಸೂಕ್ತ ಅನುದಾನ ಇಲ್ಲ

ಕೇಂದ್ರ ಸರಕಾರ ಕರ್ನಾಟಕಕ್ಕೆ ಸೂಕ್ತ ಅನುದಾನ ನೀಡಿಲ್ಲ ಎಂದು ಆರೋಪಿಸಿದ ಶಿವಕುಮಾರ್‌, “ಕಳೆದ ಎರಡು ವರ್ಷಗಳಿಂದ ಅನುದಾನಕ್ಕಾಗಿ ಅರ್ಜಿ ಸಲ್ಲಿಸಿದ್ದೇವೆ. ಆದರೆ, ಒಬ್ಬ ಬಿಜೆಪಿ ಸಂಸದನೂ ಈ ಬಗ್ಗೆ ಮಾತನಾಡಿಲ್ಲ. ಕರ್ನಾಟಕದಿಂದ 100 ರೂ. ತೆರಿಗೆ ಕೊಟ್ಟರೆ, ಕೇವಲ 13 ರೂ. ಮಾತ್ರ ಮರಳಿ ಬರುತ್ತಿದೆ. ರಾಜ್ಯದ ಬಡ ಜನರ ಬಗ್ಗೆ ಬಿಜೆಪಿಗೆ ಕಾಳಜಿಯಿಲ್ಲ,” ಎಂದು ಟೀಕಿಸಿದರು.

2027ರೊಳಗೆ ಎತ್ತಿನಹೊಳೆ ನೀರು, ಮೆಟ್ರೋ ಮಂಜೂರು

“2027ರೊಳಗೆ ಬೆಂಗಳೂರು ಉತ್ತರ ಭಾಗಕ್ಕೆ ಎತ್ತಿನಹೊಳೆ ಯೋಜನೆಯಡಿ ನೀರು ತರಲು ಶಪಥ ಮಾಡಿದ್ದೇವೆ. ಇದರ ಜತೆಗೆ, ಹೊಸಕೋಟೆಗೆ ಮೆಟ್ರೋ ಮಾರ್ಗ ವಿಸ್ತರಣೆಗೆ ಡಿಪಿಆರ್‌ ತಯಾರಿಗೆ ತೀರ್ಮಾನಿಸಿದ್ದೇವೆ. ನಮ್ಮ ಅವಧಿಯೊಳಗೆ ಮೆಟ್ರೋ ಕಾಮಗಾರಿ ಮಂಜೂರಾಗಲಿದೆ,” ಎಂದು ಶಿವಕುಮಾರ್‌ ಭರವಸೆ ನೀಡಿದರು. “ಎತ್ತಿನಹೊಳೆ ಯೋಜನೆಯನ್ನು ಕಾಂಗ್ರೆಸ್‌ ಸರಕಾರವೇ ಯಶಸ್ವಿಯಾಗಿ ಜಾರಿಗೆ ತಂದಿದೆ. 40 ಮೀಟರ್‌ ಎತ್ತರದ ಸೇತುವೆ ನಿರ್ಮಿಸಿ, ಕಾಲುವೆಯ ಮೂಲಕ ನೀರು ಹರಿಸಲಾಗುತ್ತಿದೆ. ಇದು ದೇಶದ ಮಾದರಿ ಯೋಜನೆ,” ಎಂದರು.

ಕಾಂಗ್ರೆಸ್‌ ಗ್ಯಾರಂಟಿಗಳನ್ನು ಬಿಜೆಪಿ ನಕಲು

ಕಾಂಗ್ರೆಸ್‌ ಸರಕಾರದ ಗ್ಯಾರಂಟಿ ಯೋಜನೆಗಳನ್ನು ಬಿಜೆಪಿ ನಕಲು ಮಾಡುತ್ತಿದೆ ಎಂದು ಶಿವಕುಮಾರ್‌ ಆರೋಪಿಸಿದರು. “ಬಿಹಾರ, ದೆಹಲಿ, ಮಹಾರಾಷ್ಟ್ರ, ಗುಜರಾತ್‌ನಲ್ಲಿ ಕಾಂಗ್ರೆಸ್‌ ಗ್ಯಾರಂಟಿಗಳನ್ನು ನೋಡಿಕೊಂಡು ಬಿಜೆಪಿ ಯೋಜನೆಗಳನ್ನು ಘೋಷಿಸುತ್ತಿದೆ. ವಿರೋಧಿಸಿದವರೇ ಈಗ ನಮ್ಮನ್ನು ಅನುಸರಿಸುತ್ತಿದ್ದಾರೆ,” ಎಂದರು.

ಕಾಂಗ್ರೆಸ್‌ನ ಕೊಡುಗೆ, ಶುದ್ಧ ಆಡಳಿತ

ಕಾಂಗ್ರೆಸ್‌ ಸರಕಾರದ ಕೊಡುಗೆಗಳನ್ನು ಶಿವಕುಮಾರ್‌ ಎತ್ತಿ ತೋರಿದರು. “ಉಳುವವನಿಗೆ ಭೂಮಿ, ಪಿಂಚಣಿ, ರೈತರಿಗೆ 19,000 ಕೋಟಿ ಸಬ್ಸಿಡಿ, ಜನರ ಕಲ್ಯಾಣಕ್ಕೆ 1 ಲಕ್ಷ ಕೋಟಿ ವೆಚ್ಚ—ಇವೆಲ್ಲವೂ ಕಾಂಗ್ರೆಸ್‌ ಕೊಡುಗೆ. ಐದು ಗ್ಯಾರಂಟಿ ಯೋಜನೆಗಳು ಒಂದು ರೂಪಾಯಿ ಲಂಚವಿಲ್ಲದೇ ಜಾರಿಯಾಗಿವೆ. ಬಿಜೆಪಿಯವರು ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ಘೋಷಿಸಿದ್ದಾರೆ, ಆದರೆ ಇದು ಕೇವಲ ಖಾಲಿ ಮಾತು,” ಎಂದು ಟೀಕಿಸಿದರು.

ಹೊಸಕೋಟೆಯ ಅಭಿವೃದ್ಧಿಗೆ ಕಾಂಗ್ರೆಸ್‌ ಬದ್ಧ

“ಹೊಸಕೋಟೆಯ ಆಸ್ತಿಗಳು ಭವಿಷ್ಯದಲ್ಲಿ ಬೆಂಗಳೂರಿನ ಆಸ್ತಿಗಳಾಗಲಿವೆ. ಈ ಭಾಗದ ಅಭಿವೃದ್ಧಿಗೆ ಈಗಾಗಲೇ ಅಡಿಪಾಯ ಹಾಕಿದ್ದೇವೆ. ಕ್ಷೀರಧಾರೆ ಯೋಜನೆಯಡಿ ರೈತರಿಗೆ 5 ರೂ. ಸಹಾಯಧನ ನೀಡುವ ಮೂಲಕ ಬೆಂಬಲಿಸಿದ್ದೇವೆ,” ಎಂದರು. “ಕೃಷ್ಣ ಬೈರೇಗೌಡ, ಪ್ರಿಯಾಂಕ್‌ ಖರ್ಗೆ ಅವರು ಹಟ್ಟಿ, ತಾಂಡದ ಜನರಿಗೆ ಪಟ್ಟಾ ಖಾತೆ ನೀಡಲು ಕ್ರಮ ಕೈಗೊಂಡಿದ್ದಾರೆ. ಬೆಂಗಳೂರಿನ ಬಿ ಖಾತೆಗಳನ್ನು ಎ ಖಾತೆಗಳಾಗಿ ಪರಿವರ್ತಿಸಲು ಕಾಂಗ್ರೆಸ್‌ ಕೆಲಸ ಮಾಡುತ್ತಿದೆ,” ಎಂದು ತಿಳಿಸಿದರು.

ವಿಪಕ್ಷಗಳಿಗೆ ಸವಾಲು

“ವಿಪಕ್ಷಗಳಿಗೆ ಸದನದಲ್ಲಿ ಚರ್ಚೆಗೆ ಆಹ್ವಾನ ನೀಡುತ್ತೇನೆ. ಕಾಂಗ್ರೆಸ್‌ ಸಾಧನೆಗಳಿಗೆ ಸರಿಸಾಟಿಯಾದ ಒಂದು ಕಾರ್ಯಕ್ರಮವನ್ನಾದರೂ ಬಿಜೆಪಿ ಅಥವಾ ಜೆಡಿಎಸ್‌ ತೋರಿಸಲಿ,” ಎಂದು ಸವಾಲೆಸೆದರು. “ಕುಮಾರಸ್ವಾಮಿ ಅವರು ಎತ್ತಿನಹೊಳೆ ಯೋಜನೆ ಅಸಾಧ್ಯ ಎಂದಿದ್ದರು. ಆದರೆ, ಕಾಂಗ್ರೆಸ್‌ ಇದನ್ನು ಯಶಸ್ವಿಯಾಗಿ ಜಾರಿಗೊಳಿಸಿದೆ,” ಎಂದರು.

ಜನರಿಗೆ ಭರವಸೆ

“ನೀವು ಗಾಬರಿಯಾಗಬೇಡಿ, ಕಾಂಗ್ರೆಸ್‌ ನಿಮ್ಮ ರಕ್ಷಣೆಗೆ ಇದೆ. ಉಪಚುನಾವಣೆಯಲ್ಲಿ ಕರ್ನಾಟಕದ ಜನರು ಮೂರು ಸ್ಥಾನಗಳನ್ನು ಗೆಲ್ಲಿಸಿ, 140 ಶಾಸಕರ ಬಲವನ್ನು ಕಾಂಗ್ರೆಸ್‌ಗೆ ನೀಡಿದ್ದಾರೆ. ಜನರ ಸೇವೆಗೆ ನಾವು ಸನ್ನದ್ದರಾಗಿದ್ದೇವೆ,” ಎಂದು ಶಿವಕುಮಾರ್‌ ಭರವಸೆ ನೀಡಿದರು.

Tags: newnewsಅಭಿವೃದ್ಧಿಅವಕಾಶಆರ್ಥಿಕಇನ್ಉತ್ತರಕರ್ನಾಟಕಕರ್ನಾಟಕದಕಾಂಗ್ರೆಸ್ಕಾರ್ಯಕ್ರಮಕುಮಾರ್ಕ್ರಮಡಾ.ಡಿತೀರದಿನದೇಶನಗರನಿರ್ಧಾರಬಿಜೆಪಿಬೆಂಗಳೂರುಭಾರತಮಟ್ಟದಮತ್ತುಮಹತ್ವದಮಹಾಯುವಯೋಗಯೋಜನೆಯೋಜನೆಗಳರಾಜಕೀಯರಾಜ್ಯರಾಷ್ಟ್ರೀಯವಿಶೇಷವಿಶ್ವಸಚಿವಸಂಬಂಧಸಂಬಂಧಿಸಭೆಸಹಾಯಸಿಎಂಸಿದ್ದರಾಮಯ್ಯಹಣಹೊಸ

Subscribe Now and Never Miss an Update!

Unsubscribe
  • Trending
  • Comments
  • Latest

ಮಳೆ ವೇಳೆ ರಸ್ತೆಗೆ ಡಾಂಬರು ಹಾಕಲು ವೆಟ್ ಮಿಕ್ಸಿಂಗ್ ವಿಧಾನ ಬಳಕೆ: ಡಿಸಿಎಂ ಡಿ.ಕೆ.ಶಿವಕುಮಾರ್

4

ಬುಲ್ಸ್‌ಗೆ ಸವಾಲಾಗದ ಬೆಂಗಾಲ್‌ಅಲಿರೇಜಾ ಮತ್ತೊಮ್ಮೆ ಮಿಂಚು; ವಾರಿಯರ್ಸ್‌ ವಿರುದ್ಧ 43-32 ಅಂತರದ ಭರ್ಜರಿ ಗೆಲುವು

4

Invest Karnataka 2025 Kicks Off with a Grand Opening, Showcasing Innovation, Investments, and Global Collaborations

3

ಭಾರತ vs ಇಂಗ್ಲೆಂಡ್ 3ನೇ ಏಕದಿನ: 142 ರನ್ ಭರ್ಜರಿ ಜಯ, 3-0 ಸರಣಿ ಕ್ಲೀನ್ ಸ್ವೀಪ್!

2

ಅಯೋಧ್ಯೆಯ ದೀಪಾವಳಿ ಮತ್ತೆ ಇತಿಹಾಸ ಸೃಷ್ಟಿಸಿದೆ: ದೀಪಗಳ ನದಿ, ಆರತಿಯ ಸಮೂಹ ಗಾಯನದೊಂದಿಗೆ 2 ವಿಶ್ವ ದಾಖಲೆ

October 20, 2025

ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥಸಂಚಲನಕ್ಕೆ ಅನುಮತಿ ನಿರಾಕರಣೆ: ಛಲವಾದಿ ನಾರಾಯಣಸ್ವಾಮಿ ಆಕ್ಷೇಪ

October 19, 2025

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ₹56,000 ಕೋಟಿ ಖರ್ಚು, ಮೂಲಸೌಕರ್ಯಕ್ಕೆ ₹5,229 ಕೋಟಿ ಕಡಿತ: CAG ವರದಿ

October 19, 2025

ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಅನುಮತಿ, ಕಾಂಗ್ರೆಸ್‌ಗೆ ಹೈಕೋರ್ಟ್‌ನಿಂದ ತೀವ್ರ ಮುಖಭಂಗ: ಬಿ.ವೈ ವಿಜಯೇಂದ್ರ

October 19, 2025

Recent News

ಮೇಘಾಲಯ, ತ್ರಿಪುರಾ ಪತ್ರಕರ್ತರ ನಿಯೋಗ ಬಿಎಚ್‌ಇಎಲ್ ಎಲೆಕ್ಟ್ರಾನಿಕ್ಸ್ ವಿಭಾಗಕ್ಕೆ ಭೇಟಿ

October 15, 2025

ರಾಷ್ಟ್ರೀಯ ಸುರಕ್ಷಾ ರಕ್ಷಣಾ ಸೇನೆಯ ೪೧ನೇ ಸ್ಥಾಪನಾ ದಿನಾಚರಣೆ:

October 14, 2025

ಐಐಟಿ ಧಾರವಾಡದಲ್ಲಿ ಧರ್ತಿ ಬಯೋನೆಸ್ಟ್ ಇಂಕ್ಯೂಬೇಶನ್ ಕೇಂದ್ರ ಉದ್ಘಾಟನೆ:

October 14, 2025

ಬುಲ್ಸ್‌ಗೆ ಸವಾಲಾಗದ ಬೆಂಗಾಲ್‌ಅಲಿರೇಜಾ ಮತ್ತೊಮ್ಮೆ ಮಿಂಚು; ವಾರಿಯರ್ಸ್‌ ವಿರುದ್ಧ 43-32 ಅಂತರದ ಭರ್ಜರಿ ಗೆಲುವು

October 13, 2025
  • Home
  • Privacy Policy
  • About Us
  • Advertise with us
  • Contact Us
Whatesapp +8050611655

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.

Welcome Back!

Login to your account below

Forgotten Password? Sign Up

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In
error:
  • Login
  • Sign Up
No Result
View All Result
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
News Post

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.