Sunday, September 20, 2026
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
Home State Karnataka News

ಕಸ್ತೂರಿರಂಗನ್ ವರದಿ: ರೈತರ ಬದುಕು ಉಳಿಸಲು ಕೆಲಸ ಮಾಡುತ್ತೇವೆ ಎಂದು ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

Ranjitha by Ranjitha
21 hours ago
Reading Time: 1 min read
A A
18
SHARES
50
VIEWS

ಬಾಳೆಹೊನ್ನೂರು: ಕಸ್ತೂರಿರಂಗನ್ ವರದಿ ಸೇರಿದಂತೆ ರೈತರ ಬದುಕು ಉಳಿಸಲು ಸರ್ಕಾರ ಕೆಲಸ ಮಾಡಲಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಶನಿವಾರ ಭರವಸೆ ನೀಡಿದರು.

ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರಿನಲ್ಲಿ ನಡೆದ ಕಸ್ತೂರಿರಂಗನ್ ವರದಿ ಕುರಿತ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಸಿಎಂ, “ಪರಿಸರ ಸೂಕ್ಷ್ಮ ವಲಯ ಸೇರಿದಂತೆ ಈ ಭಾಗದ ರೈತರ ಸಮಸ್ಯೆಗಳ ಬಗ್ಗೆ ನೀವು ಗಮನ ಸೆಳೆದಿದ್ದೀರಿ. ನನ್ನ ಕೈಲಾದ ಮಟ್ಟಿಗೆ ನಾನು ಸಹಾಯ ಮಾಡುತ್ತೇನೆ. ರಾಜ್ಯದ ಹಿತಕ್ಕಾಗಿ ಅಗತ್ಯವಿರುವ ಕಾನೂನು ತಿದ್ದುಪಡಿ ಮಾಡುವ ಪ್ರಯತ್ನ ಮಾಡುತ್ತೇನೆ” ಎಂದರು.

ರೈತ ನಾಯಕರು ಮತ್ತು ಸಂಘಟನೆಗಳು ಸಮಸ್ಯೆಗಳನ್ನು ವಿವರಿಸಿರುವುದನ್ನು ಗಮನಿಸಿ, ಉನ್ನತ ಮಟ್ಟದ ಸಮಿತಿ ರಚನೆ ಹಾಗೂ ಕೇರಳ ಮಾದರಿಯಲ್ಲಿ ಭೌತಿಕ ಸಮೀಕ್ಷೆ ನಡೆಸುವಂತಹ ಸಲಹೆಗಳನ್ನು ಪರಿಗಣಿಸಲಾಗುವುದು ಎಂದು ಅವರು ತಿಳಿಸಿದರು. ವಿರೋಧ ಪಕ್ಷಗಳು ಅಧಿವೇಶನದಲ್ಲಿ ಚರ್ಚೆಗೆ ಅವಕಾಶ ನೀಡದ ಕಾರಣ, ಶಾಸಕರು ಮತ್ತು ಜಿಲ್ಲಾ ಮಂತ್ರಿಗಳ ಸಲಹೆಯ ಮೇರೆಗೆ ಜನರ ಅಭಿಪ್ರಾಯ ಸಂಗ್ರಹಿಸಲು ಈ ಸಭೆ ಕರೆಯಲಾಗಿದೆ ಎಂದು ಸಿಎಂ ವಿವರಿಸಿದರು.

ಹಿಂದಿನ ಸರ್ಕಾರಗಳು ಉಳುವವನಿಗೆ ಭೂಮಿ ಮತ್ತು ಬಗರ್ ಹುಕುಂ ಜಾರಿಗೆ ತಂದಿದ್ದು, ಬಾಕಿ ಅರ್ಜಿಗಳ ವಿಲೇವಾರಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು. ಅರಣ್ಯ ಇಲಾಖೆಗೆ ರೈತರು ಈಗಾಗಲೇ ಉಳುಮೆ ಮಾಡುತ್ತಿರುವ ಜಮೀನು ಕಾಪಾಡುವಂತೆ ಮತ್ತು ಹೊಸ ಒತ್ತುವರಿ ಮಾಡದಂತೆ ಸೂಚನೆ ನೀಡಲಾಗಿದೆ. ಕಾಫಿ ಲೀಸ್ ಹಾಗೂ ಫಾರಂ 57 ವಿಚಾರಗಳನ್ನು ಪರಿಗಣಿಸಿ, ಅರಣ್ಯ ಹಕ್ಕು ಕಾಯ್ದೆಯಲ್ಲಿ 25 ವರ್ಷಗಳ ನಿಗದಿಗಾಗಿ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ತಿಳಿಸಿದರು.

2022ರಲ್ಲಿ ಸಂಜಯ್ ಕುಮಾರ್ ಅವರ ವರದಿಗೆ 2027ರವರೆಗೆ ಕಾಲಾವಕಾಶ ನೀಡಿರುವ ವಿಚಾರ ಕೇಂದ್ರ ಸಚಿವರೊಂದಿಗೆ ಚರ್ಚಿಸಿ ತೀರ್ಮಾನಿಸಲಾಗುವುದು. ಅಗತ್ಯವಿದ್ದಲ್ಲಿ ಕೇಂದ್ರಕ್ಕೆ ಪ್ರತ್ಯೇಕ ನಿಯೋಗ ಕರೆದೊಯ್ಯುವುದಾಗಿ ಸಿಎಂ ಭರವಸೆ ನೀಡಿದರು.

ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಸಚಿವ ಸಂಪುಟ ಸಭೆಗಳನ್ನು ನಡೆಸಿ, ಪಿಂಚಣಿ, ನಿವೇಶನ ಸೇರಿದಂತೆ ಸಮಸ್ಯೆಗಳನ್ನು ಪರಿಹರಿಸಲು ಮುಂದಾಗುವುದಾಗಿ ಅವರು ಹೇಳಿದರು. ಸರ್ಕಾರ ವಾರ್ಷಿಕ ಒಂದು ಲಕ್ಷ ಕೋಟಿ ರೂಪಾಯಿಗಳನ್ನು ಬಡವರು ಮತ್ತು ರೈತರಿಗಾಗಿ ವೆಚ್ಚ ಮಾಡುತ್ತಿದ್ದು, ಗ್ಯಾರಂಟಿ ಯೋಜನೆಗಳಿಗೆ 53 ಸಾವಿರ ಕೋಟಿ ಹಾಗೂ ರೈತರ ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್‌ಗಾಗಿ 20 ಸಾವಿರ ಕೋಟಿ ರೂಪಾಯಿ ವೆಚ್ಚ ಮಾಡಲಾಗುತ್ತಿದೆ ಎಂದು ವಿವರಿಸಿದರು.

ಶುಕ್ರವಾರ ಮಂಗಳೂರಿನಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕರಾವಳಿ ಜೊತೆಗೆ ಮಲೆನಾಡಿಗೂ ಪ್ರವಾಸೋದ್ಯಮ ನೀತಿ ರೂಪಿಸಲಾಗಿದೆ. ಬಂಡವಾಳ ಹರಿವು, ಉದ್ಯೋಗ ಸೃಷ್ಟಿ ಮತ್ತು ವಲಸೆ ನಿಲ್ಲಿಸುವುದು ಗುರಿಯಾಗಿದೆ ಎಂದು ಸಿಎಂ ತಿಳಿಸಿದರು.

ವಿರೋಧ ಪಕ್ಷಗಳು ರಾಜಕೀಯಕ್ಕೆ ಹೆಚ್ಚು ಗಮನ ನೀಡುತ್ತಿವೆ ಎಂದು ಟೀಕಿಸಿದ ಸಿಎಂ, “ನಾನು ಭಾವನೆಯ ಮೇಲೆ ರಾಜಕಾರಣ ಮಾಡುವುದಿಲ್ಲ. ಜನರ ಬದುಕಿಗಾಗಿ ಕೆಲಸ ಮಾಡುತ್ತೇನೆ. ಮುಂದಿನ ಅಧಿವೇಶನದಲ್ಲಿ ಗಲಾಟೆಗೆ ಅವಕಾಶ ನೀಡುವುದಿಲ್ಲ” ಎಂದರು.

ರಾಜ್ಯದಲ್ಲಿ 101 ತಾಲ್ಲೂಕುಗಳನ್ನು ಬರಪೀಡಿತವೆಂದು ಘೋಷಿಸಲಾಗಿದ್ದು, ಬರ ಹಾಗೂ ಕಸ್ತೂರಿರಂಗನ್ ವರದಿ ಬಗ್ಗೆ ವಿಶೇಷ ಅಧಿವೇಶನದಲ್ಲಿ ಚರ್ಚೆ ನಡೆಯಲಿದೆ ಎಂದು ಅವರು ಹೇಳಿದರು. ಜಿಲ್ಲಾ ಮಂತ್ರಿಗಳು ತಿಂಗಳಿಗೆ ಎರಡು ದಿನಗಳ ಕಾಲ ಎರಡು ತಾಲ್ಲೂಕುಗಳಿಗೆ ಭೇಟಿ ನೀಡುವಂತೆ ಸೂಚಿಸಲಾಗಿದೆ.

ಸಭೆಯಲ್ಲಿ ಶಾಸಕರಾದ ಟಿ.ಡಿ. ರಾಜೇಗೌಡ, ನಯನಾ ಮೋಟಮ್ಮ, ಸಂಸದ ಕೋಟಾ ಶ್ರೀನಿವಾಸ ಪೂಜಾರಿ, ಜೆಡಿಎಸ್ ವಕ್ತಾರ ಸುಧಾಕರ್ ಎಸ್. ಶೆಟ್ಟಿ, ಸುಧೀರ್ ಕುಮಾರ್ ಮುರೋಳ್ಳಿ, ವಿಜಯ್ ಕುಮಾರ್ ಮತ್ತಿತರರು ಮಾತನಾಡಿ, ಕಸ್ತೂರಿರಂಗನ್ ವರದಿಯ ಲೋಪಗಳು ಮತ್ತು ಅದರಿಂದಾಗುವ ಸಮಸ್ಯೆಗಳನ್ನು ಎತ್ತಿ ತೋರಿಸಿದರು. ಜಿಲ್ಲೆಯಲ್ಲಿ 138 ಹಳ್ಳಿಗಳನ್ನು ಪರಿಸರ ಸೂಕ್ಷ್ಮ ಪ್ರದೇಶವೆಂದು ಅಧಿಸೂಚಿಸಲಾಗಿದ್ದು, ರಾಜ್ಯದಲ್ಲಿ ಒಟ್ಟು 1,449 ಹಳ್ಳಿಗಳು ಇದರ ವ್ಯಾಪ್ತಿಗೆ ಬಂದಿವೆ. ಕೇರಳದಲ್ಲಿ ಉಮರ್ ಸಮಿತಿ ಮೂಲಕ ಭೌತಿಕ ಸಮೀಕ್ಷೆ ನಡೆಸಿ ಸಾವಿರಾರು ಚದರ ಕಿಲೋಮೀಟರ್ ಪ್ರದೇಶವನ್ನು ವರದಿಯಿಂದ ಮುಕ್ತಗೊಳಿಸಿದಂತೆ ಕರ್ನಾಟಕದಲ್ಲೂ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.

ಮಲೆನಾಡು-ಕರಾವಳಿ ಪ್ರದೇಶವನ್ನು ವಿಶೇಷ ಕೃಷಿ ವಲಯವೆಂದು ಘೋಷಿಸಿ, ನದಿಗಳಿಗೆ ಮೀಸಲು ಜಲ ಪ್ರಮಾಣ ನಿಗದಿ ಮಾಡಬೇಕು ಎಂದು ಸಲಹೆ ನೀಡಿದರು.

Tags: amironews

Subscribe Now and Never Miss an Update!

Unsubscribe
  • Trending
  • Comments
  • Latest

ಮಳೆ ವೇಳೆ ರಸ್ತೆಗೆ ಡಾಂಬರು ಹಾಕಲು ವೆಟ್ ಮಿಕ್ಸಿಂಗ್ ವಿಧಾನ ಬಳಕೆ: ಡಿಸಿಎಂ ಡಿ.ಕೆ.ಶಿವಕುಮಾರ್

4

ಬುಲ್ಸ್‌ಗೆ ಸವಾಲಾಗದ ಬೆಂಗಾಲ್‌ಅಲಿರೇಜಾ ಮತ್ತೊಮ್ಮೆ ಮಿಂಚು; ವಾರಿಯರ್ಸ್‌ ವಿರುದ್ಧ 43-32 ಅಂತರದ ಭರ್ಜರಿ ಗೆಲುವು

4

ಭಾರತ vs ಇಂಗ್ಲೆಂಡ್ 3ನೇ ಏಕದಿನ: 142 ರನ್ ಭರ್ಜರಿ ಜಯ, 3-0 ಸರಣಿ ಕ್ಲೀನ್ ಸ್ವೀಪ್!

2

ಚಾಮರಾಜನಗರದ ಬೇಗೂರಿನಲ್ಲಿ “ಸ್ವಸ್ಥ ನಾರಿ ಸಶಕ್ತ ಪರಿವಾರ” ಅಭಿಯಾನದ ಸಮಾರೋಪ ಸಮಾರಂಭ

2

ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಹುಬ್ಬಳ್ಳಿಗೆ ಭೇಟಿ

September 19, 2026

ಕಸ್ತೂರಿರಂಗನ್ ವರದಿ: ರೈತರ ಬದುಕು ಉಳಿಸಲು ಕೆಲಸ ಮಾಡುತ್ತೇವೆ ಎಂದು ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

September 19, 2026

ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ

September 19, 2026

ಅನಂತ್ ನಾಗ್‌ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ: ಕೇಂದ್ರ ಸಚಿವ ಸೋಮಣ್ಣರಿಂದ ಅಭಿನಂದನೆ

September 19, 2026

Recent News

ಡಾ. ಅನಂತನಾಗ್‌ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ: ಡಾ. ಉಮಾಶ್ರೀ ಅಭಿನಂದನೆ

September 17, 2026

ಬಿ.ಕೆ. ಹರಿಪ್ರಸಾದ್ ಅವರ ಉಮರ್ ಖಾಲಿದ್ ಹೇಳಿಕೆಗೆ ಅಶ್ವತ್‌ನಾರಾಯಣ್, ಬೊಮ್ಮಾಯಿ ಗುಡುಗು

September 17, 2026

ರೇಷನ್ ಕಾರ್ಡ್ ಇ-ಕೆವೈಸಿ ಗಡುವು ಅಕ್ಟೋಬರ್ 20ರವರೆಗೆ ವಿಸ್ತರಣೆ: ಆಹಾರ ಇಲಾಖೆ ಆದೇಶ

September 17, 2026

ಮಂಗಳೂರು ನಗರಾಭಿವೃದ್ಧಿ ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಿ: ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ

September 17, 2026
https://play.google.com/store/apps/details?id=com.ktplamiro.news https://play.google.com/store/apps/details?id=com.ktplamiro.news https://play.google.com/store/apps/details?id=com.ktplamiro.news
  • Home
  • Privacy Policy
  • About Us
  • Advertise with us
  • Contact Us
Whatesapp +8050611655

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.

Welcome Back!

Login to your account below

Forgotten Password? Sign Up

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In
No Result
View All Result
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.