ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶನಿವಾರ ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಸೆಲೆಬ್ರಿಟಿ ಕ್ರಿಕೆಟ್ ಲೀಗ್ (CCL) ಪಂದ್ಯವನ್ನು ವೀಕ್ಷಿಸಿದರು. ಈ ಟಿ20 ಪಂದ್ಯದಲ್ಲಿ ಕರ್ನಾಟಕ ಬುಲ್ಡೋಜರ್ಸ್ ಮತ್ತು ತೆಲುಗು ವಾರಿಯರ್ಸ್ ತಂಡಗಳು ಮುಖಾಮುಖಿಯಾಗಿದ್ದವು.
ಪಂದ್ಯಕ್ಕೂ ಮುನ್ನ, ಕರ್ನಾಟಕ ಬುಲ್ಡೋಜರ್ಸ್ ತಂಡದ ನಾಯಕ ಕಿಚ್ಚ ಸುದೀಪ್ ಅವರು ಡಿ.ಕೆ. ಶಿವಕುಮಾರ್ ಅವರಿಗೆ ತಮ್ಮ ತಂಡದ ಆಟಗಾರರನ್ನು ಪರಿಚಯಿಸಿದರು. ನಂತರ, ಡಿಸಿಎಂ ಶಿವಕುಮಾರ್ ಅವರು ಟಾಸ್ ಹಾಕಿ ಪಂದ್ಯಕ್ಕೆ ಚಾಲನೆ ನೀಡಿದರು.

ಈ ವಿಶೇಷ ಸಂದರ್ಭದಲ್ಲಿ ತಂಡದ ಪ್ರಮುಖ ಆಟಗಾರ ಗೋಲ್ಡನ್ ಸ್ಟಾರ್ ಗಣೇಶ್, ತಂಡದ ಮಾಲೀಕರಾದ ಅಶೋಕ್ ಖೇಣಿ, ಮತ್ತು ಬೆಂಗಳೂರು – ಮೈಸೂರು ಇನ್ಫ್ರಾಸ್ಟ್ರಕ್ಟರ್ ಕಾರಿಡಾರ್ ಪ್ಲಾನಿಂಗ್ ಅಥಾರಿಟಿ (BMICAPA) ಅಧ್ಯಕ್ಷ ರಘುನಂದನ್ ರಾಮಣ್ಣ ಉಪಸ್ಥಿತರಿದ್ದರು.
ಪಂದ್ಯದ ವೇಳೆ ಶಿವಕುಮಾರ್ ಅವರು ಆಟಗಾರರಿಗೆ ಶ್ರೇಯಸ್ಸು ಹಾರೈಸಿ, ಕರ್ನಾಟಕ ಬುಲ್ಡೋಜರ್ಸ್ ತಂಡಕ್ಕೆ ಪ್ರೋತ್ಸಾಹ ನೀಡಿದರು. CCL ಪಂದ್ಯವು ಅಭಿಮಾನಿಗಳಲ್ಲಿ ಉತ್ಸಾಹ ಹೆಚ್ಚಿಸಿದೆ ಮತ್ತು ಕ್ರಿಕೆಟ್ ಹಾಗೂ ಸಿನಿತಾರೆಯರು ಸೇರಿದ ಈ ಕ್ರೀಡಾ ಉತ್ಸವ ಜನಪ್ರಿಯತೆಯನ್ನು ಗಳಿಸಿತು.