Friday, September 11, 2026
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
Home app amiro news

ಸತೀಶ್ ಜಾರಕಿಹೊಳಿ ವಿರುದ್ಧ ಇಡಿ ದಾಳಿ ರಾಜಕೀಯ ಪ್ರೇರಿತ: ಸಿಎಂ ಡಿ.ಕೆ. ಶಿವಕುಮಾರ್

PREM SHEKHAR PV by PREM SHEKHAR PV
2 days ago
Reading Time: 1 min read
A A
18
SHARES
50
VIEWS

“ಬಿಜೆಪಿ ದಲಿತ ನಾಯಕರ ಬೆಳವಣಿಗೆ ಸಹಿಸುವುದಿಲ್ಲ; 100% ಬೆಂಬಲ ನೀಡುತ್ತೇವೆ”

ಬೆಂಗಳೂರು: ಸಚಿವ ಸತೀಶ್ ಜಾರಕಿಹೊಳಿ ಮತ್ತು ಅವರ ಕುಟುಂಬಕ್ಕೆ ಸಂಬಂಧಿಸಿದ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸುತ್ತಿರುವ ದಾಳಿ ರಾಜಕೀಯ ಪ್ರೇರಿತವಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಕೇಂದ್ರ ತನಿಖಾ ಸಂಸ್ಥೆಗಳನ್ನು ರಾಜಕೀಯ ಉದ್ದೇಶಕ್ಕಾಗಿ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಅವರು ಆರೋಪಿಸಿದರು.

ಸದಾಶಿವನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ, “ಸತೀಶ್ ಜಾರಕಿಹೊಳಿ ಹಿರಿಯ ಸಚಿವರಾಗಿದ್ದು, ರಾಜಕಾರಣದ ಜತೆಗೆ ವ್ಯವಹಾರ ಮತ್ತು ಸಮಾಜ ಸೇವೆಯಲ್ಲೂ ತೊಡಗಿಸಿಕೊಂಡಿದ್ದಾರೆ. ಅವರು ಕಾನೂನಿನ ಚೌಕಟ್ಟಿನಲ್ಲೇ ವ್ಯವಹಾರ ನಡೆಸುತ್ತಿದ್ದಾರೆ. ಇಡಿ ಕೇಳುವ ಪ್ರಶ್ನೆಗಳಿಗೆ ಅವರು ಸೂಕ್ತ ಉತ್ತರ ನೀಡಲಿದ್ದಾರೆ. ಯಾರೂ ಗಾಬರಿಯಾಗಬೇಕಿಲ್ಲ. ಸತೀಶ್ ಜಾರಕಿಹೊಳಿ ಪ್ರಾಮಾಣಿಕ ರಾಜಕಾರಣಿ. ಅವರು ಯಾವುದೇ ತಪ್ಪು ಮಾಡಿಲ್ಲ ಎಂಬ ವಿಶ್ವಾಸ ನಮಗಿದೆ” ಎಂದು ಹೇಳಿದರು.

ರಾಜ್ಯ ಸರ್ಕಾರಕ್ಕೆ 100 ದಿನ ಪೂರ್ಣಗೊಳ್ಳುವ ಹೊತ್ತಿನಲ್ಲೇ ಇಂತಹ ತನಿಖಾ ಕ್ರಮಗಳು ನಡೆಯುತ್ತಿರುವುದು ರಾಜಕೀಯ ಉದ್ದೇಶ ಹೊಂದಿದೆ ಎಂದು ಸಿಎಂ ಆರೋಪಿಸಿದರು. “ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸುವ ಸಂದರ್ಭದಲ್ಲಿ ಜನರ ಗಮನವನ್ನು ಬೇರೆಡೆ ಸೆಳೆಯಲು ಈ ರೀತಿ ಮಾಡಲಾಗಿದೆ. ನಮ್ಮ ಸರ್ಕಾರ ಮತ್ತು ಪಕ್ಷವನ್ನು ಎಲ್ಲ ಕಡೆಯಿಂದಲೂ ಟಾರ್ಗೆಟ್ ಮಾಡಲಾಗುತ್ತಿದೆ” ಎಂದು ಅವರು ಹೇಳಿದರು.

“ದಲಿತ ನಾಯಕರ ಬೆಳವಣಿಗೆ ಸಹಿಸಲಾಗುತ್ತಿಲ್ಲ”
ಸತೀಶ್ ಜಾರಕಿಹೊಳಿ ಪ್ರಬಲವಾಗಿ ಬೆಳೆಯುತ್ತಿರುವ ನಾಯಕನಾಗಿರುವುದನ್ನು ಕೆಲವರಿಗೆ ಸಹಿಸಲಾಗುತ್ತಿಲ್ಲ ಎಂದು ಸಿಎಂ ಹೇಳಿದರು. “ಅವರನ್ನು ರಾಜಕೀಯವಾಗಿ ಕುಗ್ಗಿಸುವ ಪ್ರಯತ್ನ ನಡೆಯುತ್ತಿದೆ. ಆದರೆ ಇದು ಅವರಿಗೆ ತಿರುಗುಬಾಣವಾಗಲಿದೆ ಎಂಬ ಸಂಪೂರ್ಣ ವಿಶ್ವಾಸ ನನಗಿದೆ. ನನ್ನ ಮೇಲೂ ದಾಳಿ ಮಾಡಿ ಬಂಧಿಸಿದ್ದರು. ಆದರೆ ಇಂದು ನಾನು ರಾಜ್ಯದ ಮುಖ್ಯಮಂತ್ರಿಯಾಗಿದ್ದೇನೆ” ಎಂದು ಅವರು ನೆನಪಿಸಿಕೊಂಡರು.

ಹಿಂದೆ ನಾಗೇಂದ್ರ ಅವರ ಮೇಲೆ ನಡೆದ ದಾಳಿಯನ್ನು ಪ್ರಸ್ತಾಪಿಸಿ, ಆ ಪ್ರಕರಣದಲ್ಲಿ ಯಾವುದೇ ತಪ್ಪು ಇರಲಿಲ್ಲ ಎಂದು ಸಿಎಂ ಸ್ಪಷ್ಟಪಡಿಸಿದರು. ₹84 ಕೋಟಿ ಅಕ್ರಮ ವರ್ಗಾವಣೆಯಾಗಿದೆ ಎಂದು ಹೇಳಲಾಗಿದ್ದು, ಸಿಐಡಿ ಮತ್ತು ಸಿಸಿಬಿ ತನಿಖೆಯಲ್ಲಿ ₹79 ಕೋಟಿ ಹಣ ವಾಪಸ್ ಪಡೆಯಲಾಗಿದೆ. ಇನ್ನೂ ₹5 ಕೋಟಿ ಮಾತ್ರ ಬಾಕಿ ಇದೆ ಎಂದು ಅವರು ತಿಳಿಸಿದರು.

ಕಾಂಗ್ರೆಸ್ ನಾಯಕರಿಗೆ ಎಚ್ಚರಿಕೆ
ಮುಂದಿನ ದಿನಗಳಲ್ಲಿ ಇನ್ನೂ ಹಲವು ಕಾಂಗ್ರೆಸ್ ನಾಯಕರು, ಸಚಿವರು ಮತ್ತು ಶಾಸಕರ ಮೇಲೆ ತನಿಖಾ ಸಂಸ್ಥೆಗಳು ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಸಿಎಂ ಎಚ್ಚರಿಸಿದರು. “ಪಕ್ಷದ ಎಲ್ಲ ಶಾಸಕರು ಮತ್ತು ಸಚಿವರಿಗೆ ಎಚ್ಚರಿಕೆಯಿಂದಿರುವಂತೆ ಈಗಾಗಲೇ ಸೂಚನೆ ನೀಡಿದ್ದೇನೆ. ತನಿಖೆಗೆ ನಾವು ಹೆದರುವುದಿಲ್ಲ. ಆದರೆ ಸುಳ್ಳು ಕಥೆ ಕಟ್ಟುವುದು, ಸುಳ್ಳು ಆರೋಪ ಮಾಡುವುದು ಹಾಗೂ ಜನರನ್ನು ದಾರಿ ತಪ್ಪಿಸುವ ಪ್ರಯತ್ನವನ್ನು ಖಂಡಿಸುತ್ತೇವೆ” ಎಂದರು.

ಸತೀಶ್ ಜಾರಕಿಹೊಳಿಯವರಿಗೆ ಸರ್ಕಾರ 100% ಬೆಂಬಲ ನೀಡುತ್ತದೆ ಎಂದು ಸಿಎಂ ಖಚಿತಪಡಿಸಿದರು. “ಅವರು ಪ್ರಗತಿಪರ, ದೂರದೃಷ್ಟಿಯುಳ್ಳ ಮತ್ತು ಪ್ರಾಮಾಣಿಕ ರಾಜಕಾರಣಿ. ಅವರು ಯಾವುದೇ ತಪ್ಪು ಎಸಗಿಲ್ಲ” ಎಂದು ಅವರು ಹೇಳಿದರು.

ವಿದೇಶಿ ವ್ಯವಹಾರ ತಪ್ಪಲ್ಲ
ಇಡಿ FEMA ಉಲ್ಲಂಘನೆಯಡಿ ದಾಳಿ ನಡೆಸಿದೆ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿ, “ಭಾರತದಲ್ಲಿದ್ದುಕೊಂಡು ವಿದೇಶದಲ್ಲಿ ಹೂಡಿಕೆ, ವ್ಯಾಪಾರ ಮಾಡಲು ಕಾನೂನಿನಡಿ ಅವಕಾಶವಿದೆ. ಕುಟುಂಬ ಸದಸ್ಯರು ವಿದೇಶದಲ್ಲಿ ವ್ಯವಹಾರ ಮಾಡುವುದು ತಪ್ಪಲ್ಲ” ಎಂದು ಸಿಎಂ ಹೇಳಿದರು. ಇಂತಹ ಧೋರಣೆಯಿಂದಾಗಿ 12 ಲಕ್ಷಕ್ಕೂ ಹೆಚ್ಚು ಉದ್ಯಮಿಗಳು ಭಾರತವನ್ನು ತೊರೆದಿದ್ದಾರೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.

ಕೆಪಿಎಸ್‌ಸಿ ಪ್ರಕರಣದ ಬಗ್ಗೆ ಮಾತನಾಡಿದ ಸಿಎಂ, “ತಪ್ಪೆಸಗಿದವರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ. ಕಾನೂನಿನ ಚೌಕಟ್ಟನ್ನು ಮೀರಿ ನಾವು ಯಾರಿಗೂ ಸಹಾಯ ಮಾಡಿಲ್ಲ” ಎಂದು ಸ್ಪಷ್ಟಪಡಿಸಿದರು.

ವಿಪಕ್ಷಗಳ ಟೀಕೆಗಳು ಮತ್ತು ತನಿಖಾ ಕ್ರಮಗಳು ಕಾಂಗ್ರೆಸ್ ನಾಯಕರನ್ನು ಇನ್ನಷ್ಟು ಎಚ್ಚರಿಕೆಯಿಂದಿರುವಂತೆ ಮಾಡುತ್ತವೆ ಎಂದು ಸಿಎಂ ಹೇಳಿದರು. “ನೂರು ಪ್ರತಿಭಟನೆ ಮಾಡಲಿ, ನೂರು ಓಡಾಟ ಮಾಡಲಿ. ನಾವು ಯಾವುದಕ್ಕೂ ಹೆದರುವುದಿಲ್ಲ” ಎಂದು ಅವರು ಸವಾಲು ಹಾಕಿದರು.

Tags: amironews

Subscribe Now and Never Miss an Update!

Unsubscribe
  • Trending
  • Comments
  • Latest

ಮಳೆ ವೇಳೆ ರಸ್ತೆಗೆ ಡಾಂಬರು ಹಾಕಲು ವೆಟ್ ಮಿಕ್ಸಿಂಗ್ ವಿಧಾನ ಬಳಕೆ: ಡಿಸಿಎಂ ಡಿ.ಕೆ.ಶಿವಕುಮಾರ್

4

ಬುಲ್ಸ್‌ಗೆ ಸವಾಲಾಗದ ಬೆಂಗಾಲ್‌ಅಲಿರೇಜಾ ಮತ್ತೊಮ್ಮೆ ಮಿಂಚು; ವಾರಿಯರ್ಸ್‌ ವಿರುದ್ಧ 43-32 ಅಂತರದ ಭರ್ಜರಿ ಗೆಲುವು

4

ಭಾರತ vs ಇಂಗ್ಲೆಂಡ್ 3ನೇ ಏಕದಿನ: 142 ರನ್ ಭರ್ಜರಿ ಜಯ, 3-0 ಸರಣಿ ಕ್ಲೀನ್ ಸ್ವೀಪ್!

2

ಚಾಮರಾಜನಗರದ ಬೇಗೂರಿನಲ್ಲಿ “ಸ್ವಸ್ಥ ನಾರಿ ಸಶಕ್ತ ಪರಿವಾರ” ಅಭಿಯಾನದ ಸಮಾರೋಪ ಸಮಾರಂಭ

2

‘ಧನನಾಯಕ’ ಆಗುವುದು ಸುಲಭ, ‘ಜನನಾಯಕ’ ಆಗುವುದು ಕಷ್ಟ: ಡಿ.ಕೆ. ಶಿವಕುಮಾರ್ ವಿರುದ್ಧ ಟೀಕೆ

September 10, 2026

ಪೊಲೀಸ್ ವಾಹನಗಳಿಗೆ ಬಾಡಿಗೆ-ಲೀಸಿಂಗ್ ಮಾದರಿ

September 10, 2026

‘ಬಳ್ಳಾರಿ ಚಲೋ’ ಪಾದಯಾತ್ರೆ ಯಶಸ್ವಿ: ಕಾಂಗ್ರೆಸ್ ಸರ್ಕಾರವನ್ನು ಮನೆಗೆ ಕಳುಹಿಸಿ ಎಂದು ವಿಜಯೇಂದ್ರ ಮನವಿ

September 10, 2026

ದೇವನಹಳ್ಳಿ ಎಂಎಸ್‌ಎಂಇ ತಂತ್ರಜ್ಞಾನ ಕೇಂದ್ರ ವರ್ಷಕ್ಕೆ 10,000 ಮಂದಿಗೆ ವೃತ್ತಿಪರ ಕೌಶಲ್ಯ ತರಬೇತಿ ನೀಡಲಿದೆ: ರೋಹಿಣಿ ಸಿಂಧೂರಿ

September 10, 2026

Recent News

ಗಂಗಾ ಗ್ರ್ಯಾಂಡ್‌ಮಾಸ್ಟರ್ಸ್‌ಗೆ ನಾಟಕೀಯ ಗೆಲುವು: ಟಾಪ್ ಸ್ಥಾನಕ್ಕೆ ಪೈಪೋಟಿ ತೀವ್ರ

September 9, 2026

ಕೋರ್ಟ್ ನೆಪ ಹೇಳಿ ಕಾಮಗಾರಿ ವಿಳಂಬ ಮಾಡಿದರೆ ಸಹಿಸಲ್ಲ: ಕೆಬಿಜೆಎನ್‌ಎಲ್ ಅಧಿಕಾರಿಗಳಿಗೆ ಸಚಿವ ಚಲುವರಾಯಸ್ವಾಮಿ ಖಡಕ್ ಎಚ್ಚರಿಕೆ

September 8, 2026

ಮೈಸೂರಿನಲ್ಲಿ ಅಂತಾರಾಷ್ಟ್ರೀಯ ದರ್ಜೆಯ ಚಿತ್ರನಗರಿ: ನಗರಾಭಿವೃದ್ಧಿ ಸಚಿವರಿಂದ ಪ್ರಗತಿ ಪರಿಶೀಲನೆ

September 8, 2026

ಬೆಳಗಾವಿ ಬಿಮ್ಸ್‌ನಲ್ಲಿ ನವಜಾತ ಶಿಶುಗಳ ಸಾವಿನ ಸರಣಿ: ಬಿಜೆಪಿ ನಾಯಕರ ಆರೋಪ

September 8, 2026
https://play.google.com/store/apps/details?id=com.ktplamiro.news https://play.google.com/store/apps/details?id=com.ktplamiro.news https://play.google.com/store/apps/details?id=com.ktplamiro.news
  • Home
  • Privacy Policy
  • About Us
  • Advertise with us
  • Contact Us
Whatesapp +8050611655

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.

Welcome Back!

Login to your account below

Forgotten Password? Sign Up

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In
No Result
View All Result
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.