Wednesday, September 16, 2026
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
Home app amiro news

ಕರ್ನಾಟಕ ಪ್ರವಾಸೋದ್ಯಮಕ್ಕೆ ಹೂಡಿಕೆ: ಯುಎಇ ಕನ್ನಡಿಗ ಉದ್ಯಮಿಗಳಿಗೆ ಸಚಿವ ಕೆ.ಜೆ. ಜಾರ್ಜ್‌ರಿಂದ ಆಹ್ವಾನ

PREM SHEKHAR PV by PREM SHEKHAR PV
1 day ago
Reading Time: 1 min read
A A
18
SHARES
50
VIEWS

ದುಬೈ: ಕರ್ನಾಟಕದ ಪ್ರವಾಸೋದ್ಯಮ, ಮೂಲಸೌಕರ್ಯ ಮತ್ತು ಆರ್ಥಿಕ ಬೆಳವಣಿಗೆಯಲ್ಲಿ ಸಕ್ರಿಯ ಪಾಲುದಾರರಾಗುವಂತೆ ಯುಎಇಯಲ್ಲಿರುವ ಕನ್ನಡಿಗ ಉದ್ಯಮಿಗಳು ಹಾಗೂ ಹೂಡಿಕೆದಾರರಿಗೆ ಇಂಧನ ಮತ್ತು ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್ ಆಹ್ವಾನ ನೀಡಿದ್ದಾರೆ.

‘ಇನ್ವೆಸ್ಟ್ ಇನ್ ಕರ್ನಾಟಕ – ಎನ್‌ಆರ್‌ಐ ಬಿಸಿನೆಸ್ ಕಮ್ಯುನಿಟಿ ಮೀಟ್, ದುಬೈ 2026’ ಕಾರ್ಯಕ್ರಮದಲ್ಲಿ 20ಕ್ಕೂ ಹೆಚ್ಚು ಕ್ಷೇತ್ರಗಳನ್ನು ಪ್ರತಿನಿಧಿಸುವ 65ಕ್ಕೂ ಹೆಚ್ಚು ಪ್ರಮುಖ ಕನ್ನಡಿಗ ಉದ್ಯಮಿಗಳನ್ನು ಉದ್ದೇಶಿಸಿ ಮಾತನಾಡಿದ ಸಚಿವರು, ಜಾಗತಿಕ ಹೂಡಿಕೆದಾರರಿಗೆ ಕರ್ನಾಟಕದಲ್ಲಿ ವಿಪುಲ ಅವಕಾಶಗಳಿದ್ದು, ಗಂಭೀರ ಹೂಡಿಕೆ ಪ್ರಸ್ತಾವನೆಗಳಿಗೆ ಸರ್ಕಾರ ಅಗತ್ಯ ಸಹಕಾರ ಮತ್ತು ನೆರವು ನೀಡುವುದಾಗಿ ಭರವಸೆ ನೀಡಿದರು.

ಕರ್ನಾಟಕ ಎನ್‌ಆರ್‌ಐ ಫೋರಂ ಯುಎಇ ಆಯೋಜಿಸಿದ್ದ ಈ ಸಂವಾದದಲ್ಲಿ ಉದ್ಯಮಿಗಳು, ಹೂಡಿಕೆದಾರರು ಮತ್ತು ಕರ್ನಾಟಕ ಸರ್ಕಾರದ ಹಿರಿಯ ಪ್ರತಿನಿಧಿಗಳು ಭಾಗವಹಿಸಿ ಪ್ರವಾಸೋದ್ಯಮ, ವ್ಯಾಪಾರ, ಮೂಲಸೌಕರ್ಯ, ಸಂಪರ್ಕ ವ್ಯವಸ್ಥೆ ಹಾಗೂ ವ್ಯವಹಾರಿಕ ಸಹಭಾಗಿತ್ವದ ಅವಕಾಶಗಳ ಕುರಿತು ಚರ್ಚಿಸಿದರು.

ಪ್ರವಾಸೋದ್ಯಮ ಇಲಾಖೆಯ ಕಾರ್ಯದರ್ಶಿ ಡಾ. ರಾಮ್ ಪ್ರಸಾತ್ ಮನೋಹರ್, ಐಎಎಸ್ ಅವರು ಕರ್ನಾಟಕದ ಪ್ರವಾಸೋದ್ಯಮ ಸಾಮರ್ಥ್ಯ ಮತ್ತು ಹೂಡಿಕೆ ಅವಕಾಶಗಳ ಕುರಿತು ಸಮಗ್ರ ಮಾಹಿತಿ ನೀಡಿದರು. ಲೀಝರ್ ಪ್ರವಾಸೋದ್ಯಮ, ಬಿಸಿನೆಸ್ ಟೂರಿಸಂ, ವೈದ್ಯಕೀಯ, ವೆಲ್‌ನೆಸ್, ಆಧ್ಯಾತ್ಮಿಕ, ಕರಾವಳಿ ಹಾಗೂ ಅನುಭವಾಧಾರಿತ ಪ್ರವಾಸೋದ್ಯಮ ಕ್ಷೇತ್ರಗಳಲ್ಲಿ ಖಾಸಗಿ ಹೂಡಿಕೆ ಮತ್ತು ಸಾರ್ವಜನಿಕ-ಖಾಸಗಿ ಸಹಭಾಗಿತ್ವ (ಪಿಪಿಪಿ) ಅವಕಾಶಗಳನ್ನು ಅವರು ವಿವರಿಸಿದರು. ಗುಣಮಟ್ಟದ ವಸತಿ ಸೌಲಭ್ಯ, ಪ್ರವಾಸಿ ತಾಣಗಳ ಮೂಲಸೌಕರ್ಯ, ಪ್ರವಾಸಿಗರ ಅನುಭವ ಮತ್ತು ಹೊಸ ಪ್ರವಾಸೋದ್ಯಮ ಉತ್ಪನ್ನಗಳ ಅಭಿವೃದ್ಧಿಗೆ ರಾಜ್ಯ ಸರ್ಕಾರ ಒತ್ತು ನೀಡುತ್ತಿದ್ದು, ಖಾಸಗಿ ವಲಯಕ್ಕೆ ಹೂಡಿಕೆ ಯೋಗ್ಯ ಯೋಜನೆಗಳನ್ನು ರೂಪಿಸಲಾಗುತ್ತಿದೆ ಎಂದು ತಿಳಿಸಿದರು.

ಕರ್ನಾಟಕ ರಾಜ್ಯದ ನಿಯೋಗದಲ್ಲಿ ಕೆಎಸ್‌ಟಿಡಿಸಿ ಅಧ್ಯಕ್ಷ ಶ್ರೀನಿವಾಸ್ ಎಂ., ವಿಧಾನ ಪರಿಷತ್ ಸದಸ್ಯೆ ಡಾ. ಆರತಿ ಕೃಷ್ಣ ಮತ್ತು ಕೆಎಸ್‌ಟಿಡಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಪ್ರಸಾದ್ ಪಿ.ಆರ್. ಉಪಸ್ಥಿತರಿದ್ದರು. ಯುಎಇಯ ಪ್ರಮುಖ ಉದ್ಯಮಿಗಳಾದ ಡಾ. ರೊನಾಲ್ಡ್ ಕೊಲಾಸೊ, ಡಾ. ಮೊಯ್ದೀನ್ ತುಂಬೆ ಹಾಗೂ ಕರ್ನಾಟಕ ಎನ್‌ಆರ್‌ಐ ಫೋರಂ ಯುಎಇ ಅಧ್ಯಕ್ಷ ಪ್ರವೀಣ್ ಶೆಟ್ಟಿ ಸಹ ಸಂವಾದದಲ್ಲಿ ಭಾಗವಹಿಸಿದ್ದರು. ವಿಮಾನ, ರಸ್ತೆ ಮತ್ತು ಕರಾವಳಿ ಸಂಪರ್ಕ ಸುಧಾರಣೆ, ಹೂಡಿಕೆ ಸೌಲಭ್ಯಗಳು ಹಾಗೂ ಕರ್ನಾಟಕವನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಪರಿಣಾಮಕಾರಿಯಾಗಿ ಪರಿಚಯಿಸುವ ಕುರಿತು ಚರ್ಚೆ ನಡೆದಿತ್ತು. ಕರ್ನಾಟಕದ ನಿರ್ದಿಷ್ಟ ಪ್ರವಾಸೋದ್ಯಮ ಮತ್ತು ಹೂಡಿಕೆ ಅವಕಾಶಗಳನ್ನು ಮುಂದಿನ ಹಂತಕ್ಕೆ ಕೊಂಡೊಯ್ಯಲು ಉದ್ಯಮಿಗಳು ಆಸಕ್ತಿ ವ್ಯಕ್ತಪಡಿಸಿದರು.

ಸಚಿವ ಕೆ.ಜೆ. ಜಾರ್ಜ್ ಮಾತನಾಡಿ, “ವಿಶ್ವದ ವಿವಿಧ ಭಾಗಗಳಲ್ಲಿ ಕನ್ನಡಿಗರು ಯಶಸ್ವಿ ಉದ್ಯಮಗಳು ಮತ್ತು ಬಲಿಷ್ಠ ಜಾಗತಿಕ ವ್ಯವಹಾರಗಳನ್ನು ನಿರ್ಮಿಸಿದ್ದಾರೆ. ಆ ಉದ್ಯಮಶೀಲ ಶಕ್ತಿ ಕರ್ನಾಟಕದೊಂದಿಗೆ ಇನ್ನಷ್ಟು ನಿಕಟವಾಗಿ ಸಂಪರ್ಕಿಸಬೇಕು ಎಂಬುದು ನಮ್ಮ ಆಶಯ. ಹೂಡಿಕೆದಾರರಿಗೆ ಸರ್ಕಾರ ಅಗತ್ಯ ಸಹಕಾರ ನೀಡುವುದರ ಜೊತೆಗೆ ಉತ್ತಮ ಪ್ರಸ್ತಾವನೆಗಳನ್ನು ಯೋಜನೆಗಳಾಗಿ ರೂಪಿಸಲು ನೆರವಾಗಲಿದೆ” ಎಂದು ಹೇಳಿದರು.

ಪ್ರವಾಸೋದ್ಯಮ ಕಾರ್ಯದರ್ಶಿ ಡಾ. ರಾಮ್ ಪ್ರಸಾತ್ ಮನೋಹರ್, “ಕರ್ನಾಟಕದ ದೊಡ್ಡ ಶಕ್ತಿ ಅದರ ವೈವಿಧ್ಯತೆ. ಕರಾವಳಿ ಮತ್ತು ವೆಲ್‌ನೆಸ್ ಪ್ರವಾಸೋದ್ಯಮದಿಂದ ವೈದ್ಯಕೀಯ, ಆಧ್ಯಾತ್ಮಿಕ ಹಾಗೂ ಬಿಸಿನೆಸ್ ಟೂರಿಸಂವರೆಗೆ ವಾಣಿಜ್ಯಾತ್ಮಕವಾಗಿ ಯಶಸ್ವಿಯಾಗಬಲ್ಲ ಅನೇಕ ಅವಕಾಶಗಳಿವೆ. ಹೂಡಿಕೆದಾರರಿಗೆ ಸ್ಪಷ್ಟ ಮತ್ತು ಅನುಷ್ಠಾನ ಯೋಗ್ಯ ಪ್ರವಾಸೋದ್ಯಮ ಯೋಜನೆಗಳ ಸರಣಿಯನ್ನು ರೂಪಿಸುವುದು ನಮ್ಮ ಆದ್ಯತೆ” ಎಂದು ತಿಳಿಸಿದರು.

ಕರ್ನಾಟಕ ಎನ್‌ಆರ್‌ಐ ಫೋರಂ ಯುಎಇ ಅಧ್ಯಕ್ಷ ಪ್ರವೀಣ್ ಶೆಟ್ಟಿ, “ಪ್ರವಾಸಿ ಕನ್ನಡಿಗರ ಸಂಪರ್ಕವು ಕೇವಲ ನೆಟ್‌ವರ್ಕಿಂಗ್‌ಗೆ ಸೀಮಿತವಾಗಬಾರದು. ಹೂಡಿಕೆದಾರರು ಮತ್ತು ಸರ್ಕಾರದ ನಡುವೆ ಸ್ಪಷ್ಟವಾದ ಸಾಂಸ್ಥಿಕ ಸಂಪರ್ಕ, ಗುರುತಿಸಲಾದ ಅವಕಾಶಗಳು ಹಾಗೂ ನಿರಂತರ ಅನುಸರಣೆ ಅಗತ್ಯ. ಈ ಸಭೆ ಅದಕ್ಕೆ ಮಹತ್ವದ ವೇದಿಕೆ ಒದಗಿಸಿದೆ” ಎಂದು ಅಭಿಪ್ರಾಯಪಟ್ಟರು.

ಡಾ. ರೊನಾಲ್ಡ್ ಕೊಲಾಸೊ, “ಕರ್ನಾಟಕವು ಜಾಗತಿಕ ಹೂಡಿಕೆ ಮತ್ತು ಪ್ರವಾಸೋದ್ಯಮ ತಾಣವಾಗಿ ಇನ್ನಷ್ಟು ದೊಡ್ಡ ಮಟ್ಟದಲ್ಲಿ ಬೆಳೆಯುವ ಸಾಮರ್ಥ್ಯ ಹೊಂದಿದೆ. ಉತ್ತಮ ಸಂಪರ್ಕ, ಬಲಿಷ್ಠ ಮೂಲಸೌಕರ್ಯ ಮತ್ತು ಸಮಯಬದ್ಧ ಅನುಷ್ಠಾನದಿಂದ ಈ ಸಾಮರ್ಥ್ಯವನ್ನು ವೇಗವಾಗಿ ವಾಸ್ತವಕ್ಕೆ ತರಬಹುದು” ಎಂದು ಹೇಳಿದರು.

ಡಾ. ಮೊಯ್ದೀನ್ ತುಂಬೆ, “ಉದ್ಯಮಿಗಳಿಗೆ ವಿಶ್ವಾಸ, ಸ್ಪಷ್ಟತೆ ಮತ್ತು ಸಮಯೋಚಿತ ಸಹಕಾರ ಅತ್ಯಂತ ಮುಖ್ಯ. ಕರ್ನಾಟಕದಲ್ಲಿ ಪ್ರತಿಭೆ ಮತ್ತು ಮಾರುಕಟ್ಟೆಯ ದೊಡ್ಡ ಸಾಮರ್ಥ್ಯವಿದ್ದು, ಉತ್ತಮ ಸರ್ಕಾರಿ ಸೌಲಭ್ಯಗಳಿಂದ ಇನ್ನಷ್ಟು ಜಾಗತಿಕ ಕನ್ನಡಿಗರನ್ನು ರಾಜ್ಯದಲ್ಲಿ ಹೂಡಿಕೆ ಮಾಡಲು ಪ್ರೋತ್ಸಾಹಿಸಬಹುದು” ಎಂದು ಅಭಿಪ್ರಾಯಪಟ್ಟರು.

Tags: amironews

Subscribe Now and Never Miss an Update!

Unsubscribe
  • Trending
  • Comments
  • Latest

ಮಳೆ ವೇಳೆ ರಸ್ತೆಗೆ ಡಾಂಬರು ಹಾಕಲು ವೆಟ್ ಮಿಕ್ಸಿಂಗ್ ವಿಧಾನ ಬಳಕೆ: ಡಿಸಿಎಂ ಡಿ.ಕೆ.ಶಿವಕುಮಾರ್

4

ಬುಲ್ಸ್‌ಗೆ ಸವಾಲಾಗದ ಬೆಂಗಾಲ್‌ಅಲಿರೇಜಾ ಮತ್ತೊಮ್ಮೆ ಮಿಂಚು; ವಾರಿಯರ್ಸ್‌ ವಿರುದ್ಧ 43-32 ಅಂತರದ ಭರ್ಜರಿ ಗೆಲುವು

4

ಭಾರತ vs ಇಂಗ್ಲೆಂಡ್ 3ನೇ ಏಕದಿನ: 142 ರನ್ ಭರ್ಜರಿ ಜಯ, 3-0 ಸರಣಿ ಕ್ಲೀನ್ ಸ್ವೀಪ್!

2

ಚಾಮರಾಜನಗರದ ಬೇಗೂರಿನಲ್ಲಿ “ಸ್ವಸ್ಥ ನಾರಿ ಸಶಕ್ತ ಪರಿವಾರ” ಅಭಿಯಾನದ ಸಮಾರೋಪ ಸಮಾರಂಭ

2

69ನೇ ಕಾಮನ್‌ವೆಲ್ತ್ ಸಂಸದೀಯ ಸಮ್ಮೇಳನ: ದಕ್ಷಿಣ ಆಫ್ರಿಕಾ ಸ್ಪೀಕರ್‌ಗೆ ‘A Brochure on Karnataka’ ಸಮರ್ಪಣೆ

September 15, 2026

ಜೈಲಿನ ಬೆದರಿಕೆಯಿಂದ ನನ್ನನ್ನು ಹೆದರಿಸಲು ಸಾಧ್ಯವಿಲ್ಲ; ವಿಜಯದಶಮಿಯಿಂದ ಭ್ರಷ್ಟರ ವಿರುದ್ಧ ಯುದ್ಧ ಆರಂಭ: ಹೆಚ್.ಡಿ. ಕುಮಾರಸ್ವಾಮಿ

September 15, 2026

ನಾಯಕನಾದವನಿಗೆ ಅಡಿಗಡಿಗೂ ಅಡಚಣೆಗಳು ಜಾಸ್ತಿ: ಸಿಎಂ ಡಿ.ಕೆ. ಶಿವಕುಮಾರ್

September 15, 2026

ಕರ್ನಾಟಕ ಪ್ರವಾಸೋದ್ಯಮಕ್ಕೆ ಹೂಡಿಕೆ: ಯುಎಇ ಕನ್ನಡಿಗ ಉದ್ಯಮಿಗಳಿಗೆ ಸಚಿವ ಕೆ.ಜೆ. ಜಾರ್ಜ್‌ರಿಂದ ಆಹ್ವಾನ

September 15, 2026

Recent News

ಜಿಎಲ್‌ಸಿ ಸೀಸನ್-4 ಫೈನಲ್: ಚಾಂಪಿಯನ್ ಅಲ್ಪೈನ್ ಎಪಿಎಲ್ ಪೈಪರ್ಸ್ ವಿರುದ್ಧ ಗಂಗೆಸ್ ಗ್ರ್ಯಾಂಡ್‌ಮಾಸ್ಟರ್ಸ್

September 13, 2026

ಚಿದಂಬರರಾವ್ ಜಂಬೆ ನಿಧನ: ಕನ್ನಡ ರಂಗಭೂಮಿಗೆ ಅಪಾರ ನಷ್ಟ ಡಾ. ಉಮಾಶ್ರೀ ಸಂತಾಪ ವ್ಯಕ್ತಪಡಿಸಿದ್ದಾರೆ

September 12, 2026

ಶುರುವಾಯಿತು ಗೃಹ ಜ್ಯೋತಿ ವಸೂಲಿ ಭಾಗ್ಯ

September 12, 2026

ನಿರ್ಮಲಾ ಸೀತಾರಾಮನ್-ಎಐಐಬಿ ಅಧ್ಯಕ್ಷರ ಭೇಟಿ: ಭಾರತ-ಎಐಐಬಿ ಪಾಲುದಾರಿಕೆ ಗಟ್ಟಿಗೊಳಿಸುವ ಕುರಿತು ಚರ್ಚೆ

September 12, 2026
https://play.google.com/store/apps/details?id=com.ktplamiro.news https://play.google.com/store/apps/details?id=com.ktplamiro.news https://play.google.com/store/apps/details?id=com.ktplamiro.news
  • Home
  • Privacy Policy
  • About Us
  • Advertise with us
  • Contact Us
Whatesapp +8050611655

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.

Welcome Back!

Login to your account below

Forgotten Password? Sign Up

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In
No Result
View All Result
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.