Sunday, February 1, 2026
  • Login
  • Register
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
Home State Karnataka News Government

ಸಾವಿರ ಜನ ವಿರೋಧ ಮಾಡಲಿ, ನನ್ನ ನಂಬಿಕೆ ನನಗೆ: ಡಿಸಿಎಂ ಡಿ.ಕೆ. ಶಿವಕುಮಾರ್

PREM SHEKHAR PV by PREM SHEKHAR PV
11 months ago
Reading Time: 1 min read
A A
18
SHARES
50
VIEWS

ಬೆಂಗಳೂರು: “ಸಾವಿರ ಜನ ವಿರೋಧ ಮಾಡಲಿ, ನನ್ನ ನಂಬಿಕೆ ನನಗೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸ್ಪಷ್ಟವಾಗಿ ಹೇಳಿದ್ದಾರೆ.

ವಿಧಾನಸೌಧದಲ್ಲಿ ಆಯೋಜಿಸಿರುವ ಪುಸ್ತಕ ಮೇಳ ಉದ್ಘಾಟನಾ ಕಾರ್ಯಕ್ರಮದ ನಂತರ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಗುರುವಾರ ಪ್ರತಿಕ್ರಿಯೆ ನೀಡಿದರು.

ಕುಂಭಮೇಳ ಹಾಗೂ ಇಶಾ ಫೌಂಡೇಶನ್ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಿಮ್ಮ ನಿಲುವಿನ ಬಗ್ಗೆ ಚರ್ಚೆಯಾಗುತ್ತಿದೆಯಲ್ಲಾ ಎಂದು ಕೇಳಿದಾಗ, “ನಾನು ನೊಣವಿನಕೆರೆ ಮಠಕ್ಕೆ ಹೋಗುತ್ತೇನೆ. ಅದಕ್ಕೆ ನಮ್ಮವರು, ‘ನೀವು ನಮ್ಮ ಮಠಕ್ಕೆ ಬರುವುದಿಲ್ಲ, ಅಲ್ಲಿಗೆ ಹೋಗುತ್ತೀರಲ್ಲಾ’ ಎಂದು ಕೇಳುತ್ತಾರೆ. ನನ್ನ ನಂಬಿಕೆ ಇದ್ದ ಕಡೆ ನಾನು ಹೋಗುತ್ತೇನೆ. ನನಗೆ ಎಲ್ಲಿ ಒಳ್ಳೆಯದಾಗುತ್ತದೆ ಎಂದು ಅನಿಸುತ್ತದೆಯೋ ಅಲ್ಲಿಗೆ ಹೋಗುತ್ತೇನೆ. ನನ್ನ ನಂಬಿಕೆ ನನ್ನದು” ಎಂದು ಹೇಳಿದರು.

“ನನ್ನ ಕ್ಷೇತ್ರದಲ್ಲಿ ನನಗೆ ಮತ ಹಾಕಿರುವವರಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರು ಹೆಚ್ಚಾಗಿದ್ದಾರೆ. ನನ್ನ ಕ್ಷೇತ್ರದಲ್ಲಿ ಶೇಕಡಾ 99 ರಷ್ಟು ಬ್ರಾಹ್ಮಣ ಸಮುದಾಯದವರು ನನಗೆ ಮತ ಹಾಕುತ್ತಾರೆ. ಹೀಗಾಗಿ ಬ್ರಾಹ್ಮಣರೆಲ್ಲರೂ ಬಿಜೆಪಿಗೇ ಮತ ಹಾಕುತ್ತಾರೆ ಎಂದು ಹೇಳಲು ಸಾಧ್ಯವೇ? ನಾನು ಎಂದಿಗೂ ಜಾತಿ ಮೇಲೆ ರಾಜಕಾರಣ ಮಾಡುವುದಿಲ್ಲ. ನೀತಿ ಮೇಲೆ ರಾಜಕಾರಣ ಮಾಡುತ್ತೇನೆ” ಎಂದು ಹೇಳಿದರು.

“ಕಾಂಗ್ರೆಸ್ ಪಕ್ಷ ಎಂದರೆ ಎಲ್ಲಾ ಧರ್ಮಗಳ ಸಮಾಗಮ. ಎಲ್ಲರನ್ನೂ ಒಟ್ಟಾಗಿ ತೆಗೆದುಕೊಂಡು ಹೋಗುವುದು ನಮ್ಮ ಪಕ್ಷದ ಸಿದ್ಧಾಂತ. ನಾವು ಅಧಿಕಾರ, ಸ್ಥಾನಮಾನ ನೀಡುವಾಗ ಎಲ್ಲರನ್ನು ಪರಿಗಣಿಸಿಯೇ ನೀಡುತ್ತೇವೆ. ನಮ್ಮ ಸರ್ಕಾರ ಅಧಿಕಾರದಲ್ಲಿದೆ. ಹಾಗೆಂದು ನಾವು ಧಾರ್ಮಿಕ ದತ್ತಿ ಇಲಾಖೆ ಮುಚ್ಚಿದ್ದೇವೆಯೇ? ಬಿಜೆಪಿ ಅಧಿಕಾರದಲ್ಲಿ ಇದ್ದಾಗ ವಕ್ಫ್ ಬೋರ್ಡ್ ಮುಚ್ಚಲಿಲ್ಲ ಯಾಕೆ? ಅವರು ಬೇರೆಯವರಿಗೆ ಟಿಕೆಟ್ ನೀಡದೆ ಇರಬಹುದು, ಆದರೆ ಕ್ರೈಸ್ತ ಅಭಿವೃದ್ಧಿ ಮಂಡಳಿ ಮುಚ್ಚಿದ್ದಾರಾ? ಇಲ್ಲ. ಇದಕ್ಕೆ ಕಾರಣ ನಮ್ಮ ಸಂವಿಧಾನ. ನಮ್ಮ ದೇಶದಲ್ಲಿ ಎಲ್ಲಾ ಧರ್ಮಕ್ಕೂ ಸಮಾನ ಅವಕಾಶ ನೀಡಲಾಗಿದೆ. ಅವರೆಲ್ಲ ಬೇರೆ ನೀರು ಕುಡಿಯಲು ಸಾಧ್ಯವೇ? ಈ ಭೂಮಿಗೆ, ಗಾಳಿಗೆ ಜಾತಿ, ಧರ್ಮದ ತಾರತಮ್ಯ ಇದೆಯೇ?” ಎಂದು ಪ್ರತಿ ಪ್ರಶ್ನೆ ಹಾಕಿದರು.

ರಾಹುಲ್ ಗಾಂಧಿ ದೊಡ್ಡ ಶಿವಭಕ್ತರು:

“ಈ ಹಿಂದೆ ಎಸ್ ಎಂ ಕೃಷ್ಣ ಅವರ ನೇತೃತ್ವದಲ್ಲಿ ಚುನಾವಣೆ ಎದುರಿಸಿದಾಗ ಚುನಾವಣೆ ಯಾತ್ರೆಗೆ ‘ಪಾಂಚಜನ್ಯ’ ಎಂದು ಹೆಸರು ಇಟ್ಟಿದ್ದೆವು. ಆಗ ಕೆಲವರು ಸೋನಿಯಾ ಗಾಂಧಿ ಅವರ ಬಳಿ ಹೋಗಿ ದೂರು ಕೊಟ್ಟರು. ಆದರೆ ಅವರು ಅದಕ್ಕೆ ತಡೆ ನೀಡಲಿಲ್ಲ. ಹಿಂದೂಗಳನ್ನು ಬಿಜೆಪಿ ಹಾಗೂ ಆರ್ ಎಸ್ ಎಸ್ ನವರಿಗೆ ಬಿಟ್ಟುಕೊಟ್ಟಿದ್ದೇವಾ? ದೇವರ ಹೆಸರು ಇದೆ ಎನ್ನುವ ಕಾರಣಕ್ಕೆ ಸಿದ್ದರಾಮಯ್ಯ ಹಾಗೂ ನನ್ನ ಹೆಸರು ಬದಲಿಸಲು ಆಗುತ್ತದೆಯೇ? ನಮ್ಮ ನಾಯಕ ರಾಹುಲ್ ಗಾಂಧಿ ಅವರು ದೊಡ್ಡ ಶಿವಭಕ್ತರು. ಮುರುಘಾ ಮಠದಲ್ಲಿ ಅವರು ಲಿಂಗ ದೀಕ್ಷೆ ಸ್ವೀಕರಿಸಿದರು” ಎಂದು ವಿವರಿಸಿದರು.

ಧರ್ಮ, ನಂಬಿಕೆ ವಿಚಾರದಲ್ಲಿ ರಾಜಕೀಯ ಬೇಡ:

“ಕುಂಭಮೇಳಕ್ಕೂ ಇದಕ್ಕೂ ಏನು ಸಂಬಂಧ? ನೀರಿಗೆ ಜಾತಿ, ಧರ್ಮ ಇದೆಯಾ? ಕುಂಭಮೇಳ, ಗಂಗಾ, ಕಾವೇರಿ ನಮ್ಮ ಪಾಲಿನ ಪವಿತ್ರ ನದಿಗಳು. ಮೊದಲಿನಿಂದಲೂ ಆಚರಣೆ ಮಾಡಿಕೊಂಡು ಬಂದಿರುವ ಪದ್ಧತಿ ಇದು. ಇದರಲ್ಲಿ ಯಾವುದೇ ರಾಜಕಾರಣ ಇಲ್ಲ. ಧರ್ಮ, ನಂಬಿಕೆ ವಿಚಾರದಲ್ಲಿ ರಾಜಕೀಯ ಬೆರೆಸುವುದು ಬೇಡ. ನಮ್ಮ ಸ್ಪೀಕರ್ ಸಹ ಕುಂಭಮೇಳಕ್ಕೆ ಹೋಗಬೇಕು ಎಂದು ಹೇಳಿದ್ದರು. ನಾನು ಕುಂಭ ಮೇಳದ ಆಯೋಜನೆಯನ್ನು ನೋಡಿಕೊಂಡು ಬಂದಿದ್ದೇನೆ. ನಾವು ಕಾವೇರಿ ಆರತಿ ಮಾಡಬೇಕು ಎಂದು ತೀರ್ಮಾನಿಸಿದ್ದೇವೆ. ಈ ಹಿನ್ನೆಲೆಯಲ್ಲೂ ಇದನ್ನು ಗಮನಿಸಿದ್ದೇನೆ” ಎಂದು ತಿಳಿಸಿದರು.

ಇಶಾ ಫೌಂಡೇಶನ್ ಕಾರ್ಯಕ್ರಮದಲ್ಲಿ ಭಾಗಿಯಾಗಿರುವುದಕ್ಕೆ ಕಾಂಗ್ರೆಸ್ ಪಕ್ಷದಲ್ಲಿ ವಿರೋಧ ವ್ಯಕ್ತವಾಗಿದೆ ಎಂದು ಕೇಳಿದಾಗ, “ನಾನು ಶಿವರಾತ್ರಿ ಹಬ್ಬದ ಪ್ರಯುಕ್ತ ಆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೆ. ಇದು ನನ್ನ ಸ್ವಂತ ನಂಬಿಕೆ. ಯಾರೋ ಟ್ವೀಟ್ ಮಾಡುತ್ತಾರೆ, ಯಾರೋ ಮಾತನಾಡುತ್ತಾರೆ ಎಂದು ನಾನು ಎಲ್ಲದಕ್ಕೂ ಉತ್ತರ ನೀಡಲು ಆಗುವುದಿಲ್ಲ” ಎಂದು ತಿಳಿಸಿದರು.

ನಿಮ್ಮ ಈ ನಡೆಯನ್ನು ಬಿಜೆಪಿ ನಾಯಕರು ಸ್ವಾಗತಿಸಿದ್ದಾರೆ ಎಂದು ಹೇಳಿದಾಗ, “ಬಿಜೆಪಿಯವರು ಸ್ವಾಗತಿಸುವುದೂ ಬೇಡ, ಬೇರೆ ಯಾರೂ ಸ್ವಾಗತಿಸುವುದು ಬೇಡ. ನೀವು (ಮಾಧ್ಯಮಗಳು) ಇದನ್ನು ಹೆಚ್ಚು ಚರ್ಚೆ ಮಾಡುವುದೂ ಬೇಡ. ಇದು ನನ್ನ ವೈಯಕ್ತಿಕ ವಿಚಾರ. ಸದ್ಗುರು ಅವರು ನಮ್ಮ ರಾಜ್ಯದವರು, ಮೈಸೂರಿನವರು. ಅವರು ಸೇವ್ ಸಾಯಿಲ್ ಸೇರಿದಂತೆ ಅನೇಕ ಉತ್ತಮ ಕಾರ್ಯ ಮಾಡುತ್ತಿದ್ದಾರೆ. ನನ್ನ ಮನೆಗೆ ಬಂದು ಬಹಳ ಗೌರವದಿಂದ ಆಹ್ವಾನ ನೀಡಿದರು. ಅವರ ಆಚಾರ ವಿಚಾರವನ್ನು ನಾನು ಮೆಚ್ಚಿದ್ದೇನೆ. ಇದರ ಹೊರತಾಗಿ ಅವರು ಹಿಂದೆ ಏನು ಹೇಳಿಕೆ ನೀಡಿದ್ದಾರೆ ಎಂಬುದು ನನಗೆ ಗೊತ್ತಿಲ್ಲ. ರಾಹುಲ್ ಗಾಂಧಿ ನಮ್ಮ ನಾಯಕರು. ನಮ್ಮ ಎದುರು ಯಾರಾದರೂ ಅವರ ಬಗ್ಗೆ ಮಾತನಾಡಿದರೆ ನಾವು ಅದಕ್ಕೆ ತಕ್ಕ ಉತ್ತರ ನೀಡುತ್ತೇವೆ” ಎಂದು ತಿಳಿಸಿದರು.

ನಾವು ಅರ್ಜಿ ಹಾಕಿಕೊಂಡು ಹುಟ್ಟುವುದಿಲ್ಲ

“ಹಿಂದೂ ಆಗಿ ಹುಟ್ಟಿದ್ದೇನೆ, ಹಿಂದೂ ಆಗಿ ಸಾಯುತ್ತೇನೆ” ಎಂಬ ನಿಮ್ಮ ಹೇಳಿಕೆಯನ್ನು ಬಿಜೆಪಿಯವರು ಸ್ವಾಗತಿಸುತ್ತಿದ್ದಾರೆ ಎಂದು ಹೇಳಿದಾಗ, “ನಾನು ಬೇರೆ ಧರ್ಮಕ್ಕೆ ಯಾಕೆ ಹೋಗಲಿ. ನನಗೆ ಎಲ್ಲಾ ಧರ್ಮಗಳ ಬಗ್ಗೆ ಪ್ರೀತಿ ಇದೆ. ಮಾನವ ಧರ್ಮಕ್ಕೆ ಜಯವಾಗಲಿ, ಧರ್ಮದಿಂದಲೇ ವಿಶ್ವಕ್ಕೆ ಶಾಂತಿ ಸಿಗಲಿ ಎಂಬುದನ್ನು ನಾನು ನಂಬಿದ್ದೇನೆ. ನಾವು ಇಂತಹ ಧರ್ಮದಲ್ಲೇ ಹುಟ್ಟಬೇಕು ಎಂದು ಅರ್ಜಿ ಹಾಕಿಕೊಂಡಿರಲಿಲ್ಲ. ಅಂಬೇಡ್ಕರ್ ಹಿಂದೂ ಧರ್ಮದಲ್ಲಿ ಹುಟ್ಟಿ ಬೌದ್ಧ ಧರ್ಮಕ್ಕೆ ಸೇರಿದರು. ಅದು ಅವರ ವೈಯಕ್ತಿಕ ನಿರ್ಧಾರ. ನನ್ನ ವಿಚಾರವನ್ನೂ ಎಲ್ಲರೂ ಚರ್ಚೆ ಮಾಡಲಿ ಬಿಡಿ” ಎಂದರು.

ಟೀಕೆ ಮಾಡುವವರು ಅಧಿವೇಶನದಲ್ಲಿ ಮಾತನಾಡಲಿ

ಬೆಂಗಳೂರನ್ನು ನೀವು ಚೂರು ಚೂರು ಮಾಡಲು ಹೊರಟಿದ್ದೀರಿ ಎಂದು ಟೀಕೆ ಮಾಡಲಾಗುತ್ತಿದೆ ಎಂದು ಕೇಳಿದಾಗ, “ಟೀಕೆ ಮಾಡುವವರು ವಿಧಾನ ಮಂಡಲ ಅಧಿವೇಶನದಲ್ಲಿ ಬಂದು ಮಾತನಾಡಲಿ, ಅಲ್ಲಿ ಉತ್ತರ ಕೊಡುತ್ತೇನೆ” ಎಂದು ಸವಾಲು ಹಾಕಿದರು.

ಅಮಿತ್ ಶಾ ಅವರು ಕ್ಷೇತ್ರ ಮರುವಿಂಗಡಣೆ ಬಗ್ಗೆ ನೀಡಿರುವ ಹೇಳಿಕೆ ಬಗ್ಗೆ ಕೇಳಿದಾಗ, “ನಮ್ಮ ಪಕ್ಷ ಒಂದು ದೇಶ, ಒಂದು ಚುನಾವಣೆಯನ್ನು ವಿರೋಧಿಸಿದ್ದು, ನಾವು ಅದಕ್ಕೆ ಬದ್ಧ. ಮಹಿಳಾ ಮೀಸಲಾತಿ ವಿಚಾರದಲ್ಲಿ ನಮ್ಮ ಬೆಂಬಲ ಇದೆ. ಇದನ್ನು ಜಾರಿ ಮಾಡಲು ಸೋನಿಯಾ ಗಾಂಧಿ ಅವರೇ ಒತ್ತಾಯಿಸುತ್ತಿದ್ದಾರೆ. ಸರ್ಕಾರಕ್ಕೆ ಮೂರನೇ ಎರಡರಷ್ಟು ಬಹುಮತ ಇದ್ದಾಗ ಮರುವಿಂಗಡಣೆ ಮಾಡಬಹುದು. ಆದರೆ ಅಷ್ಟು ಸಂಖ್ಯಾಬಲ ಸರ್ಕಾರಕ್ಕೆ ಇಲ್ಲ” ಎಂದು ತಿಳಿಸಿದರು.

Tags: ಅಭಿವೃದ್ಧಿಅವಕಾಶಆಚರಣೆಉತ್ತರಕಾಂಗ್ರೆಸ್ಕಾರ್ಯಕ್ರಮಕುಮಾರ್ಕೃಷ್ಣಕೆರೆಕ್ರಮಕ್ರೈಸ್ತಗಾಳಿಚುನಾವಣೆಚುನಾವಣೆಯಡಿಡಿ.ಕೆ. ಶಿವಕುಮಾರ್ಡಿಸಿಎಂತೀರದೇವರದೇಶದೊಡ್ಡಧಾರ್ಮಿಕನದಿನದಿಗಳನಿರ್ಧಾರನೀತಿನೀರುಪಕ್ಷಪಂಗಡದಪರಿಶಿಷ್ಟಬಿಜೆಪಿಬೆಂಗಳೂರುಬೆಂಬಲಭೂಮಿಮಠಮಹಿಳಾಮೈಸೂರಿನಯೋಜನೆರಾಜಕೀಯರಾಜ್ಯರಾತ್ರಿಲಿಂಗವಿಶ್ವಸಂಬಂಧಸಮುದಾಯಸಮುದಾಯದಸಿಎಂಸಿದ್ದರಾಮಯ್ಯಹಬ್ಬಹಬ್ಬದಹಾಕಿಹಿಂದೂ

Subscribe Now and Never Miss an Update!

Unsubscribe
  • Trending
  • Comments
  • Latest

ಮಳೆ ವೇಳೆ ರಸ್ತೆಗೆ ಡಾಂಬರು ಹಾಕಲು ವೆಟ್ ಮಿಕ್ಸಿಂಗ್ ವಿಧಾನ ಬಳಕೆ: ಡಿಸಿಎಂ ಡಿ.ಕೆ.ಶಿವಕುಮಾರ್

4

ಬುಲ್ಸ್‌ಗೆ ಸವಾಲಾಗದ ಬೆಂಗಾಲ್‌ಅಲಿರೇಜಾ ಮತ್ತೊಮ್ಮೆ ಮಿಂಚು; ವಾರಿಯರ್ಸ್‌ ವಿರುದ್ಧ 43-32 ಅಂತರದ ಭರ್ಜರಿ ಗೆಲುವು

4

Invest Karnataka 2025 Kicks Off with a Grand Opening, Showcasing Innovation, Investments, and Global Collaborations

3

ಭಾರತ vs ಇಂಗ್ಲೆಂಡ್ 3ನೇ ಏಕದಿನ: 142 ರನ್ ಭರ್ಜರಿ ಜಯ, 3-0 ಸರಣಿ ಕ್ಲೀನ್ ಸ್ವೀಪ್!

2

17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ‘ತೀರ್ಥರೂಪ ತಂದೆಯವರಿಗೆ’ ಚಿತ್ರಕ್ಕೆ ಭರ್ಜರಿ ಪ್ರಶಂಸೆ

January 31, 2026

ಹರಿಯಾಣಾ ಚಾಂಪಿಯನ್ಸ್ ಆಗಿ ಕಿರೀಟ ಪಡೆಯಿತು

January 30, 2026

ಕರ್ನಾಟಕದ ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆಯಲ್ಲಿ “ಸೆಂಟ್ರಲ್ ಕಮಾಂಡ್ ಸೆಂಟರ್” ಉದ್ಘಾಟನೆಗೆ ದಿನಗಣನೆ ಆರಂಭವಾಗಿದೆ.

January 30, 2026

ಕರ್ನಾಟಕ ಮತ್ತು ಗೋವಾ ಎನ್‌ಸಿಸಿ ನಿರ್ದೇಶನಾಲಯ ಸತತ ಎರಡನೇ ವರ್ಷ ಪ್ರಧಾನಮಂತ್ರಿಗಳ ಬ್ಯಾನರ್ ಮತ್ತು ಟ್ರೋಫಿ ಗೆದ್ದು ಇತಿಹಾಸ ಸೃಷ್ಟಿ

January 29, 2026

Recent News

ಪ್ರತಿ ಪಂದ್ಯದಲ್ಲೂ ಗೆಲ್ಲುವ ಮಾರ್ಗ ಕಂಡುಕೊಂಡಿದ್ದೇವೆ: ಸ್ಮೃತಿ ಮಂಧಾನಾ

January 22, 2026

60 ವರ್ಷ ಮೇಲ್ಪಟ್ಟ ಪತ್ರಕರ್ತರಿಗೆ ಚಿಕಿತ್ಸೆಯಲ್ಲಿ ಶೇ.75 ರಿಯಾಯಿತಿ: ಡಾ. ಶರಣಪ್ರಕಾಶ ಪಾಟೀಲ್

January 22, 2026

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬೀನ್ ಅವಿರೋಧ ಆಯ್ಕೆ: ವಿಕಸಿತ ಭಾರತ ಗುರಿಗೆ ಹೊಸ ಉತ್ಸಾಹ

January 21, 2026

ಬೆಂಗಳೂರಿನಲ್ಲಿ ಏಳನೇ ಅಂತರರಾಷ್ಟ್ರೀಯ ಎಲೆಕ್ಟ್ರಾನಿಕ್ ವಾರ್‌ಫೇರ್ ಸಮ್ಮೇಳನ ಆರಂಭ

January 21, 2026
  • Home
  • Privacy Policy
  • About Us
  • Advertise with us
  • Contact Us
Whatesapp +8050611655

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.

Welcome Back!

Login to your account below

Forgotten Password? Sign Up

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In
error:
  • Login
  • Sign Up
No Result
View All Result
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
News Post

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.