ವಿವಾಹಿತ ಮಹಿಳೆ ಅನುಮಾನಾಸ್ಪದವಾಗಿ ಸಾವಿಗಿಡಾಗಿರುವ ಘಟನೆ ಹಾಸನ ಜಿಲ್ಲೆಯ ಆಲೂರು ತಾಲೂಕಿನ ತಿಪ್ಪನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಪತಿಯೇ ಕೊಲೆ ಮಾಡಿದ್ದಾರೆಂದು ಮೃತ ಮಹಿಳೆಯ ಪೋಷಕರ ಆರೋಪ ಮಾಡಿ ಆಸ್ಪತ್ರೆ ಎದುರು ಮೃತ ಮಹಿಳೆಯ ಶವವಿಟ್ಟುಕೊಂಡು ಪ್ರತಿಭಟನೆಗೆ ಮುಂದಾಗಿದ್ದರು. ಮನೆಯಿಂದ ಕಾಣಿಯಾಗಿದ್ದ ಸಾಕಮ್ಮ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
37ವರ್ಷದ ಸಾಕಮ್ಮ ಅನುಮಾನಾಸ್ಪದವಾಗಿ ಮೃತಪಟ್ಟ ಮಹಿಳೆಯಾಗಿದ್ದು, ಪತಿ ಮಂಜುನಾಥ್ ವಿರುದ್ದ ಮೃತ ಪಟ್ಟ ಮಹಿಳೆಯ ಪೋಷಕರು ಆರೋಪ ಮಾಡುತ್ತಿದ್ದಾರೆ. ಕಳೆದು 18ವರ್ಷಗಳ ಹಿಂದೆ ಇವರಿಬ್ಬರು ಲವ್ ಮ್ಯಾರೇಜ್ ಆಗಿದ್ದು, ಮನೆಯಲ್ಲಿ ಪತ್ನಿ ಜೊತೆ ಜಗಳವಾಡಿ ಮಂಜುನಾಥ್ ಹಲ್ಲೆ ಮಾಡಿದ್ದಾನೆ ಎಂದು ಪೋಷಕರು ಆರೋಪ ಮಾಡುತ್ತಿದ್ದಾರೆ.
ಪತಿ ಮಂಜುನಾಥ್ ತಮ್ಮ ಮಗಳನ್ನು ಕೊಲೆ ಮಾಡಿ ಶವವನ್ನು ಕೆರೆಗೆ ಬಿಸಾಡಿದ್ದಾರೆ ಎಂದು ಆರೋಪಿಸಿದ ಪೋಷಕರು, ಮಂಜುನಾಥ್ನನ್ನು ಬಂಧಿಸಬೇಕೆಂದು ಒತ್ತಾಯಿಸಿ ಆಲೂರು ತಾಲ್ಲೂಕು ಆಸ್ಪತ್ರೆ ಎದುರು ಶವವಿಟ್ಟು ಪ್ರತಿಭಟನೆ ನಡೆಸಿದರು, ಸ್ಥಳಕ್ಕೆ ಆಲೂರು ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.