ಅಧಿವೇಶನದಲ್ಲಿ ಬಿಜೆಪಿ ಸದಸ್ಯರು ಈ ವಿಷಯವನ್ನು ತೀವ್ರವಾಗಿ ಎತ್ತಿ ಹಿಡಿದು, ಅಬಕಾರಿ ಸಚಿವ ಆರ್.ಬಿ. ತಿಮ್ಮಾಪೂರ್ ಅವರ ರಾಜೀನಾಮೆಗೆ ಒತ್ತಾಯಿಸಿದ್ದರು. ರಾತ್ರಿಯಂತೂ ವಿಧಾನ ಸೌಧದಲ್ಲಿ ಪ್ರತಿಭಟನೆ ನಡೆಸಿ, ಭಜನೆಗಳು ಮತ್ತು ಘೋಷಣೆಗಳ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದರು.
ಕಾಂಗ್ರೆಸ್ ಸರ್ಕಾರದ ಕೊನೆಯ ಎರಡೂವರೆ ವರ್ಷಗಳಲ್ಲಿ ಹಗರಣಗಳೇ ಪ್ರಮುಖ ಸಾಧನೆಗಳಾಗಿವೆ ಎಂದು ವ್ಯಂಗ್ಯವಾಡಿರುವ ಅಶೋಕ್, ಈ ಭ್ರಷ್ಟಾಚಾರದ ವಿರುದ್ಧ ಹೋರಾಟ ಮುಂದುವರೆಯುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.
ಈ ಆರೋಪಗಳಿಗೆ ಸಂಬಂಧಿಸಿ ಅಬಕಾರಿ ಸಚಿವರು ರಾಜೀನಾಮೆ ನೀಡದಿದ್ದರೆ ಸರ್ಕಾರದ ಮೇಲೆ ಇನ್ನಷ್ಟು ಒತ್ತಡ ಹೇರುವುದಾಗಿ ಬಿಜೆಪಿ ಸೂಚಿಸಿದೆ.











