ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಡಿಸಿಆರ್ಇ (D.C.R.E) ಪೊಲೀಸ್ ಠಾಣೆಗಳಿಗೆ ನೂತನವಾಗಿ ಒದಗಿಸಲಾದ ವಾಹನಗಳನ್ನು ರಾಜ್ಯದ ಗೃಹ ಸಚಿವ ಡಾ. ಜಿ. ಪರಮೇಶ್ವರ ಹಾಗೂ ಸಮಾಜ ಕಲ್ಯಾಣ ಸಚಿವ ಡಾ. ಹೆಚ್.ಸಿ. ಮಹದೇವಪ್ಪ ಅವರು ವಿಧಾನ ಸೌಧದ ಭವ್ಯ ಮೆಟ್ಟಿಲುಗಳ ಮುಂಭಾಗದಲ್ಲಿ ಲೋಕಾರ್ಪಣೆಗೊಳಿಸಿದರು.
ಈ ಪ್ರಯುಕ್ತ ನಡೆದ ಸಮಾರಂಭದಲ್ಲಿ, ರಾಜ್ಯದ ಪೊಲೀಸ್ ಮಹಾನಿರ್ದೇಶಕ ಮತ್ತು ಪೊಲೀಸ್ ಮಹಾನಿರೀಕ್ಷಕ ಡಾ. ಅಲೋಕ್ ಮೋಹನ್, ಸಿಐಡಿ ವಿಭಾಗದ ಪೊಲೀಸ್ ಮಹಾನಿರ್ದೇಶಕ ಡಾ. ಎಂ.ಎ. ಸಲೀಂ, ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಆರ್. ಹಿತೇಂದ್ರ, ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಜೆ. ಅರುಣ್ ಚಕ್ರವರ್ತಿ, ಅಪರಾಧ ಮತ್ತು ತಾಂತ್ರಿಕ ಸೇವೆಗಳ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಪಿ. ಹರೀಶೇಖರನ್ ಹಾಗೂ ಆಡಳಿತ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಸೌಮೇಂದು ಮುಖರ್ಜಿ ಸೇರಿದಂತೆ ಇತರೆ ಹಿರಿಯ ಅಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.

ಸಾಮಾಜಿಕ ನ್ಯಾಯದ ಅನುಷ್ಟಾನ ಹಾಗೂ ಪೊಲೀಸ್ ಇಲಾಖೆಯ ತಂತ್ರಜ್ಞಾನಾಭಿವೃದ್ಧಿಯೊಂದಿಗೆ ಸೇವೆ ಮುಟ್ಟಿಸುವಿಕೆಗೆ ಈ ವಾಹನಗಳು ಪ್ರೇರಕವಾಗಲಿದ್ದು, ಕಾನೂನು ಸುವ್ಯವಸ್ಥೆ ಕಾಪಾಡಲು ಮತ್ತಷ್ಟು ನೆರವಾಗಲಿವೆ ಎಂಬ ವಿಶ್ವಾಸ ಕಾರ್ಯಕ್ರಮದಲ್ಲಿ ವ್ಯಕ್ತವಾಯಿತು.