Wednesday, April 8, 2026
  • Login
  • Register
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
Home State Karnataka News

ಗ್ಯಾರಂಟಿ ಯೋಜನೆ ನಿಲ್ಲಿಸಲು ಬಿಜೆಪಿ ಷಡ್ಯಂತ್ರ: ಡಿ.ಕೆ. ಶಿವಕುಮಾರ್ ವಾಗ್ದಾಳಿ

PREM SHEKHAR PV by PREM SHEKHAR PV
10 hours ago
Reading Time: 1 min read
A A
18
SHARES
50
VIEWS

ಚುನಾವಣಾ ಆಯೋಗದ ಮೂಲಕ ಬಡವರ ಮೇಲೆ ದಾಳಿ ಎಂದು ಆರೋಪ

ದಾವಣಗೆರೆ: ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳ ಹಣ ಬಿಡುಗಡೆಗೆ ಚುನಾವಣಾ ಆಯೋಗದ ಮೂಲಕ ಆಕ್ಷೇಪಿಸಿ ಪತ್ರ ಬರೆದಿರುವುದು ಬಿಜೆಪಿಯ ಷಡ್ಯಂತ್ರವಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೀವ್ರ ವಾಗ್ದಾಳಿ ನಡೆಸಿದರು.

ದಾವಣಗೆರೆಯ ಬಾಪೂಜಿ ಗೆಸ್ಟ್ ಹೌಸ್‌ನಲ್ಲಿ ಮಂಗಳವಾರ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, “ಬಡವರು ಹಾಗೂ ನಿರುದ್ಯೋಗಿ ಯುವಕರ ಮೇಲೆ ನೇರ ದಾಳಿ ಮಾಡುವ ಉದ್ದೇಶದಿಂದ ಬಿಜೆಪಿ ಈ ಕೆಲಸ ಮಾಡಿದೆ. ಆದರೆ ಮತದಾರರು ಇದಕ್ಕೆ ತಕ್ಕ ಉತ್ತರ ನೀಡಲಿದ್ದಾರೆ” ಎಂದರು.

“ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ದೇಶಕ್ಕೇ ಮಾದರಿಯಾಗುವಂತಹ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದೇವೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆ ಜಾರಿಯಾಗಿಲ್ಲ ಎಂದು ಹೇಳಿದ್ದಾರೆ ಎಂದು ಕೇಳಿದೆ. ಆದರೆ ಇಷ್ಟು ದೊಡ್ಡ ಸ್ಥಾನದಲ್ಲಿರುವವರಿಗೆ ಸರಿಯಾದ ಮಾಹಿತಿ ಇರಬೇಕು ಎಂದು ನಂಬಿದ್ದೆ. ನಮ್ಮ ಯೋಜನೆಗಳನ್ನು ಟೀಕಿಸುವ ಅವರೇ ಬೇರೆ ರಾಜ್ಯಗಳಲ್ಲಿ ಅವುಗಳನ್ನು ನಕಲು ಮಾಡುತ್ತಿದ್ದಾರೆ” ಎಂದು ಶಿವಕುಮಾರ್ ಹೇಳಿದರು.

ಬಿಜೆಪಿಯವರ ಮುಖವಾಡ ಕಳಚಿದೆ ಎಂದು ಆರೋಪಿಸಿದ ಅವರು, “ಯುವಕರು ಮತ್ತು ಮಹಿಳೆಯರಿಗೆ ನೀಡುತ್ತಿರುವ ಯೋಜನೆಗಳನ್ನು ನಿಲ್ಲಿಸಲು ಬಿಜೆಪಿ ಮೊದಲಿನಿಂದಲೂ ಸಂಚು ರೂಪಿಸಿದೆ. ಈ ಯೋಜನೆಗಳು ಚುನಾವಣೆಗೆ ಮಾತ್ರವಲ್ಲ, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಜನರ ಕಲ್ಯಾಣಕ್ಕಾಗಿ ಜಾರಿಗೊಳಿಸಿದ್ದು. ಕಳೆದ ಎರಡೂವರೆ ವರ್ಷಗಳಲ್ಲಿ ಒಂದು ಲಕ್ಷ ಇಪ್ಪತ್ತೈದು ಸಾವಿರ ಕೋಟಿ ರೂಪಾಯಿಗೂ ಹೆಚ್ಚು ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ವಿನಿಯೋಗಿಸಲಾಗಿದೆ” ಎಂದರು.

“ಬೆಲೆ ಏರಿಕೆಯಿಂದ ತೊಂದರೆ ಅನುಭವಿಸುತ್ತಿರುವ ಬಡವರ ರಕ್ಷಣೆಗಾಗಿ ಜಾರಿಗೊಳಿಸಿರುವ ಯೋಜನೆಗಳನ್ನು ನಿಲ್ಲಿಸಲು ಬಿಜೆಪಿ ಮುಂದಾಗಿದೆ. ಇದು ಖಂಡನೀಯ” ಎಂದು ಅವರು ಹರಿಹಾಯ್ದರು.

ಈ ತಿಂಗಳ ಕಂತು ಚುನಾವಣೆ ನಂತರ ಬಿಡುಗಡೆ

ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿರುವುದಾಗಿ ತಿಳಿಸಿದ ಡಿ.ಕೆ. ಶಿವಕುಮಾರ್, “ಕಳೆದ ತಿಂಗಳವರೆಗಿನ ಕಂತನ್ನು ಬಿಡುಗಡೆ ಮಾಡಲಾಗಿದೆ. ಈ ತಿಂಗಳ ಕಂತನ್ನು ಚುನಾವಣೆ ಮುಗಿದ ಬಳಿಕ ಬಿಡುಗಡೆ ಮಾಡಲಾಗುತ್ತದೆ. ಗ್ಯಾರಂಟಿ ಯೋಜನೆ ನಿಲ್ಲುತ್ತದೆ ಎಂಬ ಚಿಂತೆ ಬೇಡ. ನಾವು ಕೊಟ್ಟ ಮಾತಿಗೆ ಬದ್ಧರಾಗಿದ್ದೇವೆ” ಎಂದು ಭರವಸೆ ನೀಡಿದರು.

“ಈ ಚುನಾವಣೆಯಲ್ಲಿ ಆತಂಕ ಸೃಷ್ಟಿಸುತ್ತಿರುವವರು ಗೆಲ್ಲುವುದಿಲ್ಲ. ಅವರ ಸರ್ಕಾರ ಮುಂದಿನ ದಿನಗಳಲ್ಲಿ ಬರುವುದೂ ಇಲ್ಲ” ಎಂದು ಅವರು ಎಚ್ಚರಿಸಿದರು.

ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್‌ಗೆ 70% ಬೆಂಬಲ

ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಕ್ಷೇತ್ರಗಳಲ್ಲಿ ಇದುವರೆಗೆ ಶಾಂತಿಯುತ ಪ್ರಚಾರ ನಡೆದಿರುವುದಕ್ಕೆ ಎಲ್ಲಾ ಪಕ್ಷಗಳಿಗೆ ಅಭಿನಂದನೆ ಸಲ್ಲಿಸಿದ ಶಿವಕುಮಾರ್, “ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಸುಮಾರು ಒಂದು ಲಕ್ಷಕ್ಕೂ ಹೆಚ್ಚು ಜನರನ್ನು ಸಂಪರ್ಕಿಸಿ ಸಮೀಕ್ಷೆ ನಡೆಸಲಾಗಿದೆ. ಇದರಲ್ಲಿ 70%ಕ್ಕಿಂತ ಹೆಚ್ಚು ಜನರು ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವುದಾಗಿ ತಿಳಿಸಿದ್ದಾರೆ” ಎಂದರು.

“ಈ ಕ್ಷೇತ್ರ ಬೆಂಗಳೂರಿಗಿಂತ ಉತ್ತಮವಾಗಿ ಅಭಿವೃದ್ಧಿಯಾಗಿದೆ. ಕಾಂಕ್ರೀಟ್ ರಸ್ತೆಗಳು, ಪಾರ್ಕ್‌ಗಳು, ಕೆರೆಗಳು ಮತ್ತು ಸ್ವಚ್ಛತೆಯಲ್ಲಿ ದಾವಣಗೆರೆ ಮುಂದಿದೆ. ಇದಕ್ಕೆ ಶ್ರಮಿಸಿದ ಶಾಮನೂರು ಶಿವಶಂಕರಪ್ಪ ಅವರಿಗೆ ವಯಸ್ಸು 95 ಆದರೂ ಎಲ್ಲಾ ವರ್ಗದ ಜನರನ್ನು ಒಗ್ಗೂಡಿಸಿ ಅಭಿವೃದ್ಧಿ ಕಾರ್ಯ ಮಾಡಿದ್ದಾರೆ” ಎಂದು ಅವರು ಹೊಗಳಿದರು.

ಹೊಸ ಮುಖಕ್ಕೆ ಟಿಕೆಟ್ ನೀಡಿರುವುದನ್ನು ಸಮರ್ಥಿಸಿದ ಅವರು, “ಪಕ್ಷದ ನಾಯಕರು ಒಟ್ಟಾಗಿ ಯುವಕ, ವಿದ್ಯಾವಂತ ಹಾಗೂ ಪ್ರಜ್ಞಾವಂತ ಅಭ್ಯರ್ಥಿಯನ್ನು ಆಯ್ಕೆ ಮಾಡಿದ್ದೇವೆ. ಇವರ ತಾಯಿ ಸ್ಪರ್ಧಿಸಲು ಬಯಸದಿದ್ದರೂ ನಾವೇ ಬಲವಂತಪಡಿಸಿ ಅವರನ್ನು ಕಣಕ್ಕಿಳಿಸಿದ್ದೇವೆ. ಈ ಅಭ್ಯರ್ಥಿ ಲೋಕಸಭೆಯಲ್ಲಿ ಉತ್ತಮ ಕೆಲಸ ಮಾಡುತ್ತಿದ್ದಾರೆ ಮತ್ತು ಜನರ ಸೇವೆ ಮುಂದುವರಿಸುತ್ತಾರೆ” ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಡಿ.ಕೆ. ಶಿವಕುಮಾರ್ ಅವರು ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಕೊನೆಯ ದಿನದ ಪ್ರಚಾರದಲ್ಲಿ ಭಾಗವಹಿಸಿದರು.

Tags: newnewsಅಭಿವೃದ್ಧಿಅವಕಾಶಆರ್ಥಿಕಇನ್ಉತ್ತರಕರ್ನಾಟಕಕರ್ನಾಟಕದಕಾಂಗ್ರೆಸ್ಕಾರ್ಯಕ್ರಮಕುಮಾರ್ಕ್ರಮಡಾ.ಡಿತೀರದಿನದೇಶನಗರನಿರ್ಧಾರಬಿಜೆಪಿಬೆಂಗಳೂರುಭಾರತಮಟ್ಟದಮತ್ತುಮಹತ್ವದಮಹಾಯುವಯೋಗಯೋಜನೆಯೋಜನೆಗಳರಾಜಕೀಯರಾಜ್ಯರಾಷ್ಟ್ರೀಯವಿಶೇಷವಿಶ್ವಸಚಿವಸಂಬಂಧಸಂಬಂಧಿಸಭೆಸಹಾಯಸಿಎಂಸಿದ್ದರಾಮಯ್ಯಹಣಹೊಸ

Subscribe Now and Never Miss an Update!

Unsubscribe
  • Trending
  • Comments
  • Latest

ಮಳೆ ವೇಳೆ ರಸ್ತೆಗೆ ಡಾಂಬರು ಹಾಕಲು ವೆಟ್ ಮಿಕ್ಸಿಂಗ್ ವಿಧಾನ ಬಳಕೆ: ಡಿಸಿಎಂ ಡಿ.ಕೆ.ಶಿವಕುಮಾರ್

4

ಬುಲ್ಸ್‌ಗೆ ಸವಾಲಾಗದ ಬೆಂಗಾಲ್‌ಅಲಿರೇಜಾ ಮತ್ತೊಮ್ಮೆ ಮಿಂಚು; ವಾರಿಯರ್ಸ್‌ ವಿರುದ್ಧ 43-32 ಅಂತರದ ಭರ್ಜರಿ ಗೆಲುವು

4

Invest Karnataka 2025 Kicks Off with a Grand Opening, Showcasing Innovation, Investments, and Global Collaborations

3

ಭಾರತ vs ಇಂಗ್ಲೆಂಡ್ 3ನೇ ಏಕದಿನ: 142 ರನ್ ಭರ್ಜರಿ ಜಯ, 3-0 ಸರಣಿ ಕ್ಲೀನ್ ಸ್ವೀಪ್!

2

ಬೆಂಗಳೂರು ಉತ್ತರ ನಗರ ಪಾಲಿಕೆ ಆಯುಕ್ತರು ಜನಗಣತಿ-2027 ತರಬೇತಿ ಕೇಂದ್ರಕ್ಕೆ ಭೇಟಿ:

April 8, 2026

ಹಿಂದೂಗಳ ವಿರುದ್ಧ ಪ್ರಚೋದನೆ ಮಾಡುವ ಭಾಷಣಗಳಿಗೆ ದ್ವೇಷ ಭಾಷಣ ಕಾಯ್ದೆಯಿಂದ ವಿನಾಯಿತಿಯೇ?

April 8, 2026

ಕಾಂಗ್ರೆಸ್‍ಗೆ ರಾಜ್ಯದಲ್ಲಿ ಸೋಲು ಕಟ್ಟಿಟ್ಟ ಬುತ್ತಿ: ಖರ್ಗೆ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲಿಸಿ – ಸಿ.ಟಿ. ರವಿ ಆಗ್ರಹ

April 8, 2026

ಗ್ಯಾರಂಟಿ ಯೋಜನೆ ನಿಲ್ಲಿಸಲು ಬಿಜೆಪಿ ಷಡ್ಯಂತ್ರ: ಡಿ.ಕೆ. ಶಿವಕುಮಾರ್ ವಾಗ್ದಾಳಿ

April 8, 2026

Recent News

ಡಬಲ್ ಒಲಿಂಪಿಕ್ ಪದಕ ವಿಜೇತ ಬ್ಲಾಂಕಾ ವ್ಲಾಶಿಕ್ ಟಿಸಿಎಸ್ ವರ್ಡ್ 10ಕೆ ಬೆಂಗಳೂರು 2026ರ ಅಂತರಾಷ್ಟ್ರೀಯ ಈವೆಂಟ್ ಅಂಬಾಸಡರ್

April 6, 2026

ಗ್ಯಾರಂಟಿ ಪಕ್ಷ, ಗ್ಯಾರಂಟಿ ಸರ್ಕಾರಕ್ಕೆ ಗ್ಯಾರಂಟಿ ಗೆಲುವು: ಸಚಿವ ಚಲುವರಾಯಸ್ವಾಮಿ

April 6, 2026

ಡಾ. ಬಾಬು ಜಗಜೀವನ್ ರಾಮ್ ಅವರ 119ನೇ ಜನ್ಮದಿನ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಪ್ರತಿಮೆಗೆ ಮಾಲಾರ್ಪಣೆ

April 6, 2026

ಕನ್ನಡ ನೆಲದಲ್ಲಿರುವಂತೆ ಭಾಸವಾಗುತ್ತದೆ ಮಂಜೇಶ್ವರ: ಸಿದ್ದರಾಮಯ್ಯ

April 6, 2026
  • Home
  • Privacy Policy
  • About Us
  • Advertise with us
  • Contact Us
Whatesapp +8050611655

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.

Welcome Back!

Login to your account below

Forgotten Password? Sign Up

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In
error:
  • Login
  • Sign Up
No Result
View All Result
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
News Post

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.