Sunday, October 19, 2025
  • Login
  • Register
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
Home State Karnataka News State Politics

ಸಿಎಂ ಸಿದ್ದರಾಮಯ್ಯ ಮತಾಂತರದ ರಾಯಭಾರಿ: ಪ್ರತಿಪಕ್ಷ ನಾಯಕ ಆರ್. ಅಶೋಕ ಆರೋಪ

PREM SHEKHAR PV by PREM SHEKHAR PV
1 month ago
Reading Time: 1 min read
A A
18
SHARES
50
VIEWS

ಪಾಲಿಕೆಯೇ ದಿವಾಳಿಯಾಗಿರುವಾಗ ಹೊಸ ಇಂಜಿನಿಯರ್‌ಗಳ ನೇಮಕ ಹೇಗೆ?

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತಾಂತರದ ರಾಯಭಾರಿಯಾಗಿದ್ದಾರೆ ಎಂದು ವಿಪಕ್ಷ ನಾಯಕ ಆರ್. ಅಶೋಕ ಗಂಭೀರ ಆರೋಪ ಮಾಡಿದ್ದಾರೆ. ಸಂವಿಧಾನದಲ್ಲಿ ಇಲ್ಲದ ಜಾತಿಗಳನ್ನು ಸೃಷ್ಟಿಸಿ, ಜಾತಿ ಸಮೀಕ್ಷೆಯ ಮೂಲಕ ಹಿಂದೂಗಳನ್ನು ತುಳಿಯುವ ಪ್ರಯತ್ನ ನಡೆಸಲಾಗುತ್ತಿದೆ ಎಂದು ಅವರು ದೂರಿದರು.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರ್. ಅಶೋಕ, “ಸಿಎಂ ಸಿದ್ದರಾಮಯ್ಯ ಸಂವಿಧಾನದಲ್ಲಿ ಇಲ್ಲದ ಜಾತಿಗಳನ್ನು ಹುಟ್ಟುಹಾಕಿದ್ದಾರೆ. ಈ ಜಾತಿ ಸಮೀಕ್ಷೆ ರದ್ದಾಗಲಿದೆ. ಇದರ ಮೂಲಕ ಮತಾಂತರಕ್ಕೆ ಪ್ರೇರಣೆ ನೀಡಲಾಗುತ್ತಿದೆ. ಯಾವುದೇ ಕ್ರಮ ಕೈಗೊಂಡರೂ ಸಂವಿಧಾನದ ಪ್ರಕಾರವೇ ಆಗಬೇಕು. ಮೀಸಲಾತಿಗೆ ಸಂಬಂಧಿಸಿದಂತೆ ನ್ಯಾಯಾಲಯದ ಆದೇಶವಿದೆ, ಅದರಂತೆ ಕ್ರಮ ಕೈಗೊಳ್ಳಬೇಕು,” ಎಂದರು.

ಸಿದ್ದರಾಮಯ್ಯ ಅವರು ಎಲ್ಲದರಲ್ಲೂ ಮುಸ್ಲಿಂ ಓಲೈಕೆಗೆ ಮುಂದಾಗಿದ್ದಾರೆ ಎಂದು ಆರೋಪಿಸಿದ ಅಶೋಕ, “ಅವರಿಗೆ ಹಿಂದೂಗಳ ಮತ ಬೇಕು, ಆದರೆ ಮತ ಪಡೆದ ನಂತರ ಹಿಂದೂ ಧರ್ಮದಲ್ಲಿ ಲೋಪವಿದೆ ಎಂದು ಹೇಳುತ್ತಾರೆ. ಮುಸ್ಲಿಮರಲ್ಲಿ ಮಹಿಳೆಯರು ಮಸೀದಿಗೆ ಹೋಗದಿರುವುದು ತಪ್ಪೆಂದು ಅವರಿಗೆ ಅನಿಸಿಲ್ಲ. ಹಿಂದೂ ಧರ್ಮವನ್ನು ಗುರಿಯಾಗಿಸುವ ಬದಲು ಇತರ ಧರ್ಮಗಳ ಬಗ್ಗೆಯೂ ಮಾತನಾಡಬೇಕು,” ಎಂದು ಟೀಕಿಸಿದರು.

ದಸರಾ ಹಬ್ಬವನ್ನು ನಾಡಹಬ್ಬ ಎಂದು ಕರೆಯುವ ಸಿಎಂ, ಮುಸ್ಲಿಂ ಹಬ್ಬಗಳನ್ನೂ ನಾಡಹಬ್ಬ ಎಂದು ಘೋಷಿಸಲಿ ಮತ್ತು ಆ ಹಬ್ಬಗಳನ್ನು ಹಿಂದೂಗಳಿಂದ ಉದ್ಘಾಟಿಸಲಿ ಎಂದು ಆಗ್ರಹಿಸಿದರು. “ದಸರಾ ಉದ್ಘಾಟನೆಯನ್ನು ಹಿಂದೂಗಳಿಂದ ಮಾಡಿಸಬೇಕಿತ್ತು. ಇದು ಮೈಸೂರು ಅರಸರ ಪರಂಪರೆಯಾಗಿದೆ. ಇದಕ್ಕೆ ಪ್ರತ್ಯೇಕ ಕಾನೂನು ತರಬೇಕು. ಮಸೀದಿಗಳ ಮುಂದೆ ಗಣೇಶ ಮೆರವಣಿಗೆಗೆ ತಡೆಯೊಡ್ಡುವಂತೆ ಕಾಂಗ್ರೆಸ್ ಸರ್ಕಾರ ಹಿಂದೂ-ಮುಸ್ಲಿಂ ನಡುವೆ ಒಡಕು ಮೂಡಿಸಿದೆ,” ಎಂದು ಆರೋಪಿಸಿದರು.

ಬಿಬಿಎಂಪಿಯ ದುಸ್ಥಿತಿ: ಬೆಂಗಳೂರಿನಲ್ಲಿ 5,000 ಕೋಟಿ ರೂ. ಬಿಡುಗಡೆಯಾಗಿದ್ದರೂ ರಸ್ತೆ ದುರಸ್ತಿಯಾಗಿಲ್ಲ ಎಂದು ಆರ್. ಅಶೋಕ ಟೀಕಿಸಿದರು. “ಕುಡಿಯುವ ನೀರಿನ ಘಟಕದ 20 ಲೀಟರ್ ನೀರಿನ ದರವನ್ನು 5 ರಿಂದ 10 ರೂ.ಗೆ ಏರಿಕೆ ಮಾಡಲಾಗಿದೆ. ತೈಲ, ಹಾಲಿನ ದರ ಏರಿಕೆಯಾಗಿದೆ, ಹೊಸದಾಗಿ ಕಸ ಶುಲ್ಕ ಹೇರಲಾಗಿದೆ. ಗಾಳಿಗೂ ಶುಲ್ಕ ವಿಧಿಸಿದರೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ‘ಬ್ರ್ಯಾಂಡ್ ಬೆಂಗಳೂರು’ ಸಾಕಾರವಾಗಲಿದೆ. 65-70,000 ಕೋಟಿ ರೂ.ನಷ್ಟು ಹೆಚ್ಚುವರಿ ತೆರಿಗೆ ಹೇರಲಾಗಿದೆ,” ಎಂದರು.

ಇಂಜಿನಿಯರ್‌ಗಳ ನೇಮಕಾತಿ ಸಾಧ್ಯವೇ?: ಕಾಂಗ್ರೆಸ್ ಸರ್ಕಾರ ಬಂದ ನಂತರ ಬಿಬಿಎಂಪಿಯನ್ನು ಐದು ಭಾಗವಾಗಿ ವಿಂಗಡಿಸಲಾಗಿದೆ. 198 ವಾರ್ಡ್‌ಗಳಿಗೆ 90% ಇಂಜಿನಿಯರ್‌ಗಳ ಕೊರತೆ ಇದೆ. “ಪಾಲಿಕೆ ದಿವಾಳಿಯಾಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ? ಸಾವಿರಕ್ಕೂ ಅಧಿಕ ನೇಮಕಾತಿಗೆ ಹಣ ಎಲ್ಲಿಂದ ತರುತ್ತಾರೆ? ಅನೇಕ ಕಾಮಗಾರಿಗಳು ಸ್ಥಗಿತಗೊಂಡಿವೆ. ಇಂತಹ ಸ್ಥಿತಿಯಲ್ಲಿ ಆಡಳಿತ ಸಾಧ್ಯವಿಲ್ಲ,” ಎಂದು ಪ್ರಶ್ನಿಸಿದರು.

ಪರಿಹಾರದಲ್ಲಿ ತಾರತಮ್ಯ: ವಯನಾಡಿನಲ್ಲಿ ಆನೆ ದಾಳಿಯಿಂದ ಸತ್ತವರಿಗೆ 15 ಲಕ್ಷ ರೂ. ಪರಿಹಾರ ನೀಡಲಾಗಿದೆ. ಆದರೆ, ಹಾಸನದ ಘಟನೆಯ ಸಂತ್ರಸ್ತರಿಗೆ ಮಾನವೀಯತೆ ಆಧಾರದಲ್ಲಿ ಹೆಚ್ಚಿನ ಪರಿಹಾರ ನೀಡಬೇಕಿತ್ತು. “ಸಿಎಂ ಸಿದ್ದರಾಮಯ್ಯನವರಿಗೆ ರಾಜ್ಯದ ಜನರ ಮೇಲೆ ಮಾನವೀಯತೆ ಇಲ್ಲ,” ಎಂದು ಆರೋಪಿಸಿದರು.

ಜಮೀನು ಸ್ವಾಧೀನ ವಿವಾದ: ಆನೇಕಲ್‌ನಲ್ಲಿ ಸಾವಿರಾರು ಎಕರೆ ಫಲವತ್ತಾದ ಜಮೀನು ಸ್ವಾಧೀನಕ್ಕೆ ಒಳಪಟ್ಟಿದೆ. ಬಿಡದಿಯಲ್ಲಿ ಹಿಂದಿನ ಸರ್ಕಾರ ರದ್ದುಗೊಳಿಸಿದ್ದ ಸ್ವಾಧೀನ ಪ್ರಕ್ರಿಯೆಯನ್ನು ಮತ್ತೆ ಆರಂಭಿಸಲಾಗಿದೆ. ಕೆಂಗೇರಿ, ಯಲಹಂಕ ಸೇರಿದಂತೆ 50,000 ಎಕರೆ ರೈತರ ಜಮೀನನ್ನು ಸ್ವಾಧೀನಕ್ಕೆ ಒಳಪಡಿಸಲು ಪ್ರಯತ್ನ ನಡೆಯುತ್ತಿದೆ ಎಂದು ಆರ್. ಅಶೋಕ ಆರೋಪಿಸಿದರು.

ಧರ್ಮಸ್ಥಳ ತನಿಖೆ ವಿವಾದ: ಧರ್ಮಸ್ಥಳ ವಿಚಾರದಲ್ಲಿ ಎಸ್‌ಐಟಿ ತನಿಖೆ ನಿಧಾನವಾಗಿದೆ ಎಂದು ಟೀಕಿಸಿದ ಅವರು, “ತನಿಖೆಗೆ ಒಳಪಟ್ಟವರು ಹೊರಗೆ ಬಂದು ಮಾಧ್ಯಮಗಳ ಜೊತೆ ಮಾತನಾಡುತ್ತಿದ್ದಾರೆ. ಇದರ ವಿರುದ್ಧ ನಾವು ಹೋರಾಟ ಮಾಡುತ್ತೇವೆ ಮತ್ತು ಕೋರ್ಟ್‌ಗೆ ಹೋಗುತ್ತೇವೆ. ಕಮ್ಯುನಿಸ್ಟ್‌ಗಳು ಧರ್ಮಸ್ಥಳವನ್ನು ಹಾಳುಮಾಡಲು ಪ್ರಯತ್ನಿಸಿದ್ದಾರೆ,” ಎಂದರು.

ವಕ್ಫ್ ತಿದ್ದುಪಡಿ ಸ್ವಾಗತ: ವಕ್ಫ್ ತಿದ್ದುಪಡಿ ಮಸೂದೆಯನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿರುವುದನ್ನು ಸ್ವಾಗತಿಸಿದ ಆರ್. ಅಶೋಕ, “ಇದರಿಂದ ಲಕ್ಷಾಂತರ ರೈತರ ಜಮೀನು ಮತ್ತು ದೇವಾಲಯಗಳ ಆಸ್ತಿ ಉಳಿಯಲಿದೆ,” ಎಂದರು.

Tags: Bureau Newsnewnewspoliticsstateಆದೇಶಆರೋಪಿಏರಿಕೆಕಾಂಗ್ರೆಸ್ಕಾನೂನುಕುಮಾರ್ಕ್ರಮಗಾಳಿಘಟನೆಡಿಡಿ.ಕೆ. ಶಿವಕುಮಾರ್ಡಿಸಿಎಂತಿದ್ದುಪಡಿದಸರಾದಿನದೇವಾಲಯದೇಶಧರ್ಮಸ್ಥಳನಾಡಹಬ್ಬನೇಮಕಾತಿನ್ಯಾಯಾಲಯದಪಕ್ಷಪರಂಪರೆಬೆಂಗಳೂರುಮತ್ತುಮುಸ್ಲಿಂಮೈಸೂರುಯುವರಾಜ್ಯರೈತವಿವಾದಸಂಬಂಧಸಂಬಂಧಿಸಿಎಂಸಿದ್ದರಾಮಯ್ಯಸುದ್ದಿಹಣಹಬ್ಬಹಾಕಿಹಾಸನಹಿಂದೂಹೊಸಹೋರಾಟ

Subscribe Now and Never Miss an Update!

Unsubscribe
  • Trending
  • Comments
  • Latest

ಮಳೆ ವೇಳೆ ರಸ್ತೆಗೆ ಡಾಂಬರು ಹಾಕಲು ವೆಟ್ ಮಿಕ್ಸಿಂಗ್ ವಿಧಾನ ಬಳಕೆ: ಡಿಸಿಎಂ ಡಿ.ಕೆ.ಶಿವಕುಮಾರ್

4

ಬುಲ್ಸ್‌ಗೆ ಸವಾಲಾಗದ ಬೆಂಗಾಲ್‌ಅಲಿರೇಜಾ ಮತ್ತೊಮ್ಮೆ ಮಿಂಚು; ವಾರಿಯರ್ಸ್‌ ವಿರುದ್ಧ 43-32 ಅಂತರದ ಭರ್ಜರಿ ಗೆಲುವು

4

Invest Karnataka 2025 Kicks Off with a Grand Opening, Showcasing Innovation, Investments, and Global Collaborations

3

ಭಾರತ vs ಇಂಗ್ಲೆಂಡ್ 3ನೇ ಏಕದಿನ: 142 ರನ್ ಭರ್ಜರಿ ಜಯ, 3-0 ಸರಣಿ ಕ್ಲೀನ್ ಸ್ವೀಪ್!

2

ರೈತರ ಉತ್ಪನ್ನಗಳಿಗೆ ಹೆಚ್ಚಿನ ಬೆಲೆಗಾಗಿ ಕೃಷಿ ಸಂಸ್ಕರಣ ಘಟಕಗಳ ಸದುಪಯೋಗ: ನಿರ್ಮಲಾ ಸೀತಾರಾಮನ್ ಸಲಹೆ

October 16, 2025

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಡಿಜಿಟಲ್ ಸಾರ್ವಜನಿಕ ಗ್ರಂಥಾಲಯಕ್ಕೆ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

October 16, 2025

ಭಾರತದ ಗೃಹ ಸಚಿವ ಶ್ರೀ ಅಮಿತ್ ಶಾ ದೆಹಲಿಯಲ್ಲಿ ‘ನೆರಳುಗಳ ಎಕ್ಸ್‌ಟ್ರಡಿಷನ್ – ಸವಾಲುಗಳು ಮತ್ತು ರಣನೀತಿಗಳು’ ಸಮ್ಮೇಳನವನ್ನು ಉದ್ಘಾಟಿಸುತ್ತಾರೆ

October 15, 2025

ಮೇಘಾಲಯ, ತ್ರಿಪುರಾ ಪತ್ರಕರ್ತರ ನಿಯೋಗ ಬಿಎಚ್‌ಇಎಲ್ ಎಲೆಕ್ಟ್ರಾನಿಕ್ಸ್ ವಿಭಾಗಕ್ಕೆ ಭೇಟಿ

October 15, 2025

Recent News

ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯ: ‘ಪಿಎಂ ಧನ್ ಧಾನ್ಯ ಕೃಷಿ ಯೋಜನೆ’ ಮತ್ತು ‘ದ್ವಿದಳ ಧಾನ್ಯಗಳಲ್ಲಿ ಆತ್ಮನಿರ್ಭರತೆಗಾಗಿ ಮಿಷನ್’ ಕಾರ್ಯಕ್ರಮದ ಉದ್ಘಾಟನೆ

October 11, 2025

ಮಳೆ ವೇಳೆ ರಸ್ತೆಗೆ ಡಾಂಬರು ಹಾಕಲು ವೆಟ್ ಮಿಕ್ಸಿಂಗ್ ವಿಧಾನ ಬಳಕೆ: ಡಿಸಿಎಂ ಡಿ.ಕೆ.ಶಿವಕುಮಾರ್

October 11, 2025

“ಸಿಎಂ ಆಗುವ ಕಾಲ ಹತ್ತಿರ ಬಂದಿದೆ ಎಂದು ಹೇಳಿಲ್ಲ, ಸುದ್ದಿ ತಿರುಚಲಾಗಿದೆ”: ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟನೆ

October 11, 2025

ಶೋಭಾ ಕಾರಂಡ್ಲಾಜೆ ಅವರಿಂದ ಎಂಎಸ್‌ಎಂಇ ಮಾರ್ಕೆಟಿಂಗ್ ಸಮ್ಮಿಟ್ ಉದ್ಘಾಟನೆ

October 10, 2025
  • Home
  • Privacy Policy
  • About Us
  • Advertise with us
  • Contact Us
Whatesapp +8050611655

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.

Welcome Back!

Login to your account below

Forgotten Password? Sign Up

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In
error:
  • Login
  • Sign Up
No Result
View All Result
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
News Post

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.