ಬೆಂಗಳೂರು: ತಮಿಳುನಾಡಿನ ಕರೈ ಕುಡಿಯ ಅಲಗಪ್ಪ ವಿಶ್ವವಿದ್ಯಾನಿಲಯ ದಲ್ಲಿ ಮಾರ್ಚ್ 29ರಿಂದ ಏಪ್ರಿಲ್ 1 ರವರೆಗೆ ನಡೆಯಲಿರುವ ಅಖಿಲ ಭಾರತೀಯ ಅಂತರ್ ವಿಶ್ವವಿದ್ಯಾಲಯ ಮಹಿಳಾ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಗೆ ಬೆಂಗಳೂರು ನಗರದ ಟಿ.ದಾಸರಹಳ್ಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿಯರಾದ ಸಹನಾ ಡಿ.ಆರ್, ಕೀರ್ತಿ, ರೇಖಾ ಮತ್ತು ಪವಿತ್ರ ಆಯ್ಕೆಯಾಗಿರುತ್ತಾರೆ ಈ ಕ್ರೀಡಾಪಟುಗಳು ಬೆಂಗಳೂರು ವಿಶ್ವವಿದ್ಯಾನಿಲಯ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ. ಕಾಲೇಜಿನ ಪ್ರಾಂಶುಪಾಲರು, ದೈಹಿಕ ಶಿಕ್ಷಣ ನಿರ್ದೇಶಕರು ಹಾಗೂ ಎಲ್ಲಾ ಅಧ್ಯಾಪಕರು, ವಿದ್ಯಾರ್ಥಿನಿಯರ ಸಾಧನೆಗೆ ಅಭಿನಂದಿಸಿ ಶುಭ ಕೋರಿದ್ದಾರೆ