Tuesday, October 21, 2025
  • Login
  • Register
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
Home State Karnataka News Government

ಸಿಲಿಕಾನ್ ಸಿಟಿಗೆ ತಿರಸ್ಕಾರ: ಇವಿಎಂ ಬದಲು ಮತಪತ್ರ ಜಾರಿಗೆ ಕಾಂಗ್ರೆಸ್ ಸರಕಾರದ ನಿರ್ಧಾರಕ್ಕೆ ಬಿಜೆಪಿ ಖಂಡನೆ

PREM SHEKHAR PV by PREM SHEKHAR PV
2 months ago
Reading Time: 1 min read
A A
18
SHARES
50
VIEWS

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರವು ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಎಲೆಕ್ಟ್ರಾನಿಕ್ ಮತಯಂತ್ರ (ಇವಿಎಂ) ಬದಲಿಗೆ ಮತಪತ್ರ (ಬ್ಯಾಲೆಟ್ ಪೇಪರ್) ಜಾರಿಗೊಳಿಸುವ ನಿರ್ಧಾರವನ್ನು ತೀವ್ರವಾಗಿ ಖಂಡಿಸಿರುವ ಬಿಜೆಪಿ, ಈ ಕ್ರಮವನ್ನು “ಬೆಂಗಳೂರಿನ ಸಿಲಿಕಾನ್ ಸಿಟಿ ಹೆಸರಿಗೇ ತಿರಸ್ಕಾರ” ಎಂದು ಬಣ್ಣಿಸಿದೆ.

ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಚಿವ ಹಾಗೂ ಶಾಸಕ ಎಸ್. ಸುರೇಶ್ ಕುಮಾರ್, “2023ರ ಮೇ ತಿಂಗಳಿನಲ್ಲಿ ಇವಿಎಂ ಮೂಲಕ ಚುನಾಯಿತವಾದ ಕಾಂಗ್ರೆಸ್ ಸರಕಾರ, ಇವಿಎಂ ಬಗ್ಗೆ ಸಂಶಯ ವ್ಯಕ್ತಪಡಿಸುತ್ತಿದೆ. ಅಂತಹ ಸಂಶಯ ಇದ್ದರೆ ಅಸೆಂಬ್ಲಿ ವಿಸರ್ಜಿಸಿ, ಮತ್ತೆ ಚುನಾವಣೆಗೆ ಹೋಗಿ” ಎಂದು ಸವಾಲು ಹಾಕಿದರು.

“ನಾವು ಗೆದ್ದಾಗ ಇವಿಎಂ ಚೆನ್ನಾಗಿದೆ, ಸೋತಾಗ ಅದರಲ್ಲಿ ದೋಷ ಎಂಬ ಧೋರಣೆಯು ತಮ್ಮನ್ನು ದೊಡ್ಡ ರಾಜಕೀಯ ಪಕ್ಷ ಎಂದು ಕರೆದುಕೊಳ್ಳುವ ಕಾಂಗ್ರೆಸ್‌ಗೆ ಶೋಭೆ ತರುವುದಿಲ್ಲ” ಎಂದು ಅವರು ಟೀಕಿಸಿದರು. “ಕೃತಕ ಬುದ್ಧಿಮತ್ತೆ (ಆರ್ಟಿಫಿಶಿಯಲ್ ಇಂಟೆಲಿಜೆನ್ಸ್) ಯುಗದಲ್ಲಿ ಕಾಂಗ್ರೆಸ್ ಸರಕಾರ ಕೃತಕ ಅಜ್ಞಾನ (ಆರ್ಟಿಫಿಶಿಯಲ್ ಇಗ್ನೊರೆನ್ಸ್) ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದೆ. ಇದು ರಾಜ್ಯದ ಭವಿಷ್ಯಕ್ಕೆ ಮಾರಕ” ಎಂದು ಅವರು ಆಕ್ಷೇಪಿಸಿದರು.

“ಬೆಂಗಳೂರು ಸಿಲಿಕಾನ್ ಸಿಟಿಗೆ ಅವಮಾನ”
ಬೆಂಗಳೂರು ಭಾರತದ ಸಿಲಿಕಾನ್ ಸಿಟಿಯಾಗಿ ಗುರುತಿಸಿಕೊಂಡಿದೆ. ಆದರೆ, ಇವಿಎಂ ಬದಲಿಗೆ ಮತಪತ್ರಕ್ಕೆ ಮರಳುವ ಕಾಂಗ್ರೆಸ್ ಸರಕಾರದ ನಿರ್ಧಾರವು ಈ ಗುರುತಿಗೆ ತಿರಸ್ಕಾರ ತೋರುವಂತಿದೆ ಎಂದು ಸುರೇಶ್ ಕುಮಾರ್ ಖಂಡಿಸಿದರು. “ತಮ್ಮ ನಾಯಕರನ್ನು ಮೆಚ್ಚಿಸಲು, ಅವರ ತಾಳಕ್ಕೆ ಕುಣಿಯಲು ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಇದರಿಂದ ಫೋನ್‌ಪೇ, ಡಿಜಿಟಲ್ ಪಾವತಿಗಳನ್ನೂ ತೆಗೆದು, ಕೇವಲ ಕರೆನ್ಸಿಗೆ ಮರಳುವ ಭಯವಿದೆ” ಎಂದು ಅವರು ವ್ಯಂಗ್ಯವಾಡಿದರು.

“ಇವಿಎಂ ವಿಶ್ವಾಸಾರ್ಹತೆಗೆ ಸುಪ್ರೀಂ ಕೋರ್ಟ್‌ನ ಮಾನ್ಯತೆ”
ಇವಿಎಂ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಸುಪ್ರೀಂ ಕೋರ್ಟ್ ಒಪ್ಪಿಕೊಂಡಿದೆ. ಇತರ ದೇಶಗಳು ಕೂಡ ಭಾರತದ ಚುನಾವಣಾ ಪದ್ಧತಿಯನ್ನು ಮೆಚ್ಚಿಕೊಂಡಿವೆ. ಆದರೆ, ಕಾಂಗ್ರೆಸ್ ಸರಕಾರ ತಮ್ಮ ನಾಯಕರನ್ನು ಒಲಿಸಲು ಇವಿಎಂ ಬಳಕೆಯನ್ನು ವಿರೋಧಿಸುತ್ತಿದೆ ಎಂದು ಸುರೇಶ್ ಕುಮಾರ್ ಆರೋಪಿಸಿದರು. “ಉಪಮುಖ್ಯಮಂತ್ರಿಗಳು, ಕೈಗಾರಿಕಾ ಸಚಿವರು ಸೇರಿದಂತೆ ಎಲ್ಲರೂ ಈ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ. ಇದು ರಾಜ್ಯವನ್ನು ಹಳೆಯ ಯುಗಕ್ಕೆ ಕೊಂಡೊಯ್ಯುವ ಕ್ರಮ” ಎಂದು ಅವರು ಟೀಕಿಸಿದರು.

“ಕಾಂಗ್ರೆಸ್‌ಗೆ ಪ್ರಗತಿಯ ವಿರೋಧ”
“ನಮ್ಮ ದೇಶದಲ್ಲಿ ಡಿಜಿಟಲ್ ಮಾಧ್ಯಮದ ಮೂಲಕ ಕಾರ್ಯಕ್ರಮಗಳು, ಯೋಜನೆಗಳು ನಡೆಯುತ್ತಿವೆ. ಪ್ರಧಾನಮಂತ್ರಿಯವರು ಒಂದು ಬಟನ್ ಒತ್ತಿದರೆ ಕೋಟ್ಯಂತರ ರೈತರ ಖಾತೆಗೆ ನಿಮಿಷಗಳಲ್ಲಿ ಹಣ ಜಮೆಯಾಗುತ್ತದೆ. ಆದರೆ, ಕಾಂಗ್ರೆಸ್‌ಗೆ ಪ್ರಗತಿ ಮತ್ತು ಭವಿಷ್ಯದ ದೃಷ್ಟಿ ಎಂಬುದು ವಿರೋಧಾರ್ಥಕ ಪದಗಳಾಗಿವೆ” ಎಂದು ಅವರು ಕಿಡಿಕಾರಿದರು.

“ಕಾಂಗ್ರೆಸ್‌ನ ದಿವಾಳಿತನ”
ಕಾಂಗ್ರೆಸ್‌ನ ಕೆಲವು ನಾಯಕರ ಹೇಳಿಕೆಗಳನ್ನು ಉಲ್ಲೇಖಿಸಿದ ಸುರೇಶ್ ಕುಮಾರ್, “ಸಚಿವ ಡಾ. ಪರಮೇಶ್ವರ್ ಅವರು ‘ಹೆಂಗ್ ಗುದ್ತಾ ಇದ್ವಿ ಗೊತ್ತಾ’ ಎಂದಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು 1991ರ ಚುನಾವಣೆಯಲ್ಲಿ ಕಾಂಗ್ರೆಸ್‌ನವರು ಮೋಸ ಮಾಡಿ ತಮ್ಮನ್ನು ಸೋಲಿಸಿದ್ದಾಗಿ ಹೇಳಿದ್ದಾರೆ. ಸಿದ್ದರಾಮಯ್ಯನವರ ಆಪ್ತ ಸಿ.ಎಂ. ಇಬ್ರಾಹಿಂ ಅವರು, ಬಾದಾಮಿಯಲ್ಲಿ ಒಂದು ಮತಕ್ಕೆ 3 ಸಾವಿರ ರೂ. ಕೊಟ್ಟು ಗೆಲ್ಲಿಸಿದ್ದಾಗಿ, ಆ ಹಣವನ್ನು ಸಿದ್ದರಾಮಯ್ಯ ವಾಪಸ್ ಕೊಟ್ಟದ್ದಾಗಿ ಹೇಳಿದ್ದಾರೆ. ಇದು ಕಾಂಗ್ರೆಸ್‌ನ ಬೌದ್ಧಿಕ ಮತ್ತು ನೈತಿಕ ದಿವಾಳಿತನವನ್ನು ತೋರಿಸುತ್ತದೆ” ಎಂದರು.

“ಸತ್ಯ ಹೇಳಿದವರಿಗೆ ಶಿಕ್ಷೆ”
ಕಾಂಗ್ರೆಸ್‌ನಲ್ಲಿ ಸತ್ಯ ಮಾತನಾಡುವುದು ಅಪರಾಧವೆಂದು ಆರೋಪಿಸಿದ ಸುರೇಶ್ ಕುಮಾರ್, “ರಾಹುಲ್ ಗಾಂಧಿಯವರು ವಯನಾಡು ಮತ್ತು ಅಮೇಥಿಯಲ್ಲಿ ಇವಿಎಂ ಮೂಲಕ ಗೆದ್ದಿದ್ದಾರೆ. ಆದರೆ, 2024ರ ಲೋಕಸಭಾ ಚುನಾವಣೆಯಲ್ಲಿ ಮತಚೋರಿ ಎಂದು ಆರೋಪಿಸಿದ್ದಾರೆ. ಕಾಂಗ್ರೆಸ್‌ನ ರಾಜಣ್ಣ ಅವರು, ‘ಮತಪತ್ರ ತಯಾರಿಕೆಯೇ ನಮ್ಮ ಸರಕಾರದ ಕಾಲದಲ್ಲಿ ನಡೆದಿತ್ತು’ ಎಂದು ಸತ್ಯ ಹೇಳಿದ್ದಕ್ಕೆ ಅವರಿಗೆ ಶಿಕ್ಷೆಯಾಗಿದೆ” ಎಂದು ವಿವರಿಸಿದರು.

“ಶಿಲಾಯುಗಕ್ಕೆ ಮರಳುವ ಕಾಂಗ್ರೆಸ್”
“ಮತಪತ್ರ ಇದ್ದ ಕಾಲದಲ್ಲಿ ಫಲಿತಾಂಶಕ್ಕಾಗಿ ದಿನಗಟ್ಟಲೆ ಕಾಯಬೇಕಿತ್ತು. ಇವಿಎಂನಿಂದ ತಕ್ಷಣವೇ ಮಾಹಿತಿ ಲಭ್ಯವಾಗುತ್ತದೆ. ಕಾಗದರಹಿತ ಆಡಳಿತ, ಡಿಜಿಟಲ್ ವ್ಯವಹಾರಗಳು ಚಾಲ್ತಿಯಲ್ಲಿರುವಾಗ, ಕಾಂಗ್ರೆಸ್ ರಾಜ್ಯವನ್ನು ಶಿಲಾಯುಗಕ್ಕೆ ಕೊಂಡೊಯ್ಯಲು ಹೊರಟಿದೆ” ಎಂದು ಅವರು ಟೀಕಿಸಿದರು.

ಸುದ್ದಿಗೋಷ್ಠಿಯಲ್ಲಿ ವಿಧಾನಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್. ರವಿಕುಮಾರ್, ವಿಧಾನಪರಿಷತ್ ಮಾಜಿ ಸದಸ್ಯ ಅಮರನಾಥ್ ಪಾಟೀಲ್ ಮತ್ತು ಕೊಪ್ಪಳ ಜಿಲ್ಲಾಧ್ಯಕ್ಷ ದಡೇಸಗೂರು ಬಸವರಾಜ್ ಉಪಸ್ಥಿತರಿದ್ದರು.

Tags: amiroamironewsBureau Newsnewnewsಅಪರಾಧಆರೋಪಿಎಲೆಕಾಂಗ್ರೆಸ್ಕಾರ್ಯಕ್ರಮಕುಮಾರ್ಕ್ರಮಚುನಾವಣಾಚುನಾವಣೆಚುನಾವಣೆಯಡಾ.ಡಿಡಿಜಿಟಲ್ದಿನದೇಶದೊಡ್ಡನಿರ್ಧಾರಪಕ್ಷಪ್ರಗತಿಪ್ರಧಾನಮಂತ್ರಿಫಲಿತಾಂಶಬಸವರಾಜಬಿಜೆಪಿಬೆಂಗಳೂರುಭಾರತಮತ್ತುಯುಗಯುವಯೋಜನೆಯೋಜನೆಗಳರಾಜಕೀಯರಾಜ್ಯರೈತಲೋಕಸಭಾವಿಶ್ವಸಚಿವಸಿಟಿಸಿದ್ದರಾಮಯ್ಯಸುದ್ದಿಹಣಹಾಕಿ

Subscribe Now and Never Miss an Update!

Unsubscribe
  • Trending
  • Comments
  • Latest

ಮಳೆ ವೇಳೆ ರಸ್ತೆಗೆ ಡಾಂಬರು ಹಾಕಲು ವೆಟ್ ಮಿಕ್ಸಿಂಗ್ ವಿಧಾನ ಬಳಕೆ: ಡಿಸಿಎಂ ಡಿ.ಕೆ.ಶಿವಕುಮಾರ್

4

ಬುಲ್ಸ್‌ಗೆ ಸವಾಲಾಗದ ಬೆಂಗಾಲ್‌ಅಲಿರೇಜಾ ಮತ್ತೊಮ್ಮೆ ಮಿಂಚು; ವಾರಿಯರ್ಸ್‌ ವಿರುದ್ಧ 43-32 ಅಂತರದ ಭರ್ಜರಿ ಗೆಲುವು

4

Invest Karnataka 2025 Kicks Off with a Grand Opening, Showcasing Innovation, Investments, and Global Collaborations

3

ಭಾರತ vs ಇಂಗ್ಲೆಂಡ್ 3ನೇ ಏಕದಿನ: 142 ರನ್ ಭರ್ಜರಿ ಜಯ, 3-0 ಸರಣಿ ಕ್ಲೀನ್ ಸ್ವೀಪ್!

2

ಅಯೋಧ್ಯೆಯ ದೀಪಾವಳಿ ಮತ್ತೆ ಇತಿಹಾಸ ಸೃಷ್ಟಿಸಿದೆ: ದೀಪಗಳ ನದಿ, ಆರತಿಯ ಸಮೂಹ ಗಾಯನದೊಂದಿಗೆ 2 ವಿಶ್ವ ದಾಖಲೆ

October 20, 2025

ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥಸಂಚಲನಕ್ಕೆ ಅನುಮತಿ ನಿರಾಕರಣೆ: ಛಲವಾದಿ ನಾರಾಯಣಸ್ವಾಮಿ ಆಕ್ಷೇಪ

October 19, 2025

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ₹56,000 ಕೋಟಿ ಖರ್ಚು, ಮೂಲಸೌಕರ್ಯಕ್ಕೆ ₹5,229 ಕೋಟಿ ಕಡಿತ: CAG ವರದಿ

October 19, 2025

ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಅನುಮತಿ, ಕಾಂಗ್ರೆಸ್‌ಗೆ ಹೈಕೋರ್ಟ್‌ನಿಂದ ತೀವ್ರ ಮುಖಭಂಗ: ಬಿ.ವೈ ವಿಜಯೇಂದ್ರ

October 19, 2025

Recent News

ಮೇಘಾಲಯ, ತ್ರಿಪುರಾ ಪತ್ರಕರ್ತರ ನಿಯೋಗ ಬಿಎಚ್‌ಇಎಲ್ ಎಲೆಕ್ಟ್ರಾನಿಕ್ಸ್ ವಿಭಾಗಕ್ಕೆ ಭೇಟಿ

October 15, 2025

ರಾಷ್ಟ್ರೀಯ ಸುರಕ್ಷಾ ರಕ್ಷಣಾ ಸೇನೆಯ ೪೧ನೇ ಸ್ಥಾಪನಾ ದಿನಾಚರಣೆ:

October 14, 2025

ಐಐಟಿ ಧಾರವಾಡದಲ್ಲಿ ಧರ್ತಿ ಬಯೋನೆಸ್ಟ್ ಇಂಕ್ಯೂಬೇಶನ್ ಕೇಂದ್ರ ಉದ್ಘಾಟನೆ:

October 14, 2025

ಬುಲ್ಸ್‌ಗೆ ಸವಾಲಾಗದ ಬೆಂಗಾಲ್‌ಅಲಿರೇಜಾ ಮತ್ತೊಮ್ಮೆ ಮಿಂಚು; ವಾರಿಯರ್ಸ್‌ ವಿರುದ್ಧ 43-32 ಅಂತರದ ಭರ್ಜರಿ ಗೆಲುವು

October 13, 2025
  • Home
  • Privacy Policy
  • About Us
  • Advertise with us
  • Contact Us
Whatesapp +8050611655

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.

Welcome Back!

Login to your account below

Forgotten Password? Sign Up

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In
error:
  • Login
  • Sign Up
No Result
View All Result
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
News Post

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.