ಮಾನ್ಸಿ ಜೆ ಸುವರ್ಣ ಸಾಧನೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶ್ಲಾಘನೆ
ಉಡುಪಿ: ಉತ್ತರ ಪ್ರದೇಶದ ಗ್ರೇಟರ್ ನೊಯಿಡಾದಲ್ಲಿ ನಡೆದ ರಾಷ್ಟ್ರೀಯ ಬಾಕ್ಸಿಂಗ್ ಚಾಂಪಿಯನ್ಷಿಪ್ನಲ್ಲಿ ಕಂಚಿನ ಪದಕ ಗೆದ್ದ ಉಡುಪಿ ಜಿಲ್ಲೆಯ ಮಾನ್ಸಿ ಜೆ ಸುವರ್ಣ ಅವರ ಸಾಧನೆಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶ್ಲಾಘಿಸಿದ್ದಾರೆ.

ಮಲ್ಪೆಯ ಮೀನುಗಾರ ದಂಪತಿ ಮಾಲತಿ ಮತ್ತು ಜಗದೀಶ್ ಸುವರ್ಣ ಅವರ ಪುತ್ರಿಯಾದ ಮಾನ್ಸಿ ಗೆದ್ದ ಕಂಚಿಙ ಪದಕವು ರಾಜ್ಯದ ಇತರ ಬಾಕ್ಸರ್ಗಳಿಗೆ ಸ್ಫೂರ್ತಿಯಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಬಾಕ್ಸಿಂಗ್ ಕ್ರೀಡೆಯು ವಿರಳವಾಗಿದ್ದು, ಈ ಕ್ರೀಡೆಯನ್ನು ಮತ್ತಷ್ಟು ಉತ್ತೇಜಿಸಬೇಕು ಎಂದು ಸಚಿವರು ಹೇಳಿದ್ದಾರೆ. “ಕರಾವಳಿಯ ಮಕ್ಕಳು ಬಾಕ್ಸಿಂಗ್ನಲ್ಲಿ ಮಿಂಚಿ, ರಾಜ್ಯಕ್ಕೆ ಕೀರ್ತಿ ತರಲಿ,” ಎಂದು ಲಕ್ಷ್ಮೀ ಹೆಬ್ಬಾಳಕರ್ ಹಾರೈಸಿದ್ದಾರೆ.
ಮಾನ್ಸಿ ಸುವರ್ಣ ಅವರು ಮುಂದಿನ ದಿನಗಳಲ್ಲಿ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸ್ಪರ್ಧೆಗಳಲ್ಲಿ ಇನ್ನಷ್ಟು ಪದಕಗಳನ್ನು ಗೆದ್ದು, ರಾಜ್ಯ ಮತ್ತು ದೇಶಕ್ಕೆ ಕೀರ್ತಿ ತರಲಿ ಎಂದು ಸಚಿವರು ಆಶಿಸಿದ್ದಾರೆ. “ಆಕೆಯ ಸಾಧನೆಗೆ ನಮ್ಮ ಸರ್ಕಾರ ಎಂದಿಗೂ ಬೆಂಬಲವಾಗಿ ನಿಲ್ಲಲಿದೆ,” ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರe.