Sunday, July 26, 2026
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
Home State Karnataka News

₹11,000 ಕೋಟಿ ಆದಾಯ ಗುರಿ ಸಾಧನೆಗೆ ಪ್ರತಿ ಜಿಯಾಲಜಿಸ್ಟ್‌ಗೆ ಪ್ರತ್ಯೇಕ ಗುರಿ: ರೋಹಿಣಿ ಸಿಂಧೂರಿ

Ranjitha by Ranjitha
1 day ago
Reading Time: 1 min read
A A
18
SHARES
50
VIEWS

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಿಗದಿಪಡಿಸಿರುವ ₹11,000 ಕೋಟಿ ಆದಾಯ ಸಂಗ್ರಹದ ಗುರಿಯನ್ನು ಸಾಧಿಸಲು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಪ್ರತಿಯೊಬ್ಬ ಅಧಿಕಾರಿಯೂ ಗುರಿ ಆಧಾರಿತವಾಗಿ ಕಾರ್ಯನಿರ್ವಹಿಸಬೇಕು ಎಂದು ಎಂ.ಎಸ್‌.ಎಂ.ಇ ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆ ಕಾರ್ಯದರ್ಶಿ ರೋಹಿಣಿ ಸಿಂಧೂರಿ ಐಎಎಸ್ ನಿರ್ದೇಶನ ನೀಡಿದ್ದಾರೆ.

ಇಂದು ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರತಿ ಜಿಲ್ಲಾ ಜಿಯಾಲಜಿಸ್ಟ್‌ಗಳಿಗೆ ಪ್ರತ್ಯೇಕವಾಗಿ ಕಾರ್ಯಭಾರ ಹಾಗೂ ಆದಾಯ ಸಂಗ್ರಹಣೆಯ ಗುರಿ ನಿಗದಿಪಡಿಸಲಾಗುವುದು ಎಂದು ತಿಳಿಸಿದರು. ಮುಂದಿನ ತಿಂಗಳಿನಿಂದ ಜಿಲ್ಲಾವಾರು ಮಾಸಿಕ ಪ್ರಗತಿ ಪರಿಶೀಲನಾ ಸಭೆಗಳನ್ನು ನಡೆಸಲಾಗುವುದು ಎಂದು ಅವರು ಹೇಳಿದರು.

ತಮ್ಮ ವ್ಯಾಪ್ತಿಯಲ್ಲಿರುವ ಎಲ್ಲಾ ಗಣಿಗಳಿಗೆ ಅಧಿಕಾರಿಗಳು ನಿಯಮಿತವಾಗಿ ಭೇಟಿ ನೀಡಿ, ಕಾರ್ಮಿಕರ ಸುರಕ್ಷತೆ, ಕಡ್ಡಾಯ ಸುರಕ್ಷತಾ ಮಾನದಂಡಗಳ ಅನುಷ್ಠಾನ ಹಾಗೂ ಗಣಿಗಾರಿಕೆ ಕಾರ್ಯಾಚರಣೆಗಳನ್ನು ಕಟ್ಟುನಿಟ್ಟಾಗಿ ಪರಿಶೀಲಿಸಬೇಕು ಎಂದು ಸೂಚಿಸಿದರು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕಲ್ಲು ಗಣಿಯಲ್ಲಿ ಇತ್ತೀಚೆಗೆ ಸಂಭವಿಸಿದ ದುರ್ಘಟನೆಯಂತಹ ಘಟನೆಗಳು ಮತ್ತೆ ಮರುಕಳಿಸದಂತೆ ಪ್ರತಿಯೊಂದು ಗಣಿಯಲ್ಲೂ ಸುರಕ್ಷತಾ ಕ್ರಮಗಳನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡಬೇಕು. ಸುರಕ್ಷತೆಯ ವಿಷಯದಲ್ಲಿ ಯಾವುದೇ ರೀತಿಯ ರಾಜಿ ಇರಬಾರದು ಎಂದು ಅವರು ಸ್ಪಷ್ಟವಾಗಿ ತಿಳಿಸಿದರು.

ಈ ಆರ್ಥಿಕ ವರ್ಷ ಇಲಾಖೆಗೆ ₹11,000 ಕೋಟಿ ಆದಾಯ ಸಂಗ್ರಹಿಸುವ ಗುರಿ ನಿಗದಿಪಡಿಸಲಾಗಿದೆ ಎಂದು ಹೇಳಿದ ಅವರು, ಕಳೆದ ಆರ್ಥಿಕ ವರ್ಷದಲ್ಲಿ ಇಲಾಖೆ ₹6,500 ಕೋಟಿ ಆದಾಯ ಗುರಿಯನ್ನು ಯಶಸ್ವಿಯಾಗಿ ಸಾಧಿಸಿದೆ ಎಂದು ನೆನಪಿಸಿದರು. ಈ ವರ್ಷ ಒನ್ ಟೈಮ್ ಸೆಟಲ್‌ಮೆಂಟ್ (OTS) ಯೋಜನೆಯ ಮೂಲಕ ₹2,000 ಕೋಟಿ ಆದಾಯ ಸಂಗ್ರಹಿಸುವ ಗುರಿ ಹೊಂದಲಾಗಿದ್ದು, ಮುಂದಿನ ಆರು ತಿಂಗಳಲ್ಲಿ ಈ ಗುರಿಯನ್ನು ಸಾಧಿಸಲು ಎಲ್ಲಾ ಅಧಿಕಾರಿಗಳು ಹೆಚ್ಚಿನ ಕಾರ್ಯತತ್ಪರತೆಯಿಂದ ಕೆಲಸ ಮಾಡಬೇಕು ಎಂದು ಸೂಚಿಸಿದರು.

ರಾಜ್ಯ ಸರ್ಕಾರವು ಗಣಿ ಮತ್ತು ಭೂವಿಜ್ಞಾನ ಇಲಾಖೆಯಿಂದ ಹೆಚ್ಚಿನ ಆದಾಯ, ಪರಿಣಾಮಕಾರಿ ಆಡಳಿತ ಮತ್ತು ಕಟ್ಟುನಿಟ್ಟಿನ ಕಾನೂನು ಜಾರಿಯನ್ನು ನಿರೀಕ್ಷಿಸುತ್ತಿದೆ ಎಂದು ತಿಳಿಸಿದ ಅವರು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಲಾಖೆಯ ಮೇಲೆ ವಿಶೇಷ ನಿರೀಕ್ಷೆ ಹೊಂದಿದ್ದಾರೆ. ಪ್ರತಿಯೊಬ್ಬ ಅಧಿಕಾರಿಯೂ ಜವಾಬ್ದಾರಿಯುತ ಹಾಗೂ ಫಲಿತಾಂಶ ಆಧಾರಿತ ಕಾರ್ಯವೈಖರಿಯನ್ನು ಅಳವಡಿಸಿಕೊಂಡು ಇಲಾಖೆಯ ಕಾರ್ಯಕ್ಷಮತೆಯನ್ನು ಮತ್ತಷ್ಟು ಹೆಚ್ಚಿಸಬೇಕು ಎಂದು ಕರೆ ನೀಡಿದರು.

ಸಭೆಯಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ನಿರ್ದೇಶಕರಾದ ಎಸ್. ರಂಗಪ್ಪ, ಇಲಾಖೆಯ ಹಿರಿಯ ಅಧಿಕಾರಿಗಳು, ಹಿರಿಯ ಭೂವಿಜ್ಞಾನಿಗಳು ಹಾಗೂ ರಾಜ್ಯದ ಎಲ್ಲಾ ಜಿಲ್ಲೆಗಳ ಗಣಿ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ವರ್ಗಾವಣೆ ಆದೇಶಗಳ ಯಶಸ್ವಿ ಅನುಷ್ಠಾನ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನಿರ್ದೇಶನದಂತೆ ಇತ್ತೀಚೆಗೆ ಕೈಗೊಳ್ಳಲಾದ ಇಲಾಖೆಯ ಬೃಹತ್ ವರ್ಗಾವಣೆ ಪ್ರಕ್ರಿಯೆ ಯಶಸ್ವಿಯಾಗಿ ಜಾರಿಯಾಗಿದ್ದು, ವರ್ಗಾವಣೆಗೊಂಡ ಅಧಿಕಾರಿಗಳ ಪೈಕಿ ಶೇ.98ರಷ್ಟು ಅಧಿಕಾರಿಗಳು ಈಗಾಗಲೇ ತಮ್ಮ ಹೊಸ ಕರ್ತವ್ಯ ಸ್ಥಳಗಳಲ್ಲಿ ಹಾಜರಾಗಿ ಸೇವೆ ಆರಂಭಿಸಿದ್ದಾರೆ. ಇಲಾಖೆಯಲ್ಲಿ ಶಿಸ್ತು, ಪಾರದರ್ಶಕತೆ ಹಾಗೂ ಜವಾಬ್ದಾರಿಯುತ ಆಡಳಿತ ವ್ಯವಸ್ಥೆ ಬಲಪಡಿಸುವ ನಿಟ್ಟಿನಲ್ಲಿ ಇದು ಮಹತ್ವದ ಬೆಳವಣಿಗೆಯಾಗಿದೆ.

Tags: amironews

Subscribe Now and Never Miss an Update!

Unsubscribe
  • Trending
  • Comments
  • Latest

ಮಳೆ ವೇಳೆ ರಸ್ತೆಗೆ ಡಾಂಬರು ಹಾಕಲು ವೆಟ್ ಮಿಕ್ಸಿಂಗ್ ವಿಧಾನ ಬಳಕೆ: ಡಿಸಿಎಂ ಡಿ.ಕೆ.ಶಿವಕುಮಾರ್

4

ಬುಲ್ಸ್‌ಗೆ ಸವಾಲಾಗದ ಬೆಂಗಾಲ್‌ಅಲಿರೇಜಾ ಮತ್ತೊಮ್ಮೆ ಮಿಂಚು; ವಾರಿಯರ್ಸ್‌ ವಿರುದ್ಧ 43-32 ಅಂತರದ ಭರ್ಜರಿ ಗೆಲುವು

4

ಭಾರತ vs ಇಂಗ್ಲೆಂಡ್ 3ನೇ ಏಕದಿನ: 142 ರನ್ ಭರ್ಜರಿ ಜಯ, 3-0 ಸರಣಿ ಕ್ಲೀನ್ ಸ್ವೀಪ್!

2

ಚಾಮರಾಜನಗರದ ಬೇಗೂರಿನಲ್ಲಿ “ಸ್ವಸ್ಥ ನಾರಿ ಸಶಕ್ತ ಪರಿವಾರ” ಅಭಿಯಾನದ ಸಮಾರೋಪ ಸಮಾರಂಭ

2

ಆಂಥ್ರೋಪಿಕ್ ಏಐ ಬೆಂಗಳೂರು ಕಚೇರಿ ಭೇಟಿ: ಆಡಳಿತ, ಶಿಕ್ಷಣ ಮತ್ತು ನಾವೀನ್ಯತೆಯಲ್ಲಿ ಏಐ ಅನ್ವಯಕ್ಕೆ ಪ್ರಿಯಾಂಕ್ ಖರ್ಗೆ ಚರ್ಚೆ

July 25, 2026

ಮಾಜಿ ಸಚಿವ, ಮಾಜಿ ಉಪಸಭಾಪತಿ ಸಿ. ವೀರಣ್ಣ ನಿಧನ; ಹಳೆಯ ತಲೆಮಾರಿನ ರಾಜಕೀಯ ಕೊಂಡಿ ಕಳಚಿದೆ

July 25, 2026

₹11,000 ಕೋಟಿ ಆದಾಯ ಗುರಿ ಸಾಧನೆಗೆ ಪ್ರತಿ ಜಿಯಾಲಜಿಸ್ಟ್‌ಗೆ ಪ್ರತ್ಯೇಕ ಗುರಿ: ರೋಹಿಣಿ ಸಿಂಧೂರಿ

July 25, 2026

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಂದ ಮಾಜಿ ಪ್ರಧಾನಿ ದೇವೇಗೌಡರಿಗೆ ಸಾಂತ್ವನ; ಪತ್ನಿ ಚೆನ್ನಮ್ಮ ಅವರ ನಿಧನಕ್ಕೆ ತೀವ್ರ ಸಂತಾಪ

July 25, 2026

Recent News

ಖಾಸಗಿ ಹೂಡಿಕೆ, ಕರಾವಳಿ ಪ್ರವಾಸೋದ್ಯಮ ಮತ್ತು ಜಾಗತಿಕ ಬ್ರ್ಯಾಂಡಿಂಗ್ ಮೂಲಕ ಪ್ರವಾಸೋದ್ಯಮಕ್ಕೆ ಹೊಸ ವೇಗ

July 23, 2026

ಕೋಲಾರ ಜಿಲ್ಲೆಯ ಬರ ಪರಿಸ್ಥಿತಿ ಮತ್ತು ಕಂದಾಯ ವಿಷಯಗಳ ಕುರಿತು ಪ್ರಗತಿ ಪರಿಶೀಲನಾ ಸಭೆ

July 23, 2026

ಪ್ರೈವೇಟ್ ಹೋಟೆಲ್ ತಜ್ಞತೆಯಿಂದ ಪ್ರವಾಸೋದ್ಯಮ ಇಲಾಖೆ ಹೋಟೆಲ್‌ಗಳ ಅಭಿವೃದ್ಧಿ: ಸಚಿವ ಕೆ.ಜೆ. ಜಾರ್ಜ್

July 23, 2026

ಪ್ರತಿಯೊಂದು ನಗರದಲ್ಲೂ ‘ದಾವಣಗೆರೆ ಮಾದರಿ’ ಕಸ ವಿಂಗಡಣೆ ಜಾರಿ: ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ

July 22, 2026
  • Home
  • Privacy Policy
  • About Us
  • Advertise with us
  • Contact Us
Whatesapp +8050611655

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.

Welcome Back!

Login to your account below

Forgotten Password? Sign Up

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In
error:
  • Login
  • Sign Up
No Result
View All Result
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
News Post

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.