Saturday, April 11, 2026
  • Login
  • Register
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
Home State Karnataka News Local Communities Cultural Events

ಅಂಬೇಡ್ಕರ್ ಸಂವಿಧಾನ: ವೈವಿಧ್ಯಮಯ ಭಾರತಕ್ಕೆ ಸಮಾನತೆಯ ಸೂತ್ರ

Ranjitha by Ranjitha
18 hours ago
Reading Time: 1 min read
A A
18
SHARES
50
VIEWS

ಬೆಂಗಳೂರು: ಭಾಷೆ, ಸಂಸ್ಕೃತಿ ಮತ್ತು ಪ್ರಾದೇಶಿಕತೆಗಳ ವೈವಿಧ್ಯತೆಯಿಂದ ಕೂಡಿದ ಭಾರತವನ್ನು ಸಮಾನ ನೆಲೆಗಟ್ಟಿನಲ್ಲಿ ಕಟ್ಟಲು ಡಾ. ಬಿ.ಆರ್. ಅಂಬೇಡ್ಕರ್ ಅವರ ಸಂವಿಧಾನಕ್ಕಿಂತ ಮುಂಚೆ ಬೇರೆ ಯಾರಿಗೂ ಸಾಧ್ಯವಾಗಲಿಲ್ಲ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ. ಪುರುಷೋತ್ತಮ ಬಿಳಿಮಲೆ ಹೇಳಿದರು.

ಕರ್ನಾಟಕ ಮಾಧ್ಯಮ ಅಕಾಡೆಮಿ ಹಾಗೂ ಡಾ. ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯದ ಸಹಯೋಗದಲ್ಲಿ ‘ಸಾಮಾಜಿಕ ನ್ಯಾಯ ಪರಿಕಲ್ಪನೆಗೆ ಇಂದಿನ ಮಾಧ್ಯಮಗಳು ಸಂವೇದನಾಶೀಲವಾಗಿವೆಯೇ?’ ಎಂಬ ವಿಷಯದಲ್ಲಿ ಶುಕ್ರವಾರ ನಡೆದ ವಿಚಾರಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ವಿಶ್ವವಿದ್ಯಾಲಯದ ಅಕಾಡೆಮಿಕ್ ಬ್ಲಾಕ್‌ನ ಡಬ್ಲ್ಯುಬಿಸಿ ಸಭಾಂಗಣದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಪ್ರೊ. ಬಿಳಿಮಲೆ ಮಾತನಾಡುತ್ತಾ, “ಸ್ವತಃ ಪತ್ರಕರ್ತರಾಗಿ ಸರಿಗಟ್ಟಲಾರದ ಓದುಗರಾಗಿದ್ದ ಅಂಬೇಡ್ಕರ್ ಅವರು, ಭಾರತದ ಸಮಾಜೋ-ಆರ್ಥಿಕ ಸ್ವಾತಂತ್ರ್ಯದ ನೆಲೆಗಟ್ಟಿನ ಮೇಲೆ ಜಾತಿ, ಧರ್ಮ, ಲಿಂಗ ತಾರತಮ್ಯಗಳಿಗೆ ಆತೀತವಾದ ಸಂವಿಧಾನವೆಂಬ ಸಮಾನ ಸೂತ್ರವನ್ನು ಕಟ್ಟಿಕೊಟ್ಟರು” ಎಂದರು.

ಅವರು ಮುಂದುವರೆದು, ಸಂವಿಧಾನದ ೧೪ನೇ ವಿಧಿ (ಎಲ್ಲರೂ ಸಮಾನರು), ೧೫ನೇ ವಿಧಿ (ಧರ್ಮ, ಜಾತಿ, ಲಿಂಗ, ಸ್ಥಳ ಆಧಾರದಲ್ಲಿ ಬೇಧಭಾವ ಮಾಡಬಾರದು), ೧೬ನೇ ವಿಧಿ (ಸಮಾನ ಅವಕಾಶಗಳು), ೧೭ನೇ ವಿಧಿ (ಅಸ್ಪೃಶ್ಯತೆ ಅಪರಾಧ) ಮತ್ತು ೨೯ನೇ ವಿಧಿ (ಅಲ್ಪಸಂಖ್ಯಾತರ ರಕ್ಷಣೆ)ಗಳು ಸಮಸಮಾಜದ ಭಾರತವನ್ನು ಕಟ್ಟುವ ಆಶಯವನ್ನು ಸ್ಪಷ್ಟವಾಗಿ ಹೇಳುತ್ತವೆ ಎಂದು ವಿವರಿಸಿದರು.

“ಈ ಸಾಂವಿಧಾನಿಕ ಅಂಶಗಳನ್ನು ನಮ್ಮ ಸಮಾಜದ ಆಗುಹೋಗುಗಳಲ್ಲಿ ಮಾಧ್ಯಮಗಳು ಎಷ್ಟು ಪ್ರಾತಿನಿಧಿಕರಿಸುತ್ತವೆ ಎಂಬುದನ್ನು ಪರಿಶೀಲಿಸಿದರೆ ಸತ್ಯ ತಿಳಿಯುತ್ತದೆ” ಎಂದು ಅವರು ಹೇಳಿದರು.

ಭಾರತದಲ್ಲಿನ ಅಸಮಾನತೆಯನ್ನು ವ್ಯಾಖ್ಯಾನಿಸಲು ಶಂಭೂಕ ಮತ್ತು ಕರ್ಣರ ಕಥೆಗಳನ್ನು ರೂಪಕಗಳಾಗಿ ಬಳಸಬಹುದು ಎಂದು ಹೇಳಿದ ಬಿಳಿಮಲೆ, ಆದರೆ ಇದೇ ಭಾಷೆಯನ್ನು ಪ್ರಭುತ್ವಗಳು ತಮ್ಮ ಅನುಕೂಲಕ್ಕೆ ತಕ್ಕಂತೆ ಬಳಸಿಕೊಳ್ಳುತ್ತವೆ ಎಂದು ತಿಳಿಸಿದರು. “ಭಾಷೆಯಲ್ಲಿ ಶ್ರೇಣೀಕರಣ ಇಲ್ಲ. ಅದು ಅನುಭವಗಳನ್ನು ವಿರಚಿಸುತ್ತದೆ. ನಮ್ಮ ಕಥೆಗಳಿಗೆ ನಾವೇ ಕಿವಿಯಾಗಬೇಕು” ಎಂದು ಅವರು ಕರೆ ನೀಡಿದರು.

ಪ್ರಧಾನ ಭಾಷಣ ಮಾಡಿದ ಪತ್ರಕರ್ತ ಕೋಟಿಗಾನಹಳ್ಳಿ ರಾಮಯ್ಯ ಅವರು, “೧೯೨೭ರ ಮಹಾಡ್ ಚಳುವಳಿಗೆ ಕಾರಣವಾದ ಅಸಮಾನತೆ ಮತ್ತು ಶ್ರೇಣೀಕರಣಗಳು ಇಂದಿಗೂ ಇವೆ. ಅಂಬೇಡ್ಕರ್ ಅವರ ವಿಚಾರಗಳನ್ನು ನಿರ್ಲಕ್ಷಿಸಿರುವುದಕ್ಕಾಗಿ ದೇಶದ ಜನತೆ ಕ್ಷಮೆ ಕೇಳಬೇಕು” ಎಂದರು.

“ಸಾಮಾಜಿಕ ನ್ಯಾಯ ಎಂಬ ಮುಚ್ಚಲಾಗಿರುವ ಕಿಟಕಿಯ ಬಗ್ಗೆ ಮಾತನಾಡುವುದು ವ್ಯರ್ಥ. ಮಾಧ್ಯಮಗಳು ಯಾವಾಗ ಸಂವೇದನಾಶೀಲವಾಗಿದ್ದವು?” ಎಂದು ಪ್ರಶ್ನಿಸಿದ ಅವರು, ಅಂಬೇಡ್ಕರ್ ಅವರ ಅಪ್ರಕಟಿತ ಸಾವಿರಾರು ಪುಟಗಳ ಬರಹಗಳು ಇನ್ನೂ ಹೆಚ್ಚು ಜನರನ್ನು ತಲುಪಬೇಕಿದೆ ಎಂದು ತಿಳಿಸಿದರು. ಇದಕ್ಕೆ ಭೌದ್ಧಿಕ ದಾರಿದ್ರ್ಯವೂ ಒಂದು ಕಾರಣ ಎಂದು ಅವರು ಅಭಿಪ್ರಾಯಪಟ್ಟರು.

ಡಾ. ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊ. ಬಿ. ರಮೇಶ್ ಅವರು ಮುಖ್ಯ ಅತಿಥಿಯಾಗಿ ಮಾತನಾಡಿ, “ಅಂಬೇಡ್ಕರ್ ಅವರ ವಿಚಾರಗಳು ಎಂದೆಂದಿಗೂ ಪ್ರಸ್ತುತವಾಗಿವೆ” ಎಂದರು.

ಕರ್ನಾಟಕ ಮಾಧ್ಯಮ ಅಕಾಡೆಮಿಯ ಅಧ್ಯಕ್ಷೆ ಆಯೆಷಾ ಖಾನಂ ಪ್ರಸ್ತಾವಿಕ ಮಾತುಗಳನ್ನಾಡಿದರು. ಕಾರ್ಯದರ್ಶಿ ಸಹನಾ ಎಂ. ಅವರು ಸ್ವಾಗತಿಸಿದರು.

Tags: newnewsಅಭಿವೃದ್ಧಿಅವಕಾಶಆರ್ಥಿಕಇನ್ಉತ್ತರಕರ್ನಾಟಕಕರ್ನಾಟಕದಕಾಂಗ್ರೆಸ್ಕಾರ್ಯಕ್ರಮಕುಮಾರ್ಕ್ರಮಡಾ.ಡಿತೀರದಿನದೇಶನಗರನಿರ್ಧಾರಬಿಜೆಪಿಬೆಂಗಳೂರುಭಾರತಮಟ್ಟದಮತ್ತುಮಹತ್ವದಮಹಾಯುವಯೋಗಯೋಜನೆಯೋಜನೆಗಳರಾಜಕೀಯರಾಜ್ಯರಾಷ್ಟ್ರೀಯವಿಶೇಷವಿಶ್ವಸಚಿವಸಂಬಂಧಸಂಬಂಧಿಸಭೆಸಹಾಯಸಿಎಂಸಿದ್ದರಾಮಯ್ಯಹಣಹೊಸ

Subscribe Now and Never Miss an Update!

Unsubscribe
  • Trending
  • Comments
  • Latest

ಮಳೆ ವೇಳೆ ರಸ್ತೆಗೆ ಡಾಂಬರು ಹಾಕಲು ವೆಟ್ ಮಿಕ್ಸಿಂಗ್ ವಿಧಾನ ಬಳಕೆ: ಡಿಸಿಎಂ ಡಿ.ಕೆ.ಶಿವಕುಮಾರ್

4

ಬುಲ್ಸ್‌ಗೆ ಸವಾಲಾಗದ ಬೆಂಗಾಲ್‌ಅಲಿರೇಜಾ ಮತ್ತೊಮ್ಮೆ ಮಿಂಚು; ವಾರಿಯರ್ಸ್‌ ವಿರುದ್ಧ 43-32 ಅಂತರದ ಭರ್ಜರಿ ಗೆಲುವು

4

Invest Karnataka 2025 Kicks Off with a Grand Opening, Showcasing Innovation, Investments, and Global Collaborations

3

ಭಾರತ vs ಇಂಗ್ಲೆಂಡ್ 3ನೇ ಏಕದಿನ: 142 ರನ್ ಭರ್ಜರಿ ಜಯ, 3-0 ಸರಣಿ ಕ್ಲೀನ್ ಸ್ವೀಪ್!

2

ಪುಮಾ ಅಂಬಾಸಡರ್‌ಗಳಾದ ಪಿ.ವಿ. ಸಿಂಧು ಮತ್ತು ಹರ್ಮನ್‌ಪ್ರೀತ್ ಕೌರ್ ಅವರು ಅಲ್ಟ್ರಾಹ್ಯೂಮನ್ ಹೈರಾಕ್ಸ್ ಬೆಂಗಳೂರಿನಲ್ಲಿ ಭಾಗವಹಿಸಲು ಸಿದ್ಧ

April 10, 2026

ಅಂಬೇಡ್ಕರ್ ಸಂವಿಧಾನ: ವೈವಿಧ್ಯಮಯ ಭಾರತಕ್ಕೆ ಸಮಾನತೆಯ ಸೂತ್ರ

April 10, 2026

ಮಂಡ್ಯ ರೈಲು ನಿಲ್ದಾಣ ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ; ಮದ್ದೂರಿನಲ್ಲಿ ಹೊಸ ರೈಲು ನಿಲ್ದಾಣ ನಿರ್ಮಾಣಕ್ಕೆ ಭರವಸೆ

April 10, 2026

ಬೆಂಗಳೂರಿನಲ್ಲಿ ರಣ್ ಸಂವಾದ-2: ಬಹು-ವಲಯ ಕಾರ್ಯಾಚರಣೆಗಳ ಮೂಲಕ ಭಾರತದ ರಕ್ಷಣಾ ಸಿದ್ಧತೆಗೆ ಹೊಸ ದಿಕ್ಕು

April 10, 2026

Recent News

ಗ್ಯಾರಂಟಿ ಯೋಜನೆ ನಿಲ್ಲಿಸಲು ಬಿಜೆಪಿ ಷಡ್ಯಂತ್ರ: ಡಿ.ಕೆ. ಶಿವಕುಮಾರ್ ವಾಗ್ದಾಳಿ

April 8, 2026

ಯುಡಿಎಫ್ ಅಧಿಕಾರಕ್ಕೆ ಬಂದರೆ ಭ್ರಷ್ಟಾಚಾರ ಮುಕ್ತ, ಸ್ವಚ್ಛ ಮತ್ತು ಪಾರದರ್ಶಕ ಆಡಳಿತ ನೀಡುತ್ತೇವೆ: ಡಿ.ಕೆ. ಶಿವಕುಮಾರ್

April 6, 2026

ಭುವನೇಶ್ವರ್ ಕುಮಾರ್ IPLನಲ್ಲಿ 200 ವಿಕೆಟ್‌ಗಳ ಮೈಲುಗಲ್ಲು;

April 6, 2026

ರಗ್ಬಿ ಪ್ರೀಮಿಯರ್ ಲೀಗ್‌ನ 2ನೇ ಆವೃತ್ತಿ ಜೂನ್ 16ರಿಂದ 28ರವರೆಗೆ ಹೈದರಾಬಾದ್‌ನಲ್ಲಿ

April 6, 2026
  • Home
  • Privacy Policy
  • About Us
  • Advertise with us
  • Contact Us
Whatesapp +8050611655

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.

Welcome Back!

Login to your account below

Forgotten Password? Sign Up

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In
error:
  • Login
  • Sign Up
No Result
View All Result
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
News Post

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.