ಬೆಂಗಳೂರು: ಬೆಂಗಳೂರು ನಗರದ ಹೃದಯ ಭಾಗದಲ್ಲಿರುವ ಪಶುಸಂಗೋಪನೆ ಇಲಾಖೆಯ ಎರಡು ಎಕರೆ ಭೂಮಿಯನ್ನು ಅಲ್ಪಸಂಖ್ಯಾತರ ಇಲಾಖೆಗೆ ಹಸ್ತಾಂತರಿಸುವ ಆದೇಶವನ್ನು ರಾಜ್ಯ ಸರ್ಕಾರ ಹಿಂಪಡೆದಿದೆ. 2024ರ ಫೆಬ್ರವರಿಯಲ್ಲಿ ನೀಡಿದ್ದ ಈ ಆದೇಶವು ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದ್ದ ಹಿನ್ನೆಲೆಯಲ್ಲಿ ಸರ್ಕಾರ ಇದನ್ನು ರದ್ದುಗೊಳಿಸಲು ನಿರ್ಧರಿಸಿದೆ.
ಬಿಜೆಪಿ ನಾಯಕ ಆರ್. ಅಶೋಕ್ ಟ್ವೀಟ್ ಮಾಡಿ ಈ ವಿಷಯವನ್ನು ಹಂಚಿಕೊಂಡಿದ್ದು, “ಭೂಮಿಯನ್ನು ಅಲ್ಪಸಂಖ್ಯಾತರ ಇಲಾಖೆಗೆ ಹಸ್ತಾಂತರಿಸಲು ಕಾಂಗ್ರೆಸ್ ಸರ್ಕಾರ ಸಂಚು ಹೂಡಿತ್ತು. ಆದಾಗ್ಯೂ, ಜನಕ್ರೋಶದ ನಡುವೆ ಈ ಆದೇಶವನ್ನು ಹಿಂಪಡೆಯಲಾಗಿದೆ. ಹೈಕೋರ್ಟ್ ಕೂಡ ಈ ನಿರ್ಧಾರಕ್ಕೆ ತಡೆಯಾಜ್ಞೆ ನೀಡಿತ್ತು” ಎಂದು ಅವರು ಆರೋಪಿಸಿದ್ದಾರೆ.
ಪಶು ಚಿಕಿತ್ಸಾಲಯದ ಭೂಮಿ ವಿವಾದ
1870ರಲ್ಲಿ ದಾನಿಗಳು ಪಶುಗಳ ಆರೈಕೆ ಮತ್ತು ಚಿಕಿತ್ಸೆಗಾಗಿ ಈ ಭೂಮಿಯನ್ನು ನೀಡಿದ್ದಾರೆ. ಆದರೆ, 2024ರಲ್ಲಿ ಈ ಜಾಗವನ್ನು ಅಲ್ಪಸಂಖ್ಯಾತರ ಇಲಾಖೆಗೆ ವರ್ಗಾಯಿಸಲು ಆದೇಶ ಹೊರಡಿಸಲಾಗಿತ್ತು. ಇದಕ್ಕೆ ವಿರೋಧ ವ್ಯಕ್ತಪಡಿಸಿದ ಭಾರತೀಯ ಜನತಾ ಪಕ್ಷ (ಬಿಜೆಪಿ) ನೇತೃತ್ವದಲ್ಲಿ ಪ್ರತಿಭಟನೆಗಳು ನಡೆದವು.
ಚಾಮರಾಜಪೇಟೆಯಲ್ಲಿ ನಡೆದ ಹಸುಗಳ ಮೇಲಿನ ಹಲ್ಲೆ ಪ್ರಕರಣಕ್ಕೂ ಈ ಭೂಮಿ ವಿವಾದವೇ ಕಾರಣವಾಗಿತ್ತಂತೆ ಎಂದು ಆರ್. ಅಶೋಕ್ ಹೇಳಿದ್ದಾರೆ. ಬಿಜೆಪಿಯ ಹೋರಾಟದಿಂದ ನ್ಯಾಯಕ್ಕೆ ಗೆಲುವು ಸಿಕ್ಕಿದೆ ಎಂದು ಅವರು ಹೇಳಿದ್ದು, ಸರ್ಕಾರ ಗೋಮಾತೆ ಹಾಗೂ ದನಕರುಗಳ ರಕ್ಷಣೆಗೆ ಮುಂದಾಗಬೇಕು ಎಂದು ಆಗ್ರಹಿಸಿದ್ದಾರೆ.
ಈ ಬೆಳವಣಿಗೆಯಿಂದ ಪಶು ಚಿಕಿತ್ಸಾಲಯ ಮುಂಚಿನಂತೆ ಕಾರ್ಯನಿರ್ವಹಿಸಲಿದೆ ಎಂದು ತಿಳಿದುಬಂದಿದೆ.
Discover more from amiroNEWS
Subscribe to get the latest posts sent to your email.