Thursday, June 11, 2026
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
Home app amiro news

ಡಿ.ಕೆ. ಶಿವಕುಮಾರ್: ಕೆ.ಹೆಚ್. ಪಾಟೀಲರು ನನಗೆ ಮೊದಲ ಬಿ-ಫಾರಂ ನೀಡಿ ಅವಕಾಶ ಕಲ್ಪಿಸಿದರು

Ranjitha by Ranjitha
2 weeks ago
Reading Time: 1 min read
A A
18
SHARES
50
VIEWS

ಬೆಂಗಳೂರ:

ಕೆ.ಹೆಚ್. ಪಾಟೀಲ್ ಅವರು ತಮಗೆ ಮೊದಲ ಬಾರಿಗೆ ವಿಧಾನಸಭೆ ಚುನಾವಣೆಗೆ ಬಿ-ಫಾರಂ ನೀಡಿ ರಾಜಕೀಯ ಪಯಣ ಆರಂಭಿಸಲು ಅವಕಾಶ ಕಲ್ಪಿಸಿದ್ದು ಅವರಿಗೆ ಇಂದಿನ ಸ್ಥಾನಮಾನ ಸಿಗಲು ಕಾರಣವಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸ್ಮರಿಸಿದರು.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಸೋಮವಾರ ನಡೆದ ಮಾಜಿ ಸಚಿವ ಹಾಗೂ ಕೆಪಿಸಿಸಿ ಮಾಜಿ ಅಧ್ಯಕ್ಷ ಕೆ.ಹೆಚ್. ಪಾಟೀಲ್ ಅವರ 101ನೇ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪಾಟೀಲರು, ವೀರಪ್ಪ ಮೊಯ್ಲಿ ಹಾಗೂ ದೆಹಲಿ ನಾಯಕರು ತಮ್ಮನ್ನು ಗುರುತಿಸಿ ಬಿ-ಫಾರಂ ನೀಡಿದ್ದಕ್ಕೆ ಇಂದಿನ ಸ್ಥಿತಿಗೆ ಬರಲು ಸಾಧ್ಯವಾಯಿತು ಎಂದರು.

“ಪಾಟೀಲರಿಗೂ ನನಗೂ 37 ವರ್ಷಗಳ ಅಂತರವಿದೆ. ನಾನು ಅವರ ಜೊತೆ ವಿದ್ಯಾರ್ಥಿ ನಾಯಕನಾಗಿ ಕೆಲಸ ಮಾಡಿದ್ದೇನೆ. ಪಾಟೀಲರು ಅಧ್ಯಕ್ಷರಾಗಿದ್ದಾಗ ಹಾಗೂ ವೀರಪ್ಪ ಮೊಯ್ಲಿ ವಿರೋಧ ಪಕ್ಷದ ನಾಯಕರಾಗಿದ್ದಾಗ ಇಬ್ಬರೂ ಸೇರಿ ನನಗೆ ಮೊದಲ ಬಾರಿಗೆ ವಿಧಾನಸಭೆ ಚುನಾವಣೆ ಟಿಕೆಟ್ ನೀಡಿದರು. ನಂತರ ಅವರ ಜೊತೆ ಶಾಸಕ, ಪಕ್ಷದ ಕಾರ್ಯದರ್ಶಿ ಹಾಗೂ ಮಂತ್ರಿಯಾಗಿ ಕೆಲಸ ಮಾಡಿದ್ದೇನೆ” ಎಂದು ಶಿವಕುಮಾರ್ ವಿವರಿಸಿದರು.

ಪಾಟೀಲರ ಆಚಾರ-ವಿಚಾರಗಳನ್ನು ಅರ್ಥಮಾಡಿಕೊಂಡಿದ್ದೇನೆ ಎಂದ ಅವರು, “ಇಟ್ಟರೆ ಸಗಣಿಯಾಗು, ತಟ್ಟಿದರೆ ಬೆರಣಿಯಾಗು, ಸುಟ್ಟರೆ ಹಣೆಗೆ ವಿಭೂತಿಯಾಗು” ಎಂಬ ಗೋವಿನ ಹಾಡು ಆಗಾಗ್ಗೆ ನೆನಪಾಗುತ್ತದೆ ಎಂದು ಹೇಳಿದರು. ಪಾಟೀಲರ ಚಿಂತನೆಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ಅವರು ಶ್ಲಾಘಿಸಿದರು.

ಅರಣ್ಯ ಸಚಿವರಾಗಿದ್ದ ಪಾಟೀಲರು ರೈತರ ಬದುಕು, ಅರಣ್ಯ ರಕ್ಷಣೆ ಹಾಗೂ ಸಹಕಾರ ಕ್ಷೇತ್ರದಲ್ಲಿ ದೂರದೃಷ್ಟಿ ತೋರಿದ್ದರು. “ಒಂದು ಊರಿಗೆ ಒಂದು ಶಾಲೆ, ಒಂದು ಸಹಕಾರಿ ಸಂಘ ಇರಬೇಕು” ಎಂಬ ಸಹಕಾರ ತತ್ವವನ್ನು ಬೆಳೆಸಿದವರು ಎಂದು ಉಪಮುಖ್ಯಮಂತ್ರಿ ತಿಳಿಸಿದರು.

ಚುನಾವಣೆ ಟಿಕೆಟ್ ನೀಡುವಾಗ ಕೆಲವರ ಭಿನ್ನಾಭಿಪ್ರಾಯ ಇತ್ತು ಆದರೆ ದೆಹಲಿಯ ನಾಯಕರು ತೀರ್ಮಾನ ಮಾಡಿದರು. ಪಾಟೀಲರು ತಮ್ಮನ್ನು ಕರೆಸಿ “ದೇವೇಗೌಡರ ವಿರುದ್ಧ ಸ್ಪರ್ಧೆ ಮಾಡಿ ಗೆಲ್ಲುತ್ತೀಯಾ?” ಎಂದು ಕೇಳಿ ನಂತರ ಬಿ-ಫಾರಂಗೆ ಸಹಿ ಹಾಕಿಕೊಟ್ಟರು ಎಂದು ಶಿವಕುಮಾರ್ ನೆನಪಿಸಿಕೊಂಡರು. ಅಲ್ಲಿಂದ ತಮ್ಮ ರಾಜಕೀಯ ಪಯಣ ಆರಂಭವಾಯಿತು ಎಂದರು.

ಮನುಷ್ಯನ ಹುಟ್ಟು ಆಕಸ್ಮಿಕ, ಸಾವು ಅನಿವಾರ್ಯ. ಜನನ ಉಚಿತ, ಮರಣ ಖಚಿತ. ಹುಟ್ಟು-ಸಾವಿನ ಮಧ್ಯೆ ಏನು ಸಾಧನೆ ಮಾಡುತ್ತೇವೆ ಎಂಬುದು ಮುಖ್ಯ ಎಂದ ಅವರು, ಅಧಿಕಾರದಲ್ಲಿ ಎಷ್ಟು ಜನ ನಾಯಕರನ್ನು ತಯಾರು ಮಾಡುತ್ತೇವೆ ಎಂಬುದು ಮಹತ್ವದ್ದು ಎಂದರು. ಪಾಟೀಲರು ಅನೇಕ ನಾಯಕರನ್ನು ಬೆಳೆಸಿದ್ದಾರೆ ಎಂದು ಹೇಳಿದರು.

ಪಾಟೀಲರ ಧೈರ್ಯ, ದಿಟ್ಟ ನಾಯಕತ್ವ ಸ್ಫೂರ್ತಿಯಾಗಿದೆ. ಹೆಚ್.ಕೆ. ಪಾಟೀಲ್ ಅವರಲ್ಲಿ ತಂದೆಯಂತಹ ಧೈರ್ಯ ಇಲ್ಲದಿದ್ದರೂ ಉಳಿದ ಗುಣಗಳಿವೆ ಎಂದು ಉಲ್ಲೇಖಿಸಿದರು. ಕೃಷ್ಣ ಅವರ ನಂತರ ಹೆಚ್.ಕೆ. ಪಾಟೀಲ್ ನಾಯಕರಾಗುತ್ತಾರೆ ಎಂದು ಭಾವಿಸಿದ್ದೆ ಎಂದರು.

ದೇವರು ವರ-ಶಾಪ ನೀಡುವುದಿಲ್ಲ, ಕೇವಲ ಅವಕಾಶ ನೀಡುತ್ತಾನೆ. ಸಿಕ್ಕ ಅವಕಾಶದಲ್ಲಿ ಒಳ್ಳೆಯದನ್ನು ಮಾಡುವುದು ಮುಖ್ಯ ಎಂದು ಡಿ.ಕೆ. ಶಿವಕುಮಾರ್ ಮಾತು ಮುಗಿಸಿದರು.

ಈ ಕಾರ್ಯಕ್ರಮದಲ್ಲಿ ಪಾಟೀಲರ ಶಿಷ್ಯಕೋಟಿ, ಕಾಂಗ್ರೆಸ್ ನಾಯಕರು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Tags: amironews

Subscribe Now and Never Miss an Update!

Unsubscribe
  • Trending
  • Comments
  • Latest

ಮಳೆ ವೇಳೆ ರಸ್ತೆಗೆ ಡಾಂಬರು ಹಾಕಲು ವೆಟ್ ಮಿಕ್ಸಿಂಗ್ ವಿಧಾನ ಬಳಕೆ: ಡಿಸಿಎಂ ಡಿ.ಕೆ.ಶಿವಕುಮಾರ್

4

ಬುಲ್ಸ್‌ಗೆ ಸವಾಲಾಗದ ಬೆಂಗಾಲ್‌ಅಲಿರೇಜಾ ಮತ್ತೊಮ್ಮೆ ಮಿಂಚು; ವಾರಿಯರ್ಸ್‌ ವಿರುದ್ಧ 43-32 ಅಂತರದ ಭರ್ಜರಿ ಗೆಲುವು

4

Invest Karnataka 2025 Kicks Off with a Grand Opening, Showcasing Innovation, Investments, and Global Collaborations

3

ಭಾರತ vs ಇಂಗ್ಲೆಂಡ್ 3ನೇ ಏಕದಿನ: 142 ರನ್ ಭರ್ಜರಿ ಜಯ, 3-0 ಸರಣಿ ಕ್ಲೀನ್ ಸ್ವೀಪ್!

2

ತಂತ್ರಜ್ಞಾನ ಚಾಲಿತ ಮತದಾರರ ನೋಂದಣಿ ಕುರಿತು ಬೆಂಗಳೂರಿನಲ್ಲಿ ಅಂತರರಾಷ್ಟ್ರೀಯ ಕಾರ್ಯಾಗಾರ

June 10, 2026

ಜೂನ್ 28 ರಂದು ರಾಜ್ಯದಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ

June 10, 2026

ಎಚ್.ಡಿ. ಕುಮಾರಸ್ವಾಮಿ ಎನ್‌ಡಿಎ ಮುಖ್ಯಮಂತ್ರಿಗಳು-ಉಪ ಮುಖ್ಯಮಂತ್ರಿಗಳ ಸಮ್ಮೇಳನದಲ್ಲಿ ಭಾಗವಹಿಸಿ ಪ್ರಧಾನಿ ಮೋದಿಯವರನ್ನು ಅಭಿನಂದಿಸಿದರು

June 10, 2026

ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅಧಿಕಾರ ಸ್ವೀಕಾರ: ಜೂನ್ 21ರಂದು ಅರಮನೆ ಮೈದಾನದಲ್ಲಿ ಕಾರ್ಯಕ್ರಮ

June 10, 2026

Recent News

ಕೋಲ್ಕತ್ತಾದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಭರ್ಜರಿ ಸಿದ್ಧತೆ: ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ ಪರಿಶೀಲನೆ

June 9, 2026

ತಮಿಳುನಾಡು ಕಾಂಗ್ರೆಸ್ ಸಂಸದರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಅಭಿನಂದಿಸಿದರು

June 9, 2026

ಗ್ರಾಮೀಣ ಯುವಕರಿಗೆ ಕ್ರೀಡಾ ಉತ್ತೇಜನಕ್ಕೆ ವಿಶೇಷ ಕಾರ್ಯಕ್ರಮ: ಡಾ. ಜಿ. ಪರಮೇಶ್ವರ ಸೂಚನೆ

June 9, 2026

ಜಪಾನ್ ನಿಯೋಗದೊಂದಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಹತ್ವದ ಚರ್ಚೆ:

June 9, 2026
  • Home
  • Privacy Policy
  • About Us
  • Advertise with us
  • Contact Us
Whatesapp +8050611655

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.

Welcome Back!

Login to your account below

Forgotten Password? Sign Up

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In
error:
  • Login
  • Sign Up
No Result
View All Result
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
News Post

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.