Monday, October 20, 2025
  • Login
  • Register
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
Home State Karnataka News

ಮುಖಂಡರ ಜತೆ ಮಹತ್ವದ ಸಭೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ

PREM SHEKHAR PV by PREM SHEKHAR PV
7 months ago
Reading Time: 1 min read
A A
18
SHARES
50
VIEWS

ಪಕ್ಷ ಸಂಘಟನೆಗೆ 15 ಜಿಲ್ಲೆಗಳಲ್ಲಿ ಕೇಂದ್ರ ಸಚಿವರ ಪ್ರವಾಸ

ಜನ ವಿರೋಧಿ ಕಾಂಗ್ರೆಸ್ ಸರಕಾರದ ವಿರುದ್ಧ ಜನಾಂದೋಲನಕ್ಕೆ ನಿರ್ಧಾರ

ಬೆಂಗಳೂರು: ರಾಜಧಾನಿ ಬೆಂಗಳೂರು ಮಹಾ ನಗರದಲ್ಲಿ ಜೆಡಿಎಸ್ ಪಕ್ಷವನ್ನು ಬಲಗೊಳಿಸುವುದು ಸೇರಿದಂತೆ, ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಗೆ ತಯಾರಿ, ಜನವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧ ನಿರಂತರ ಜನಾಂದೋಲನ ರೂಪಿಸುವ ಬಗ್ಗೆ ಕೇಂದ್ರ ಸಚಿವರು, ಪಕ್ಷದ ರಾಜ್ಯಾಧ್ಯಕ್ಷರೂ ಆಗಿರುವ ಹೆಚ್.ಡಿ. ಕುಮಾರಸ್ವಾಮಿ ಅವರು ಮುಖಂಡರ ಜತೆ ಮಹತ್ವದ ಮಾತುಕತೆ ನಡೆಸಿದರು.

ನಗರದ ತಮ್ಮ ನಿವಾಸದಲ್ಲಿ ಆಹ್ವಾನಿತ ಮುಖಂಡರ ಜತೆ ಸಭೆ ನಡೆಸಿದ ಸಚಿವರು; ಕ್ರಿಯಾಶೀಲವಲ್ಲದ ಜಿಲ್ಲಾಧ್ಯಕ್ಷರ ಬದಲಾವಣೆ, ಖಾಲಿ ಇರುವ ಜಿಲ್ಲಾಧ್ಯಕ್ಷರ ಸ್ಥಾನಗಳ ಭರ್ತಿ, ಸದಸ್ಯತ್ವ ನೋಂದಣಿಯ ಪ್ರಗತಿ ಬಗ್ಗೆಯೂ ಮುಖಂಡರ ಜತೆ ಮಹತ್ವದ ಚರ್ಚೆ ನಡೆಸಿದರು.

ಅಲ್ಲದೆ, ರಾಜ್ಯ ಕಾಂಗ್ರೆಸ್ ಸರಕಾರದ ದುರಾಡಳಿತದ ಬಗ್ಗೆ ರಾಜ್ಯವ್ಯಾಪಿ ಹೋರಾಟಗಳನ್ನು ಹಮ್ಮಿಕೊಳ್ಳುವಂತೆ ಸಚಿವರು ಮುಖಂಡರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ವಿದ್ಯುತ್, ನೀರು, ಬಸ್ ಪ್ರಯಾಣ ದರ, ಹಾಲು, ಮೊಸರು, ಡೀಸೆಲ್ ಬೆಲೆ ಏರಿಕೆಗೆ ಸಂಬಂಧಿಸಿದಂತೆ ಜನರ ಪರವಾಗಿ ಪಕ್ಷ ಹೋರಾಟಗಳನ್ನು ನಡೆಸಬೇಕು. ಜನರ ಕಷ್ಟಕ್ಕೆ ಸ್ಪಂದಿಸುವುದು ನಮ್ಮ ಆದ್ಯ ಕರ್ತವ್ಯ ಇದನ್ನು ಯಾರೂ ಮರೆಯಬಾರದು ಎಂದು ಕೇಂದ್ರ ಸಚಿವರು ಸ್ಪಷ್ಟ ಮಾತುಗಳಲ್ಲಿ ಹೇಳಿದರು.

ಹದಿನೈದು ಜಿಲ್ಲೆಗಳಲ್ಲಿ HDK ಪ್ರವಾಸ:

ಹಳೆ ಮೈಸೂರು ಭಾಗದ ಹದಿನೈದು ಜಿಲ್ಲೆಗಳಲ್ಲಿ ಪಕ್ಷ ಸಂಘಟನೆಗಾಗಿ ಪ್ರವಾಸ ಕೈಗೊಳ್ಳುವುದಾಗಿ ಮುಖಂಡರಿಗೆ ಕೇಂದ್ರ ಸಚಿವರು ತಿಳಿಸಿದರು.

ಪ್ರತಿ ಜಿಲ್ಲೆಗೂ ಒಂದೊಂದು ದಿನ ಭೇಟಿ ನೀಡುತ್ತೇನೆ. ಕಾರ್ಯಕರ್ತರು, ಮುಖಂಡರ ಜತೆ ಆ ದಿನವನ್ನು ಕಳೆಯುತ್ತೇನೆ. ಅವರ ಅಹವಾಲು, ಸಮಸ್ಯೆ ಖುದ್ದು ಆಲಿಸುತ್ತೇನೆ. ಅವರ ಸಮಸ್ಯೆಗಳನ್ನು ಸರಿ ಮಾಡುತ್ತೇನೆ. ಶೀಘ್ರವೇ ಪ್ರವಾಸದ ದಿನಾಂಕ ನಿಗದಿ ಮಾಡುತ್ತೇನೆ ಎಂದು ಕೇಂದ್ರ ಸಚಿವರು ಸಭೆಗೆ ತಿಳಿಸಿದರು.

ನರೇಂದ್ರ ಮೋದಿ ಅವರ ಸಂಪುಟದಲ್ಲಿ ಸಿಕ್ಕಿರುವ ಅವಕಾಶ ಬಳಸಿಕೊಂಡು ಪ್ರಧಾನಿಗಳ ನಿರೀಕ್ಷೆಗೆ ಅನುಗುಣವಾಗಿ ಕೆಲಸ ಮಾಡುವ ಪ್ರಯತ್ನ ಮಾಡುತ್ತಿದ್ದೇನೆ. ನನ್ನ ಕೈಲಾದ ಮಟ್ಟಿಗೆ ಒಳ್ಳೆಯ ಕೆಲಸ ಮಾಡಲು ಶ್ರಮ ಹಾಕುತ್ತಿದ್ದೇನೆ. ಕೇಂದ್ರದಲ್ಲಿ ಕೆಲಸ ಮಾಡಿಕೊಂಡೇ ಪಕ್ಷ ಸಂಘಟನೆಗೆ ಸಮಯ ನಿಗದಿ ಮಾಡುತ್ತೇನೆ. ಪ್ರತಿ ಕಾರ್ಯಕರ್ತ, ಮುಖಂಡನಿಗೂ ಸಿಗುತ್ತೇನೆ ಎಂದು ಮುಖಂಡರಿಗೆ ಸಚಿವರು ಹೇಳಿದರು.

ನಲವತ್ತು, ಐವತ್ತು ಸಾವಿರ ಮತ ಪಡೆದಿರುವ ಅಭ್ಯರ್ಥಿಗಳಿಗೆ ಶಕ್ತಿ ತುಂಬುವ ಕೆಲಸ ಮಾಡುತ್ತೇನೆ. ಮುಂದಿನ ಚುನಾವಣೆಗೆ ಅವರನ್ನು ಸಜ್ಜು ಮಾಡುತ್ತೇನೆ. ತಳಮಟ್ಟದಿಂದ ಸಂಘಟನೆ ಬಲಗೊಳಿಸಲು ಏನು ಮಾಡಬೇಕೋ ಅದನ್ನೇ ಮಾಡುತ್ತೇನೆ ಎಂದ ಸಚಿವರು; ರಾಜ್ಯದಲ್ಲಿ ಜೆಡಿಎಸ್ ಅನಿವಾರ್ಯವಾಗಿದೆ. ನಾವು ನಮ್ಮ ನಿಲುವು ಜನರ ಪರ. ಜನ ಸಾಮಾನ್ಯರ ಪರ ನಿಲ್ಲಬೇಕು.

ಕೂಡಲೇ ಜಿಲ್ಲಾ ಪಂಚಾಯತ್ ತಾಲೂಕು ಪಂಚಾಯಿತಿ ಚುನಾವಣೆಗೆ ಸಜ್ಜಾಗಿ. ಎಲ್ಲೆಲ್ಲಿ ಗೆಲ್ಲುತ್ತೇವೆಯೋ ಆ ಕ್ಷೇತ್ರಗಳನ್ನು ಪಟ್ಟಿ ಮಾಡಿ. ಜಿಲ್ಲಾ ಪಂಚಾಯತ್ ಕ್ಷೇತ್ರಗಳ ಬಗ್ಗೆ ಹೆಚ್ಚು ಮುತುವರ್ಜಿ ಕೊಟ್ಟು ಕೆಲಸ ಮಾಡಿ. ಹಗಲು ರಾತ್ರಿ ನಾನು ಕೆಲಸ ಮಾಡಲು ಸಿದ್ಧ. ನನ್ನ ಹಾಗೆಯೇ ನೀವು ಕೆಲಸ ಮಾಡಲೇಬೇಕು ಎಂದು ನೇರ ಮಾತುಗಳಲ್ಲಿ ಕುಮಾರಸ್ವಾಮಿ ಅವರು ಹೇಳಿದರು.

ಯುವಕರಿಗೆ ಆದ್ಯತೆ ಕೊಡಿ:

ಸಂಘಟನೆಯಲ್ಲಿ ಯುವಕರಿಗೆ ಹೆಚ್ಚು ಮನ್ನಣೆ ಕೊಡಿ, ಯುವಕರು ಇಲ್ಲದೆ ಪಕ್ಷ ಹೇಗೆ ಕಟ್ಟುತ್ತೀರಿ. ಅವರಿಗೆ ಮಾರ್ಗದರ್ಶನ ಕೊಡಿ. ಸಂಘಟನೆಯಲ್ಲಿ ತೊಡಗಿಸಿ ಎಂದು ಕುಮಾರಸ್ವಾಮಿ ಅವರು ಮುಖಂಡರಿಗೆ ಸೂಚನೆ ನೀಡಿದರು.

ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು, ಶಾಸಕರಾದ ಎ. ಮಂಜು, ಮೇಲೂರು ರವಿ, ಎಸ್.ಎಲ್. ಭೋಜೆಗೌಡ, ಟಿ.ಎನ್. ಜವರಾಯ ಗೌಡ, ಕರೆಮ್ಮ ನಾಯಕ್, ಶಾರದಾ ಪೂರ್ಯ ನಾಯಕ, ಎಂ ಟಿ ಕೃಷ್ಣಪ್ಪ, ಟಿ.ಎ. ಶರವಣ, ರಾಜೂಗೌಡ ಪಾಟೀಲ, ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಮಾಜಿ ಸಚಿವರಾದ ಹೆಚ್.ಕೆ. ಕುಮಾರಸ್ವಾಮಿ, ಬಂಡೆಪ್ಪ ಕಾಶೆಂಪೂರ್, ಸಿ ಎಸ್ ಪುಟ್ಟರಾಜು, ವೆಂಕಟರಾವ್ ನಾಡಗೌಡ, ಆಲ್ಕೋಡ ಹನುಮಂತಪ್ಪ, ಸಂಸದ ಮಲ್ಲೇಶ್ ಬಾಬು, ಕೆ.ಎ.ತಿಪ್ಪೇಸ್ವಾಮಿ, ಬಿ.ಎಂ. ಫಾರೂಕ್, ಸುರೇಶ್ ಗೌಡ, ಕೊಪ್ಪಳ ಚಂದ್ರಶೇಖರ್, ದೊಡ್ಡನಗೌಡ ಪಾಟೀಲ್, ಕೆ.ಎಂ. ಕೃಷ್ಣಾರೆಡ್ಡಿ, ತಿಮ್ಮರಾಯಪ್ಪ, ಸೂರಜ್ ಸೋನಿ ನಾಯಕ, ಪ್ರಸನ್ನ ಕುಮಾರ್, ಸುಧಾಕರ ಶೆಟ್ಟಿ ಸೇರಿ ಅನೇಕ ಆಹ್ವಾನಿತ ನಾಯಕರು ಸಭೆಯಲ್ಲಿ ಉಪಸ್ಥಿತರಿದ್ದರು.

Tags: amiroamironewsBureau NewsDKnewnewsಅವಕಾಶಏರಿಕೆಕಾಂಗ್ರೆಸ್ಕಾರ್ಯಕರ್ತರಕುಮಾರಸ್ವಾಮಿಕುಮಾರ್ಕೃಷ್ಣಕೆಲಸಕೇಂದ್ರಕ್ರಿಯಾಘಟನೆಚುನಾವಣೆಜಿಲ್ಲೆಡಿತಾಲ್ಲೂಕುತೀರದರ್ಶನದಿನದೊಡ್ಡನಗರನಿರ್ಧಾರನೀರುಪಕ್ಷಪ್ರಗತಿಪ್ರವಾಸಬದಲಾವಣೆಬೆಂಗಳೂರುಬೆಲೆಮಟ್ಟದಮತ್ತುಮಹತ್ವದಮಹಾಮಾರ್ಗಮೈಸೂರುಮೋದಿಯುವಯುವಕರಾಜ್ಯರಾತ್ರಿಶೆಟ್ಟಿಸಂಘಟನೆಸಚಿವಸಂಪುಟಸಂಬಂಧಸಂಬಂಧಿಸಭೆಸ್ವಾಮಿಹೋರಾಟ

Subscribe Now and Never Miss an Update!

Unsubscribe
  • Trending
  • Comments
  • Latest

ಮಳೆ ವೇಳೆ ರಸ್ತೆಗೆ ಡಾಂಬರು ಹಾಕಲು ವೆಟ್ ಮಿಕ್ಸಿಂಗ್ ವಿಧಾನ ಬಳಕೆ: ಡಿಸಿಎಂ ಡಿ.ಕೆ.ಶಿವಕುಮಾರ್

4

ಬುಲ್ಸ್‌ಗೆ ಸವಾಲಾಗದ ಬೆಂಗಾಲ್‌ಅಲಿರೇಜಾ ಮತ್ತೊಮ್ಮೆ ಮಿಂಚು; ವಾರಿಯರ್ಸ್‌ ವಿರುದ್ಧ 43-32 ಅಂತರದ ಭರ್ಜರಿ ಗೆಲುವು

4

Invest Karnataka 2025 Kicks Off with a Grand Opening, Showcasing Innovation, Investments, and Global Collaborations

3

ಭಾರತ vs ಇಂಗ್ಲೆಂಡ್ 3ನೇ ಏಕದಿನ: 142 ರನ್ ಭರ್ಜರಿ ಜಯ, 3-0 ಸರಣಿ ಕ್ಲೀನ್ ಸ್ವೀಪ್!

2

ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥಸಂಚಲನಕ್ಕೆ ಅನುಮತಿ ನಿರಾಕರಣೆ: ಛಲವಾದಿ ನಾರಾಯಣಸ್ವಾಮಿ ಆಕ್ಷೇಪ

October 19, 2025

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ₹56,000 ಕೋಟಿ ಖರ್ಚು, ಮೂಲಸೌಕರ್ಯಕ್ಕೆ ₹5,229 ಕೋಟಿ ಕಡಿತ: CAG ವರದಿ

October 19, 2025

ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಅನುಮತಿ, ಕಾಂಗ್ರೆಸ್‌ಗೆ ಹೈಕೋರ್ಟ್‌ನಿಂದ ತೀವ್ರ ಮುಖಭಂಗ: ಬಿ.ವೈ ವಿಜಯೇಂದ್ರ

October 19, 2025

ಗುತ್ತಿಗೆದಾರರ ಬಾಕಿ ಬಿಲ್ ಕೇಳಿದರೆ ಧಮ್ಕಿಯೇ?: ಡಿಕೆ ಶಿವಕುಮಾರ್‌ಗೆ ಆರ್. ಅಶೋಕ್ ಪ್ರಶ್ನೆ

October 19, 2025

Recent News

ರಾಷ್ಟ್ರೀಯ ಸುರಕ್ಷಾ ರಕ್ಷಣಾ ಸೇನೆಯ ೪೧ನೇ ಸ್ಥಾಪನಾ ದಿನಾಚರಣೆ:

October 14, 2025

ಐಐಟಿ ಧಾರವಾಡದಲ್ಲಿ ಧರ್ತಿ ಬಯೋನೆಸ್ಟ್ ಇಂಕ್ಯೂಬೇಶನ್ ಕೇಂದ್ರ ಉದ್ಘಾಟನೆ:

October 14, 2025

ಬುಲ್ಸ್‌ಗೆ ಸವಾಲಾಗದ ಬೆಂಗಾಲ್‌ಅಲಿರೇಜಾ ಮತ್ತೊಮ್ಮೆ ಮಿಂಚು; ವಾರಿಯರ್ಸ್‌ ವಿರುದ್ಧ 43-32 ಅಂತರದ ಭರ್ಜರಿ ಗೆಲುವು

October 13, 2025

ತಿಪಟೂರಿನಲ್ಲಿ ಪ್ರಧಾನಮಂತ್ರಿ ಧನ ಧಾನ್ಯ ಕೃಷಿ ಯೋಜನೆ ಹಾಗೂ ದ್ವಿದಳ ರಾಷ್ಟ್ರೀಯ ಯೋಜನೆಗೆ ಕೇಂದ್ರ ಸಚಿವ ವಿ. ಸೋಮಣ್ಣ ಚಾಲನೆ

October 11, 2025
  • Home
  • Privacy Policy
  • About Us
  • Advertise with us
  • Contact Us
Whatesapp +8050611655

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.

Welcome Back!

Login to your account below

Forgotten Password? Sign Up

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In
error:
  • Login
  • Sign Up
No Result
View All Result
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
News Post

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.