ಹೊಸಪೇಟೆ: ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ಚಂದ್ ಗೆಹ್ಲೋಟ್ ಅವರು ಇಂದು ವಿಜಯನಗರ ಜಿಲ್ಲೆಯ ಹಂಪಿಯಲ್ಲಿ ಇರುವ ಐತಿಹಾಸಿಕ ಸುಗ್ರೀವ ಗುಹೆಗೆ ಭೇಟಿ ನೀಡಿ ವೀಕ್ಷನೆ ನಡೆಸಿದರು.
ರಾಜ್ಯಪಾಲರೊಡನೆ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್, ವಿಜಯನಗರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಹಿತ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ವೀಕ್ಷನೆ ವೇಳೆ ಗಣ್ಯರು ರಾಮಾಯಣದಲ್ಲಿ ಪ್ರಮುಖ ಸ್ಥಾನ ಪಡೆದ ಈ ಗುಹೆಯ ಸಾಂಸ್ಕೃತಿಕ ಹಾಗೂ ಐತಿಹಾಸಿಕ ಮಹತ್ವದ ಕುರಿತು ಮಾಹಿತಿ ಪಡೆದು, ಕರ್ನಾಟಕದ ಅಮೂಲ್ಯ ಇತಿಹಾಸ-ಪರಂಪರೆಗಾಗಿ ಈ ಸ್ಥಳದ ವಿಶೇಷತೆಯನ್ನು ಮೆಚ್ಚಿದರು.
ಈ ವೇಳೆ ಸ್ಥಳೀಯ ಅಧಿಕಾರಿಗಳು ಹಂಪಿಯ ಹಿರಿಯತೆಯ ಕುರಿತಾದ ವಿವರಗಳನ್ನು ರಾಜ್ಯಪಾಲರಿಗೆ ವಿವರಿಸಿದರು.